ಸ್ವಾಮಿ ವಿವೇಕಾನಂದರು ಇಡೀ ಜಗತ್ತು ಕಂಡ ಶ್ರೇಷ್ಠ ತತ್ವಜ್ಞಾನಿ, ಧೀರ ಸನ್ಯಾಸಿ. ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತವನ್ನು ಅಜ್ಞಾನ, ಅಂಧಕಾರ, ಮೂಢನಂಬಿಕೆಯಿಂದ ಕೂಡಿದ ದೇಶವೆಂದು ಹೀಗೆಳೆಯುವಾಗ, ಜ್ಞಾನ, ಆಧ್ಯಾತ್ಮ ಚಿಂತನೆ ಮತ್ತು ಸಂಸ್ಕೃತಿಯಲ್ಲಿ ಎಲ್ಲಾ ದೇಶಗಳನ್ನು ಮೀರಿಸುವ ಶಕ್ತಿ ಭಾರತಕ್ಕಿದೆ ಎಂದು ಸಾಬೀತುಪಡಿಸಿ ಇಡೀ ಜಗತ್ತು ಭಾರತದ ಕಡೆ ಹೆಮ್ಮೆಯಿಂದ ನೋಡುವಂತ ಮಾಡಿದ ದಾರ್ಶನಿಕರು ಸ್ವಾಮಿ ವಿವೇಕಾನಂದರು ಎಂದು ಎಂ.ಎಸ್.ವಿ ಪಬ್ಲಿಕ್ ಶಾಲೆಯ ಸಂಸ್ಥಾಪಕರಾದ ಎ. ಸುಬ್ರಮಣ್ಯ ಹೇಳಿದರು.
ನಗರದ ಎಂ.ಎಸ್.ವಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರದಂದು ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಿ ಮಾತನಾಡಿದ ಅವರು, ಮಹಾತ್ಮರ ಚಿಂತನೆಗಳು ನಮಗೆ ಆದರ್ಶಪ್ರಾಯವಾಗಬೇಕು. ಭಾರತದಲ್ಲಿ ಯುವಕರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಎಲ್ಲರೂ ಅಳವಡಿಸಿಕೊಳ್ಳುವುದರ ಮೂಲಕ ಭಾರತ ವಿಶ್ವಗುರುವಾಗುವ ನಿಟ್ಟಿನಲ್ಲಿ ತಾವೆಲ್ಲಾ ಶ್ರದ್ಧೆ, ನಿಷ್ಠೆಯಿಂದ ವಿದ್ಯಾರ್ಜನೆ ಮಾಡಬೇಕೆಂದು ಹಿತವಚನ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಂದ ಭಾಷಣ, ಪ್ರತಿಜ್ಞಾವಿಧಿ ಬೋಧನೆ, ಹಾಡು ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಶಾಲೆಯ ಕಾರ್ಯದರ್ಶಿಗಳಾದ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್ ಎಸ್, ಟ್ರಸ್ಟಿ ನಯನಾ ಸ್ವರೂಪ್, ಪ್ರಾಂಶುಪಾಲೆ ರೆಮ್ಯಾ ಬಿ.ವಿ, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…