ಸ್ವಾಮಿ ವಿವೇಕಾನಂದರು ಯುವಜನತೆಗೆ ಸ್ಫೂರ್ತಿ- ಎಂ.ಆರ್.ಶ್ರೀನಿವಾಸ್

ಸ್ವಾಮಿ ವಿವೇಕಾನಂದರು ಪಶ್ಚಿಮ ರಾಷ್ಟ್ರಗಳಿಗೆ ವೇದಾಂತದ ಹಿಂದು ತತ್ವಗಳನ್ನು ಮತ್ತು ಯೋಗವನ್ನು ಪರಿಚಯಿಸಿದ ಪ್ರಮುಖರಲ್ಲಿ ಅಗ್ರಗಣ್ಯರಾಗಿ ನಿಲ್ಲುತ್ತಾರೆ ಎಂದು ಲಯನ್ಸ್ ಕ್ಲಬ್ ನ ವಲಯ ಅಧ್ಯಕ್ಷರಾದ ಎಂ.ಆರ್ .ಶ್ರೀನಿವಾಸ ಅವರು ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಮತ್ತು ಅಕ್ಷಯ ಲಿಯೋ ಕ್ಲಬ್ ನ ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೇ ಪ್ರಪಂಚದ ಇತರೆ ದೇಶಗಳಿಗೂ ಸಹ ಅವರ ತತ್ವಗಳು, ಯುವ ಜನತೆಗೆ ನೀಡಿದ ಸ್ಫೂರ್ತಿಯ ಕರೆಗಳು,  ಯುವಜನತೆಗೆ ನೀಡಿದ ಅವರ ಕರೆ ‘ಏಳಿ.. ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂಬುದು ಸರ್ವ ಕಾಲಕ್ಕೂ ನೆನೆಯುವ, ಯುವಕರನ್ನು ಒಳ್ಳೆಯ ಕೆಲಸಗಳಿಗೆ ಬಡಿದೆಚ್ಚರ ಮಾಡುವ ಸಾಲುಗಳು ಎಂದರು.

ಆರ್.ಎಲ್.ಜಾಲಪ್ಪ ಕ್ಯಾಂಪಸ್ ನ ಲಯನ್ಸ ಕ್ಲಬ್ ನ ಅಧ್ಯಕ್ಷರಾದ ಶ್ರೀನಿವಾಸ ರೆಡ್ಡಿ ಮಾತನಾಡಿ, ಸ್ವಾಮಿ ವಿವೇಕಾನಂದರ  ಕೊಡುಗೆ, ಸೇವೆಗಳ ನೆನಪಿಗಾಗಿ, ಅವರಿಂದ ಸದಾ ಸ್ಫೂರ್ತಿಯಾಗಿರಲು ಅವರ ಜನ್ಮ ದಿನವನ್ನು ‘ರಾಷ್ಟ್ರೀಯ ಯುವ ದಿನ’  ಎಂದು ಆಚರಣೆ ಮಾಡಲಾಗುತ್ತದೆ, ಪ್ರಪಂಚದ ಪ್ರಮುಖ ಧರ್ಮಗಳ ಪೈಕಿ ಹಿಂದು ಧರ್ಮವು ಒಂದು ಶ್ರೇಷ್ಠ ಧರ್ಮ ಎಂಬ ಭಾವನೆ ಮೂಡಿಸಿದವರಲ್ಲಿ  ವಿವೇಕಾನಂದರ ಪಾತ್ರ ಹಿರಿದು  ಎಂದರು.

ಆರ್ .ಎಲ್ .ಜಾಲಪ್ಪ ಕ್ಯಾಂಪಸ್ ನ  ಲಯನ್ಸ್ ಕ್ಲಬ್ ನ ಉಪಾಧ್ಯಕ್ಷರಾದ ಜೆ. ರಾಕೇಶ್ ಮಾತನಾಡಿ, ವಿವೇಕಾನಂದರು ಹಲವಾರು ಕಷ್ಟ ಕಾರ್ಪಣ್ಯಗಳ ನಡುವೆ, ಹಲವಾರು ಸಮಸ್ಯೆಗಳನ್ನು ಎದುರಿಸಿ ಅವಕಾಶಗಳನ್ನು ಗಿಟ್ಟಿಸಿಕೊಂಡು ದೇಶಕ್ಕೆ ಮಾದರಿಯಾದಂತಹ ವ್ಯಕ್ತಿತ್ವವನ್ನು ರೂಪಿಸಿಕೊಂಡರು ಎಂದರು.

ಪ್ರಬಂಧ ಸ್ಪರ್ದೆ, ಚರ್ಚಾ ಸ್ಪರ್ಧೆ ಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ನಾಗರಾಜ, ಶ್ರೀ ದೇವರಾಜ ಅರಸ್ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ. ಚಿಕ್ಕಣ್ಣ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹಾಂತೇಶಪ್ಪ, ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಜಿಯಾವುಲ್ಲಾ ಖಾನ್, ಲಯನ್ಸ್ ಕ್ಲಬ್ ನ ಖಜಾಂಚಿ ಗಳಾದ ರವಿಕುಮಾರ್, ಅಕ್ಷಯ ಲಿಯೋ ಕ್ಲಬ್ ನ ಅಧ್ಯಕ್ಷ ಪೃಥ್ವಿ, ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬು ಸಾಬಿ, ಅಕ್ಷಯ ಲಿಯೋ ಕ್ಲಬ್ ನ ಪದಾಧಿಕಾರಿಗಳು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

10 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

21 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago