ಸ್ವಾಮಿ ವಿವೇಕಾನಂದರು ಯುವಜನತೆಗೆ ಸ್ಫೂರ್ತಿ- ಎಂ.ಆರ್.ಶ್ರೀನಿವಾಸ್

ಸ್ವಾಮಿ ವಿವೇಕಾನಂದರು ಪಶ್ಚಿಮ ರಾಷ್ಟ್ರಗಳಿಗೆ ವೇದಾಂತದ ಹಿಂದು ತತ್ವಗಳನ್ನು ಮತ್ತು ಯೋಗವನ್ನು ಪರಿಚಯಿಸಿದ ಪ್ರಮುಖರಲ್ಲಿ ಅಗ್ರಗಣ್ಯರಾಗಿ ನಿಲ್ಲುತ್ತಾರೆ ಎಂದು ಲಯನ್ಸ್ ಕ್ಲಬ್ ನ ವಲಯ ಅಧ್ಯಕ್ಷರಾದ ಎಂ.ಆರ್ .ಶ್ರೀನಿವಾಸ ಅವರು ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಮತ್ತು ಅಕ್ಷಯ ಲಿಯೋ ಕ್ಲಬ್ ನ ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೇ ಪ್ರಪಂಚದ ಇತರೆ ದೇಶಗಳಿಗೂ ಸಹ ಅವರ ತತ್ವಗಳು, ಯುವ ಜನತೆಗೆ ನೀಡಿದ ಸ್ಫೂರ್ತಿಯ ಕರೆಗಳು,  ಯುವಜನತೆಗೆ ನೀಡಿದ ಅವರ ಕರೆ ‘ಏಳಿ.. ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂಬುದು ಸರ್ವ ಕಾಲಕ್ಕೂ ನೆನೆಯುವ, ಯುವಕರನ್ನು ಒಳ್ಳೆಯ ಕೆಲಸಗಳಿಗೆ ಬಡಿದೆಚ್ಚರ ಮಾಡುವ ಸಾಲುಗಳು ಎಂದರು.

ಆರ್.ಎಲ್.ಜಾಲಪ್ಪ ಕ್ಯಾಂಪಸ್ ನ ಲಯನ್ಸ ಕ್ಲಬ್ ನ ಅಧ್ಯಕ್ಷರಾದ ಶ್ರೀನಿವಾಸ ರೆಡ್ಡಿ ಮಾತನಾಡಿ, ಸ್ವಾಮಿ ವಿವೇಕಾನಂದರ  ಕೊಡುಗೆ, ಸೇವೆಗಳ ನೆನಪಿಗಾಗಿ, ಅವರಿಂದ ಸದಾ ಸ್ಫೂರ್ತಿಯಾಗಿರಲು ಅವರ ಜನ್ಮ ದಿನವನ್ನು ‘ರಾಷ್ಟ್ರೀಯ ಯುವ ದಿನ’  ಎಂದು ಆಚರಣೆ ಮಾಡಲಾಗುತ್ತದೆ, ಪ್ರಪಂಚದ ಪ್ರಮುಖ ಧರ್ಮಗಳ ಪೈಕಿ ಹಿಂದು ಧರ್ಮವು ಒಂದು ಶ್ರೇಷ್ಠ ಧರ್ಮ ಎಂಬ ಭಾವನೆ ಮೂಡಿಸಿದವರಲ್ಲಿ  ವಿವೇಕಾನಂದರ ಪಾತ್ರ ಹಿರಿದು  ಎಂದರು.

ಆರ್ .ಎಲ್ .ಜಾಲಪ್ಪ ಕ್ಯಾಂಪಸ್ ನ  ಲಯನ್ಸ್ ಕ್ಲಬ್ ನ ಉಪಾಧ್ಯಕ್ಷರಾದ ಜೆ. ರಾಕೇಶ್ ಮಾತನಾಡಿ, ವಿವೇಕಾನಂದರು ಹಲವಾರು ಕಷ್ಟ ಕಾರ್ಪಣ್ಯಗಳ ನಡುವೆ, ಹಲವಾರು ಸಮಸ್ಯೆಗಳನ್ನು ಎದುರಿಸಿ ಅವಕಾಶಗಳನ್ನು ಗಿಟ್ಟಿಸಿಕೊಂಡು ದೇಶಕ್ಕೆ ಮಾದರಿಯಾದಂತಹ ವ್ಯಕ್ತಿತ್ವವನ್ನು ರೂಪಿಸಿಕೊಂಡರು ಎಂದರು.

ಪ್ರಬಂಧ ಸ್ಪರ್ದೆ, ಚರ್ಚಾ ಸ್ಪರ್ಧೆ ಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ನಾಗರಾಜ, ಶ್ರೀ ದೇವರಾಜ ಅರಸ್ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ. ಚಿಕ್ಕಣ್ಣ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹಾಂತೇಶಪ್ಪ, ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಜಿಯಾವುಲ್ಲಾ ಖಾನ್, ಲಯನ್ಸ್ ಕ್ಲಬ್ ನ ಖಜಾಂಚಿ ಗಳಾದ ರವಿಕುಮಾರ್, ಅಕ್ಷಯ ಲಿಯೋ ಕ್ಲಬ್ ನ ಅಧ್ಯಕ್ಷ ಪೃಥ್ವಿ, ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬು ಸಾಬಿ, ಅಕ್ಷಯ ಲಿಯೋ ಕ್ಲಬ್ ನ ಪದಾಧಿಕಾರಿಗಳು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

7 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

7 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

19 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

22 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago