ದೊಡ್ಡಬಳ್ಳಾಪುರ: ಕಾಲೇಜುಗಳಲ್ಲಿ ಉದ್ಯೋಗ ಮೇಳಗಳು ನಡೆಸುವುದರಿಂದ ಗ್ರಾಮೀಣ ಪ್ರದೇಶದ ಬಡ ಮಕ್ಕಳ ಸ್ವಾಲಂಬಿ ಬದುಕಿಗೆ ದಾರಿ ತೋರಿಸಿದಂತಾಗುತ್ತದೆ ಮತ್ತು ನಿರುದ್ಯೋಗ ಸಮಸ್ಯೆ ನಿವಾರಣೆಗೂ ಸಹಕಾರಿಯಾಗುತ್ತದೆ ಎಂದು ಗೌರ್ನಿಂಗ್ ಕೌನ್ಸಿಲ್ ನ ಸದಸ್ಯರಾದ ಜೆ.ರಾಕೇಶ್ ಹೇಳಿದರು.
ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಉದ್ಯೋಗ ಮತ್ತು ತರಬೇತಿ ವಿಭಾಗ ಮತ್ತು ವೃಕ್ಷ ಆರ್ಗ್ಯಾನಿಕ್ ಇವರ ಸಹಯೋಗದಲ್ಲಿ ಉದ್ಯೋಗ ಮೇಳ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಉದ್ಯೋಗ ಮೇಳಗಳನ್ನು ಕಾಲೇಜುಗಳಲ್ಲಿ ನಡೆಸುವುದರಿಂದ ಗ್ರಾಮೀಣ ಬಡ ಮಕ್ಕಳಿಗೆ ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ ಅಲ್ಲದೆ ಅವರ ಬದುಕು ಹಸನಾಗಲು ನೆರವಾದ ತೃಪ್ತಿಯು ಸಿಗುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಗೌರಪ್ಪ ಮಾತನಾಡಿ ಉದ್ಯೋಗ ಆಧಾರಿತ ಶಿಕ್ಷಣ ಪದ್ಧತಿ ಇಂದಿನ ಅಗತ್ಯವಾಗಿದೆ, ಇಂಜಿನಿಯರಿಂಗ್, ಡಿಪ್ಲೋಮೋ ಮಾಡಿದ ವಿದ್ಯಾರ್ಥಿಗಳಿಗೆ ಮಾತ್ರವೇ ಉದ್ಯೋಗ ಮೇಳಗಳು ಎಂಬ ಭಾವನೆ ಇಂದಿಗೂ ಇದೆ, ಆದರೆ ಪದವಿ ಶಿಕ್ಷಣ ಮುಗಿಸಿದವರಿಗೂ ಉದ್ಯೋಗ ಮೇಳಗಳು ನಡೆಸುವ ಮೂಲಕ ಪದವಿ ಶಿಕ್ಷಣಕ್ಕೂ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವೃಕ್ಷ ಆರ್ಗ್ಯಾನಿಕ್ ಕಂಪನಿಯ ರಾಹುಲ್, ಶ್ರೇಯಸ್,ಮೋಹಿತ್ ಕಾಲೇಜಿನ ಉಪ ಪ್ರಾಂಶುಪಾಲರಾದ ಕೆ.ದಕ್ಷಿಣಮೂರ್ತಿ, ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬುಸಾಬಿ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಿ.ಪಿ ಪ್ರಕಾಶ್, ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಚೈತ್ರ, ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರುಗಳಾದ ಅಲ್ಲಾಭಕಾಶ್, ಮಧುಶ್ರೀ, ನಂದನ ಪ್ರಾಧ್ಯಾಪಕರಾದ ದಿವ್ಯ, ಕಿರಣ್ ಆದೇಶ್, ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…