‘ಸ್ವಿಂಗರ್ಸ್’ ಹೆಸರಿನಲ್ಲಿ ನಡೀತಿದೆ ಕರಾಳ ದಂಧೆ: ಪಾರ್ಟಿ ಹೆಸರಲ್ಲಿ ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್…?: ಕರಾಳ ದಂಧೆ ನಡೆಸುತ್ತಿದ್ದ ಕಾಮುಕರ ಬಂಧನ

ಸಾಮಾನ್ಯವಾಗಿ ಸ್ನೇಹಿತರ ಬಳಿ ತಮ್ಮ ತಮ್ಮ ಕಷ್ಟ ಸುಖಗಳು, ದುಖಃ ದುಮ್ಮಾನಗಳು, ಸಂತೋಷಗಳನ್ನು ಪರಸ್ಪರ ಹಂಚಿಕೊಳ್ಳುವುದನ್ನು ನೋಡಿದ್ದೇವೆ. ಇನ್ನೂ ಸ್ನೇಹಿತರು, ಪ್ರಿಯಕರ ಅಂದಾಗ ಅಲ್ಲಿ ಇಲ್ಲಿ ಸುತ್ತಾಡೋದು, ಸಂತೋಷ, ದುಖಃವಾದಾಗ, ಬರ್ತಡೆ ಇದ್ದಾಗ ಪಾರ್ಟಿ ಮಾಡೋದು ಸಹಜ. ಆದ್ರೆ, ಬೆಂಗಳೂರಿನಲ್ಲಿ ಈ ಪಾರ್ಟಿ ತಮ್ಮ ತಮ್ಮ ಗರ್ಲ್‌‌ಫ್ರೆಂಡ್‌ಗಳನ್ನೇ ಎಕ್ಸ್‌ಚೇಂಜ್‌ ಮಾಡೋ ಮಟ್ಟಿಗೆ ತಲುಪಿದೆ.

ಯುವತಿಯನ್ನ ಸ್ನೇಹಿತನ ಜೊತೆಗೆ ಸಹಕರಿಸುವಂತೆ ಬಲವಂತವಾಗಿ ಒತ್ತಾಯಿಸಿರುವ ಆರೋಪ ಕೇಳಿಬಂದಿದೆ. ಒಪ್ಪದಿದ್ದ ಕಾರಣಕ್ಕೆ ಪರಿಚಯಸ್ಥ ಯುವತಿಯನ್ನು ಸ್ನೇಹಿತನೊಬ್ಬ ತನ್ನ ಇತರ ಫ್ರೆಂಡ್ಸ್‌ ಜೊತೆ ಸೇರಿಕೊಂಡು ಅತ್ಯಾಚಾರ ಮಾಡಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಸದ್ಯ ಕರಾಳ ದಂಧೆ ನಡೆಸುತ್ತಿದ್ದ ಆರೋಪಿಗಳಾದ ಹರೀಶ್ ಮತ್ತು ಹೇಮಂತ್ ಎಂಬವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ಎನ್ನಲಾಗಿದೆ.

ಅಸಲಿಗೆ ಹರೀಶ್ ಎಂಬಾತ ಈ ನೊಂದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆರಂಭದಲ್ಲಿ ಆಕೆ ಮತ್ತು ಹರೀಶ್‌ ಜೋಡಿ ಹಕ್ಕಿಯಂತೆ ಎಲ್ಲಾ ಕಡೆ ಸುತ್ತಾಡಿದ್ದಲ್ಲದೇ, ಆತ ಲೈಂಗಿಕವಾಗಿಯೂ ಬಳಸಿಕೊಂಡಿದ್ದಾನೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಬರಬರುತ್ತಾ ಹರೀಶ್ ತನ್ನ ಅಸಲು ಮುಖ ತೋರಿಸಿದ್ದಾನೆ.

ವಾಟ್ಸಾಪ್‌‌ ಗ್ರೂಪ್ ಒಂದನ್ನು ‘ಸ್ವಿಂಗರ್ಸ್’ ಟೀಂ ಎಂದು ಮಾಡಿಕೊಂಡಿತ್ತು. ಇದರಲ್ಲಿ ಹರೀಶ್ ಕೂಡಾ ಇದ್ದ ಎನ್ನಲಾಗಿದೆ. ಇನ್ನು ಈ ಗ್ರೂಪ್‌ ಬೆಂಗಳೂರು ಹೊರ ವಲಯದಲ್ಲಿ ಪಾರ್ಟಿ ಆಯೋಜನೆ ಮಾಡುತ್ತಿತ್ತು. ಈ ಪಾರ್ಟಿಯಲ್ಲಿ ಹರೀಶ್ ಮತ್ತು ಹೇಮಂತ್ ಇಬ್ಬರೂ ಬರುತ್ತಿದ್ದರು. ಅಲ್ಲದೆ ಹುಡುಗಿಯರನ್ನು ಕರೆದುಕೊಂಡು ಬಂದು ಇಲ್ಲಿ ಪರಸ್ಪರ ಎಕ್ಸ್‌ಚೇಂಜ್ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಇಲ್ಲಿ ಗರ್ಲ್‌ಫ್ರೆಂಡ್‌ ಎಕ್ಸ್‌ಚೇಂಜ್‌, ಪಾರ್ಟಿಗೆ ಮಾತ್ರ ಸೀಮಿತವಾಗಿರಲಿಲ್ಲ, ಬದಲಿಗೆ ಒಬ್ಬನ ಗರ್ಲ್‌‌ಫ್ರೆಂಡ್‌ ಇಲ್ಲಿ ಮತ್ತೊಬ್ಬನ ಜೊತೆ ಬೆಡ್‌ ಶೇರ್‌ ಮಾಡಬೇಕಿತ್ತು.

ಇದೇ ರೀತಿ ಹರೀಶ್‌ ಎಂಬಾತ ತನ್ನ ಸ್ನೇಹಿತೆಯನ್ನ ಇನ್ನೊಬ್ಬನೊಂದಿಗೆ ಸಹಕರಿಸುವಂತೆ ಹೇಳಿದ್ದಾನೆ ಎಂದು ಹೇಳಲಾಗಿದೆ. ಆದ್ರೆ ಇದನ್ನು ನಿರಾಕರಿಸಿದ ಯುವತಿಯನ್ನ, ತನ್ನ ಸ್ನೇಹಿತೆ ಅಂತಾನೂ ನೋಡದೆ ಬೇರೆ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಮಾಡಿದ್ದಾನೆಂದು ಯುವತಿ ಆರೋಪಿಸಿದ್ದಾಳೆ ಎನ್ನಲಾಗಿದೆ.

ಇನ್ನು ಈ ವಿಷಯದಿಂದ ಬೇಸತ್ತ ಯುವತಿ ಸಿಸಿಬಿಗೆ ದೂರು ನೀಡಿದ್ದಾಳೆ. ತಕ್ಷಣ ಎಚ್ಚೆತ್ತ ಪೊಲೀಸರು ಹರೀಶ್ ಮತ್ತು ಹೇಮಂತ್‌ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ತನಿಖೆ ನಡೆಸುತ್ತಿದ್ದು, ಈ ವೇಳೆ ಮೊಬೈಲ್‌ನಲ್ಲಿ ಹತ್ತಾರು ಯುವತಿಯರ ಬೆತ್ತಲೆ ಫೋಟೊ ಪತ್ತೆಯಾಗಿದೆ ಎನ್ನಲಾಗಿದೆ. ಅಲ್ಲದೇ ಹುಡುಗಿಯರು ಏಕಾಂತದಲ್ಲಿದ್ದ ವಿಡಿಯೋ ಮಾಡಿಟ್ಟುಕೊಂಡು, ಅದನ್ನೇ ತೋರಿಸಿ ಬ್ಲ್ಯಾಕ್‌‌ ಮೇಲ್ ಮಾಡ್ತಿರೋದಾಗಿಯು ತಿಳಿದುಬಂದಿದೆ.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

20 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago