‘ಸ್ವಿಂಗರ್ಸ್’ ಹೆಸರಿನಲ್ಲಿ ನಡೀತಿದೆ ಕರಾಳ ದಂಧೆ: ಪಾರ್ಟಿ ಹೆಸರಲ್ಲಿ ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್…?: ಕರಾಳ ದಂಧೆ ನಡೆಸುತ್ತಿದ್ದ ಕಾಮುಕರ ಬಂಧನ

ಸಾಮಾನ್ಯವಾಗಿ ಸ್ನೇಹಿತರ ಬಳಿ ತಮ್ಮ ತಮ್ಮ ಕಷ್ಟ ಸುಖಗಳು, ದುಖಃ ದುಮ್ಮಾನಗಳು, ಸಂತೋಷಗಳನ್ನು ಪರಸ್ಪರ ಹಂಚಿಕೊಳ್ಳುವುದನ್ನು ನೋಡಿದ್ದೇವೆ. ಇನ್ನೂ ಸ್ನೇಹಿತರು, ಪ್ರಿಯಕರ ಅಂದಾಗ ಅಲ್ಲಿ ಇಲ್ಲಿ ಸುತ್ತಾಡೋದು, ಸಂತೋಷ, ದುಖಃವಾದಾಗ, ಬರ್ತಡೆ ಇದ್ದಾಗ ಪಾರ್ಟಿ ಮಾಡೋದು ಸಹಜ. ಆದ್ರೆ, ಬೆಂಗಳೂರಿನಲ್ಲಿ ಈ ಪಾರ್ಟಿ ತಮ್ಮ ತಮ್ಮ ಗರ್ಲ್‌‌ಫ್ರೆಂಡ್‌ಗಳನ್ನೇ ಎಕ್ಸ್‌ಚೇಂಜ್‌ ಮಾಡೋ ಮಟ್ಟಿಗೆ ತಲುಪಿದೆ.

ಯುವತಿಯನ್ನ ಸ್ನೇಹಿತನ ಜೊತೆಗೆ ಸಹಕರಿಸುವಂತೆ ಬಲವಂತವಾಗಿ ಒತ್ತಾಯಿಸಿರುವ ಆರೋಪ ಕೇಳಿಬಂದಿದೆ. ಒಪ್ಪದಿದ್ದ ಕಾರಣಕ್ಕೆ ಪರಿಚಯಸ್ಥ ಯುವತಿಯನ್ನು ಸ್ನೇಹಿತನೊಬ್ಬ ತನ್ನ ಇತರ ಫ್ರೆಂಡ್ಸ್‌ ಜೊತೆ ಸೇರಿಕೊಂಡು ಅತ್ಯಾಚಾರ ಮಾಡಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಸದ್ಯ ಕರಾಳ ದಂಧೆ ನಡೆಸುತ್ತಿದ್ದ ಆರೋಪಿಗಳಾದ ಹರೀಶ್ ಮತ್ತು ಹೇಮಂತ್ ಎಂಬವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ಎನ್ನಲಾಗಿದೆ.

ಅಸಲಿಗೆ ಹರೀಶ್ ಎಂಬಾತ ಈ ನೊಂದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆರಂಭದಲ್ಲಿ ಆಕೆ ಮತ್ತು ಹರೀಶ್‌ ಜೋಡಿ ಹಕ್ಕಿಯಂತೆ ಎಲ್ಲಾ ಕಡೆ ಸುತ್ತಾಡಿದ್ದಲ್ಲದೇ, ಆತ ಲೈಂಗಿಕವಾಗಿಯೂ ಬಳಸಿಕೊಂಡಿದ್ದಾನೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಬರಬರುತ್ತಾ ಹರೀಶ್ ತನ್ನ ಅಸಲು ಮುಖ ತೋರಿಸಿದ್ದಾನೆ.

ವಾಟ್ಸಾಪ್‌‌ ಗ್ರೂಪ್ ಒಂದನ್ನು ‘ಸ್ವಿಂಗರ್ಸ್’ ಟೀಂ ಎಂದು ಮಾಡಿಕೊಂಡಿತ್ತು. ಇದರಲ್ಲಿ ಹರೀಶ್ ಕೂಡಾ ಇದ್ದ ಎನ್ನಲಾಗಿದೆ. ಇನ್ನು ಈ ಗ್ರೂಪ್‌ ಬೆಂಗಳೂರು ಹೊರ ವಲಯದಲ್ಲಿ ಪಾರ್ಟಿ ಆಯೋಜನೆ ಮಾಡುತ್ತಿತ್ತು. ಈ ಪಾರ್ಟಿಯಲ್ಲಿ ಹರೀಶ್ ಮತ್ತು ಹೇಮಂತ್ ಇಬ್ಬರೂ ಬರುತ್ತಿದ್ದರು. ಅಲ್ಲದೆ ಹುಡುಗಿಯರನ್ನು ಕರೆದುಕೊಂಡು ಬಂದು ಇಲ್ಲಿ ಪರಸ್ಪರ ಎಕ್ಸ್‌ಚೇಂಜ್ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಇಲ್ಲಿ ಗರ್ಲ್‌ಫ್ರೆಂಡ್‌ ಎಕ್ಸ್‌ಚೇಂಜ್‌, ಪಾರ್ಟಿಗೆ ಮಾತ್ರ ಸೀಮಿತವಾಗಿರಲಿಲ್ಲ, ಬದಲಿಗೆ ಒಬ್ಬನ ಗರ್ಲ್‌‌ಫ್ರೆಂಡ್‌ ಇಲ್ಲಿ ಮತ್ತೊಬ್ಬನ ಜೊತೆ ಬೆಡ್‌ ಶೇರ್‌ ಮಾಡಬೇಕಿತ್ತು.

ಇದೇ ರೀತಿ ಹರೀಶ್‌ ಎಂಬಾತ ತನ್ನ ಸ್ನೇಹಿತೆಯನ್ನ ಇನ್ನೊಬ್ಬನೊಂದಿಗೆ ಸಹಕರಿಸುವಂತೆ ಹೇಳಿದ್ದಾನೆ ಎಂದು ಹೇಳಲಾಗಿದೆ. ಆದ್ರೆ ಇದನ್ನು ನಿರಾಕರಿಸಿದ ಯುವತಿಯನ್ನ, ತನ್ನ ಸ್ನೇಹಿತೆ ಅಂತಾನೂ ನೋಡದೆ ಬೇರೆ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಮಾಡಿದ್ದಾನೆಂದು ಯುವತಿ ಆರೋಪಿಸಿದ್ದಾಳೆ ಎನ್ನಲಾಗಿದೆ.

ಇನ್ನು ಈ ವಿಷಯದಿಂದ ಬೇಸತ್ತ ಯುವತಿ ಸಿಸಿಬಿಗೆ ದೂರು ನೀಡಿದ್ದಾಳೆ. ತಕ್ಷಣ ಎಚ್ಚೆತ್ತ ಪೊಲೀಸರು ಹರೀಶ್ ಮತ್ತು ಹೇಮಂತ್‌ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ತನಿಖೆ ನಡೆಸುತ್ತಿದ್ದು, ಈ ವೇಳೆ ಮೊಬೈಲ್‌ನಲ್ಲಿ ಹತ್ತಾರು ಯುವತಿಯರ ಬೆತ್ತಲೆ ಫೋಟೊ ಪತ್ತೆಯಾಗಿದೆ ಎನ್ನಲಾಗಿದೆ. ಅಲ್ಲದೇ ಹುಡುಗಿಯರು ಏಕಾಂತದಲ್ಲಿದ್ದ ವಿಡಿಯೋ ಮಾಡಿಟ್ಟುಕೊಂಡು, ಅದನ್ನೇ ತೋರಿಸಿ ಬ್ಲ್ಯಾಕ್‌‌ ಮೇಲ್ ಮಾಡ್ತಿರೋದಾಗಿಯು ತಿಳಿದುಬಂದಿದೆ.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

1 hour ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

12 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

13 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

18 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

20 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

23 hours ago