‘ಸ್ವಿಂಗರ್ಸ್’ ಹೆಸರಿನಲ್ಲಿ ನಡೀತಿದೆ ಕರಾಳ ದಂಧೆ: ಪಾರ್ಟಿ ಹೆಸರಲ್ಲಿ ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್…?: ಕರಾಳ ದಂಧೆ ನಡೆಸುತ್ತಿದ್ದ ಕಾಮುಕರ ಬಂಧನ

ಸಾಮಾನ್ಯವಾಗಿ ಸ್ನೇಹಿತರ ಬಳಿ ತಮ್ಮ ತಮ್ಮ ಕಷ್ಟ ಸುಖಗಳು, ದುಖಃ ದುಮ್ಮಾನಗಳು, ಸಂತೋಷಗಳನ್ನು ಪರಸ್ಪರ ಹಂಚಿಕೊಳ್ಳುವುದನ್ನು ನೋಡಿದ್ದೇವೆ. ಇನ್ನೂ ಸ್ನೇಹಿತರು, ಪ್ರಿಯಕರ ಅಂದಾಗ ಅಲ್ಲಿ ಇಲ್ಲಿ ಸುತ್ತಾಡೋದು, ಸಂತೋಷ, ದುಖಃವಾದಾಗ, ಬರ್ತಡೆ ಇದ್ದಾಗ ಪಾರ್ಟಿ ಮಾಡೋದು ಸಹಜ. ಆದ್ರೆ, ಬೆಂಗಳೂರಿನಲ್ಲಿ ಈ ಪಾರ್ಟಿ ತಮ್ಮ ತಮ್ಮ ಗರ್ಲ್‌‌ಫ್ರೆಂಡ್‌ಗಳನ್ನೇ ಎಕ್ಸ್‌ಚೇಂಜ್‌ ಮಾಡೋ ಮಟ್ಟಿಗೆ ತಲುಪಿದೆ.

ಯುವತಿಯನ್ನ ಸ್ನೇಹಿತನ ಜೊತೆಗೆ ಸಹಕರಿಸುವಂತೆ ಬಲವಂತವಾಗಿ ಒತ್ತಾಯಿಸಿರುವ ಆರೋಪ ಕೇಳಿಬಂದಿದೆ. ಒಪ್ಪದಿದ್ದ ಕಾರಣಕ್ಕೆ ಪರಿಚಯಸ್ಥ ಯುವತಿಯನ್ನು ಸ್ನೇಹಿತನೊಬ್ಬ ತನ್ನ ಇತರ ಫ್ರೆಂಡ್ಸ್‌ ಜೊತೆ ಸೇರಿಕೊಂಡು ಅತ್ಯಾಚಾರ ಮಾಡಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಸದ್ಯ ಕರಾಳ ದಂಧೆ ನಡೆಸುತ್ತಿದ್ದ ಆರೋಪಿಗಳಾದ ಹರೀಶ್ ಮತ್ತು ಹೇಮಂತ್ ಎಂಬವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ಎನ್ನಲಾಗಿದೆ.

ಅಸಲಿಗೆ ಹರೀಶ್ ಎಂಬಾತ ಈ ನೊಂದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆರಂಭದಲ್ಲಿ ಆಕೆ ಮತ್ತು ಹರೀಶ್‌ ಜೋಡಿ ಹಕ್ಕಿಯಂತೆ ಎಲ್ಲಾ ಕಡೆ ಸುತ್ತಾಡಿದ್ದಲ್ಲದೇ, ಆತ ಲೈಂಗಿಕವಾಗಿಯೂ ಬಳಸಿಕೊಂಡಿದ್ದಾನೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಬರಬರುತ್ತಾ ಹರೀಶ್ ತನ್ನ ಅಸಲು ಮುಖ ತೋರಿಸಿದ್ದಾನೆ.

ವಾಟ್ಸಾಪ್‌‌ ಗ್ರೂಪ್ ಒಂದನ್ನು ‘ಸ್ವಿಂಗರ್ಸ್’ ಟೀಂ ಎಂದು ಮಾಡಿಕೊಂಡಿತ್ತು. ಇದರಲ್ಲಿ ಹರೀಶ್ ಕೂಡಾ ಇದ್ದ ಎನ್ನಲಾಗಿದೆ. ಇನ್ನು ಈ ಗ್ರೂಪ್‌ ಬೆಂಗಳೂರು ಹೊರ ವಲಯದಲ್ಲಿ ಪಾರ್ಟಿ ಆಯೋಜನೆ ಮಾಡುತ್ತಿತ್ತು. ಈ ಪಾರ್ಟಿಯಲ್ಲಿ ಹರೀಶ್ ಮತ್ತು ಹೇಮಂತ್ ಇಬ್ಬರೂ ಬರುತ್ತಿದ್ದರು. ಅಲ್ಲದೆ ಹುಡುಗಿಯರನ್ನು ಕರೆದುಕೊಂಡು ಬಂದು ಇಲ್ಲಿ ಪರಸ್ಪರ ಎಕ್ಸ್‌ಚೇಂಜ್ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಇಲ್ಲಿ ಗರ್ಲ್‌ಫ್ರೆಂಡ್‌ ಎಕ್ಸ್‌ಚೇಂಜ್‌, ಪಾರ್ಟಿಗೆ ಮಾತ್ರ ಸೀಮಿತವಾಗಿರಲಿಲ್ಲ, ಬದಲಿಗೆ ಒಬ್ಬನ ಗರ್ಲ್‌‌ಫ್ರೆಂಡ್‌ ಇಲ್ಲಿ ಮತ್ತೊಬ್ಬನ ಜೊತೆ ಬೆಡ್‌ ಶೇರ್‌ ಮಾಡಬೇಕಿತ್ತು.

ಇದೇ ರೀತಿ ಹರೀಶ್‌ ಎಂಬಾತ ತನ್ನ ಸ್ನೇಹಿತೆಯನ್ನ ಇನ್ನೊಬ್ಬನೊಂದಿಗೆ ಸಹಕರಿಸುವಂತೆ ಹೇಳಿದ್ದಾನೆ ಎಂದು ಹೇಳಲಾಗಿದೆ. ಆದ್ರೆ ಇದನ್ನು ನಿರಾಕರಿಸಿದ ಯುವತಿಯನ್ನ, ತನ್ನ ಸ್ನೇಹಿತೆ ಅಂತಾನೂ ನೋಡದೆ ಬೇರೆ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಮಾಡಿದ್ದಾನೆಂದು ಯುವತಿ ಆರೋಪಿಸಿದ್ದಾಳೆ ಎನ್ನಲಾಗಿದೆ.

ಇನ್ನು ಈ ವಿಷಯದಿಂದ ಬೇಸತ್ತ ಯುವತಿ ಸಿಸಿಬಿಗೆ ದೂರು ನೀಡಿದ್ದಾಳೆ. ತಕ್ಷಣ ಎಚ್ಚೆತ್ತ ಪೊಲೀಸರು ಹರೀಶ್ ಮತ್ತು ಹೇಮಂತ್‌ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ತನಿಖೆ ನಡೆಸುತ್ತಿದ್ದು, ಈ ವೇಳೆ ಮೊಬೈಲ್‌ನಲ್ಲಿ ಹತ್ತಾರು ಯುವತಿಯರ ಬೆತ್ತಲೆ ಫೋಟೊ ಪತ್ತೆಯಾಗಿದೆ ಎನ್ನಲಾಗಿದೆ. ಅಲ್ಲದೇ ಹುಡುಗಿಯರು ಏಕಾಂತದಲ್ಲಿದ್ದ ವಿಡಿಯೋ ಮಾಡಿಟ್ಟುಕೊಂಡು, ಅದನ್ನೇ ತೋರಿಸಿ ಬ್ಲ್ಯಾಕ್‌‌ ಮೇಲ್ ಮಾಡ್ತಿರೋದಾಗಿಯು ತಿಳಿದುಬಂದಿದೆ.

Ramesh Babu

Journalist

Recent Posts

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

6 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

8 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

21 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

23 hours ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

1 day ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

1 day ago