ಹಂದಿ ಶೆಡ್ ನಲ್ಲಿದ್ದ ಸುಮಾರು 30‌ ಹಂದಿ ಮರಿಗಳನ್ನು ಕದ್ದೊಯ್ದ ಕಳ್ಳರು

ಹಂದಿ ಶೆಡ್ ನಲ್ಲಿದ್ದ ಸುಮಾರು 30‌ ಹಂದಿ ಮರಿಗಳನ್ನು ಕದ್ದೊಯ್ದ ಕಳ್ಳರು. ದೊಡ್ಡಬಳ್ಳಾಪುರ ತಾಲೂಕಿನ ಬೈರಸಂದ್ರ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಹಂಡಿ ಶೆಡ್ ಬಳಿ ಮಾಲೀಕರು ಹೋದ ಸಂದರ್ಭದಲ್ಲಿ ಹಂದಿ ಮರಿಗಳು ಕಳವು ಪ್ರಕರಣ ಬೆಳಕಿಗೆ ಬಂದಿದೆ.

ಕದಿಯುವ ಭರದಲ್ಲಿ ಕಳ್ಳರು ತಮ್ಮ ಜರ್ಕಿನ್ ನ್ನು ಸ್ಥಳದಲ್ಲೇ ಬಿಟ್ಟು ಹೋಗಿರುವುದು ಕಂಡುಬಂದಿದೆ.

ಬೈರಸಂದ್ರ ಗ್ರಾಮದ ದಿವಾಕರ್ ಎಂಬುವರಿಗೆ ಸೇರಿದ ಹಂದಿ ಶೆಡ್ ಇದಾಗಿದ್ದು, ಇವರು ಹಲವು ವರ್ಷಗಳಿಂದ ಊರ ಹೊರವಲಯದಲ್ಲಿ ಶೆಡ್ ಮಾಡಿಕೊಂಡು ಹಂದಿ ಸಾಕಾಣಿಕೆ ಮಾಡುತ್ತಿದ್ದರು. ಶೆಡ್ ನಲ್ಲಿ ಸುಮಾರು 100ಕ್ಕೂ ಹೆಚ್ಚು ಹಂದಿಗಳಿದ್ದವು ಎನ್ನಲಾಗಿದೆ.

ಕಳೆದ ರಾತ್ರಿ ಮಳೆಯಾಗುತ್ತಿತ್ತು, ಶೆಡ್ ಮಾಲೀಕರು ಶೆಡ್ ಬಳಿ ಇಲ್ಲದ‌ ಸಮಯದಲ್ಲಿ, ಶೆಡ್ ಬಳಿ ಬಂದ ಕಳ್ಳರು ವಾಹನದಲ್ಲಿ ಹಂದಿ ಮರಿಗಳನ್ನ ಕಳವು ಮಾಡಿದ್ದಾರೆ. ಕಳ್ಳರ ನಡೆದಾಡಿರುವ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಇದರ ಜೊತೆಗೆಯಲ್ಲಿ ಕಳ್ಳನೊಬ್ಬ ತನ್ನ ಜರ್ಕಿನ್ ಮರೆತು ಹೋಗಿದ್ದಾನೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago