ಹಂದಿ ಶೆಡ್ ನಲ್ಲಿದ್ದ ಸುಮಾರು 30 ಹಂದಿ ಮರಿಗಳನ್ನು ಕದ್ದೊಯ್ದ ಕಳ್ಳರು. ದೊಡ್ಡಬಳ್ಳಾಪುರ ತಾಲೂಕಿನ ಬೈರಸಂದ್ರ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಹಂಡಿ ಶೆಡ್ ಬಳಿ ಮಾಲೀಕರು ಹೋದ ಸಂದರ್ಭದಲ್ಲಿ ಹಂದಿ ಮರಿಗಳು ಕಳವು ಪ್ರಕರಣ ಬೆಳಕಿಗೆ ಬಂದಿದೆ.
ಕದಿಯುವ ಭರದಲ್ಲಿ ಕಳ್ಳರು ತಮ್ಮ ಜರ್ಕಿನ್ ನ್ನು ಸ್ಥಳದಲ್ಲೇ ಬಿಟ್ಟು ಹೋಗಿರುವುದು ಕಂಡುಬಂದಿದೆ.
ಬೈರಸಂದ್ರ ಗ್ರಾಮದ ದಿವಾಕರ್ ಎಂಬುವರಿಗೆ ಸೇರಿದ ಹಂದಿ ಶೆಡ್ ಇದಾಗಿದ್ದು, ಇವರು ಹಲವು ವರ್ಷಗಳಿಂದ ಊರ ಹೊರವಲಯದಲ್ಲಿ ಶೆಡ್ ಮಾಡಿಕೊಂಡು ಹಂದಿ ಸಾಕಾಣಿಕೆ ಮಾಡುತ್ತಿದ್ದರು. ಶೆಡ್ ನಲ್ಲಿ ಸುಮಾರು 100ಕ್ಕೂ ಹೆಚ್ಚು ಹಂದಿಗಳಿದ್ದವು ಎನ್ನಲಾಗಿದೆ.
ಕಳೆದ ರಾತ್ರಿ ಮಳೆಯಾಗುತ್ತಿತ್ತು, ಶೆಡ್ ಮಾಲೀಕರು ಶೆಡ್ ಬಳಿ ಇಲ್ಲದ ಸಮಯದಲ್ಲಿ, ಶೆಡ್ ಬಳಿ ಬಂದ ಕಳ್ಳರು ವಾಹನದಲ್ಲಿ ಹಂದಿ ಮರಿಗಳನ್ನ ಕಳವು ಮಾಡಿದ್ದಾರೆ. ಕಳ್ಳರ ನಡೆದಾಡಿರುವ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಇದರ ಜೊತೆಗೆಯಲ್ಲಿ ಕಳ್ಳನೊಬ್ಬ ತನ್ನ ಜರ್ಕಿನ್ ಮರೆತು ಹೋಗಿದ್ದಾನೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…