ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ದೊಡ್ಡೇರಿ ಗ್ರಾಮದ ತೋಟ ಹಾಗೂ ಕೆರೆ ಸುತ್ತಮುತ್ತಲು ನಡೆದಿದೆ.
ಕಳೆದ 3–4 ದಿನಗಳಿಂದ ನವಿಲುಗಳು ಧಿಡೀರನೆ ಸತ್ತು ಬಿದ್ದಿರುವುದು ಸ್ಥಳೀಯರ ಗಮನಕ್ಕೆ ಬಂದಿದ್ದು, ಇನ್ನೂ ಹಲವು ಮೃತ ನವಿಲುಗಳ ದೇಹಗಳು ಶ್ವಾನಗಳ ಪಾಲಾಗಿದೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಮಾಹಿತಿ ಪಡೆದ ನೆಲಮಂಗಲ ಅರಣ್ಯ ವಲಯ ಸಿಬ್ಬಂದಿ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ನವಿಲುಗಳ ದೇಹಗಳಿಂದ ಮಾದರಿಗಳನ್ನು ವೈದ್ಯರು ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಪ್ರಾಥಮಿಕವಾಗಿ ಹಕ್ಕಿಜ್ವರ ಶಂಕೆ ವ್ಯಕ್ತವಾಗಿದ್ದು, ಪ್ರಯೋಗಾಲಯದ ವರದಿ ಬಂದ ನಂತರವೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…
ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…
ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…