ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ದೊಡ್ಡೇರಿ ಗ್ರಾಮದ ತೋಟ ಹಾಗೂ ಕೆರೆ ಸುತ್ತಮುತ್ತಲು ನಡೆದಿದೆ.
ಕಳೆದ 3–4 ದಿನಗಳಿಂದ ನವಿಲುಗಳು ಧಿಡೀರನೆ ಸತ್ತು ಬಿದ್ದಿರುವುದು ಸ್ಥಳೀಯರ ಗಮನಕ್ಕೆ ಬಂದಿದ್ದು, ಇನ್ನೂ ಹಲವು ಮೃತ ನವಿಲುಗಳ ದೇಹಗಳು ಶ್ವಾನಗಳ ಪಾಲಾಗಿದೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಮಾಹಿತಿ ಪಡೆದ ನೆಲಮಂಗಲ ಅರಣ್ಯ ವಲಯ ಸಿಬ್ಬಂದಿ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ನವಿಲುಗಳ ದೇಹಗಳಿಂದ ಮಾದರಿಗಳನ್ನು ವೈದ್ಯರು ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಪ್ರಾಥಮಿಕವಾಗಿ ಹಕ್ಕಿಜ್ವರ ಶಂಕೆ ವ್ಯಕ್ತವಾಗಿದ್ದು, ಪ್ರಯೋಗಾಲಯದ ವರದಿ ಬಂದ ನಂತರವೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ…
ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…
ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…
ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…
ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…