ಹಕ್ಕಿ ಜ್ವರ ಭೀತಿ: ಜನರಿಗೆ ಜಾಗೃತಿ ಮೂಡಿಸಿ, ಕೋಳಿ ಸಾಕಾಣಿಕೆ ಮಾಲಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸಿಇಒ ಸೂಚನೆ

ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಂಡು ಬರುತ್ತಿರುವ ಹಕ್ಕಿ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಕೋಳಿ ಸಾಕಾಣಿಕೆ ಮಾಲಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಕ್ತ ನಿರ್ದೇಶನ ನೀಡಿ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ. ಕೆ.ಎನ್ ಅನುರಾಧ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂಬಂಧ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ ಒಟ್ಟು 383 ರೈತರು ಸುಮಾರು 95 ಲಕ್ಷ ಕೋಳಿಗಳನ್ನು ಸಾಕಾಣಿಕೆ ಮಾಡುತ್ತಿದ್ದು, ವಾಡಿಕೆಯ ಕಣ್ಗಾವಲು (ಪರಿಶೀಲನೆ) ಮಾಡಿದಾಗ ಯಾವುದೇ ಹಕ್ಕಿ ಜ್ವರದ ಪ್ರಕರಣಗಳು ಇದುವರೆಗೂ ಕಂಡುಬರುವುದಿಲ್ಲ. ಹಕ್ಕಿ ಜ್ವರ ಸೋಂಕು ತಗುಲಿದ ಹಕ್ಕಿಗಳ ರೆಕ್ಕೆಗಳು, ನೀರು, ಮೊಟ್ಟೆ, ಪಂಜರ ಮತ್ತು ಇತರೆ ಸಂಬಂಧಿಸಿದ ವಸ್ತುಗಳಿಂದ ಹರಡುತ್ತದೆ.

ಹಕ್ಕಿಗಳ ಚಟುವಟಿಕೆ ಮತ್ತು ಆಹಾರ ಸೇವನೆ ಕಡಿಮೆಯಾಗುವುದು ಉಸಿರು ಆಡುವಾಗ ಶಬ್ದ, ಚರ್ಮವು ನೀಲಿ ಬಣ್ಣಕ್ಕೆ ತಿರುಗುವುದು, ಅತೀ ಬೇಧಿ ಮತ್ತು ಹಕ್ಕಿಗಳು ಪೂರ್ವ ಚಿಹ್ನೆಗಳಿಲ್ಲದೆ ಸಾಯುವುದು ಪ್ರಮುಖ ಲಕ್ಷಣಗಳು. ಯಾವುದೇ ಪಕ್ಷಿಗಳು ಅಥವಾ ಕೋಳಿಗಳು ಅನುಮಾನಾಸ್ಪದವಾಗಿ, ಅಸಹಜವಾಗಿ ಇಲ್ಲವೇ ಇದ್ದಕ್ಕಿದ್ದಂತೆ ಸಾವುಗಳು ಕಂಡು ಬಂದಲ್ಲಿ ಹತ್ತಿರದ ಪಶು ಸಂಗೋಪನಾ ಇಲಾಖೆಗೆ ಮಾಹಿತಿಯನ್ನು ನೀಡಬೇಕು.

ಇದಕ್ಕಾಗಿ ಪ್ರತೀ ತಾಲ್ಲೂಕಿನಲ್ಲಿ ಆರ್.ಆರ್.ಟಿ (ಕ್ಷಿಪ್ರ ಪ್ರತಿಕ್ರಿಯೆ ತಂಡ) ರಚಿಸಿದ್ದು, ಜಿಲ್ಲೆಯಲ್ಲಿ ಒಟ್ಟು 39 ಆರ್.ಆರ್.ಟಿ ಯು ಸನ್ನದ್ಧವಾಗಿದೆ. ಪ್ರತಿ ತಂಡದಲ್ಲಿ ಒಬ್ಬ ಪಶು ವೈದ್ಯಾಧಿಕಾರಿ, ಅರೇ ತಾಂತ್ರಿಕ ಸಿಬ್ಬಂದಿ ಹಾಗೂ ಡಿ ದರ್ಜೆ ನೌಕರರು ಇರುತ್ತಾರೆ.

ಮುಖ್ಯವಾಗಿ ಕೋಳಿ ಫಾರ್ಮ್ ಗಳಿಗೆ ಹೊರಗಿನ ಪ್ರದೇಶದಿಂದ ಬರುವ ಜನರನ್ನು ಮತ್ತು ವಾಹನಗಳನ್ನು ತಾತ್ಕಾಲಿಕವಾಗಿ ಒಳಗೆ ಪ್ರವೇಶಿಸದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ.ಜಗದೀಶ್, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ತಾಲ್ಲೂಕು ಪಶುವೈದ್ಯಾದಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಚಳಿಗಾಲದ ಪಾರ್ಟಿಗಳಿಂದ ಹೊಟ್ಟೆಗೆ ಕಾಟ: ಗ್ಯಾಸ್ಟ್ರೋ ಪ್ರಕರಣಗಳಲ್ಲಿ 25% ಏರಿಕೆ

ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…

2 hours ago

ಕೇರಳದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರು….

ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್‌ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…

5 hours ago

ಮಡಿಕೇರಿ ಹನಿ ಟ್ರ್ಯಾಪ್ ಪ್ರಕರಣ: ಬಲೆಗೆ ಬಿದ್ದರಾ ಗಣ್ಯರು?

ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…

5 hours ago

ನೇಣಿಗೆ ಶರಣಾಗಿರೋ ವ್ಯಕ್ತಿ

ಮನನೊಂದ ವ್ಯಕ್ತಿಯೋರ್ವ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುಕ್ತಾಂಭಿಕಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಸುಮಾರು 10ಗಂಟೆಯಲ್ಲಿ ನಡೆದಿದೆ....…

6 hours ago

” ಹೊಸ ವರುಷ ಎಂಬುದೇನಿಲ್ಲ ಅರಿತವಗೆ…”

2026ಕ್ಕೆ ಕೆಲವೇ ಗಂಟೆಗಳು ಇರುವಾಗ.......... ಒಂದು ಜೀವನದ ಇಲ್ಲಿಯವರೆಗಿನ ನೆನಪಿನ ಪಯಣ......... " ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ…

11 hours ago

ಪರಿಶಿಷ್ಟರ ಮೇಲಿನ ದೌರ್ಜನ್ಯವನ್ನು ಆಯೋಗ ಸಹಿಸುವುದಿಲ್ಲ-ಡಾ.ಎಲ್ ಮೂರ್ತಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ಆಯೋಗವು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ…

23 hours ago