ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಂಡು ಬರುತ್ತಿರುವ ಹಕ್ಕಿ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಕೋಳಿ ಸಾಕಾಣಿಕೆ ಮಾಲಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಕ್ತ ನಿರ್ದೇಶನ ನೀಡಿ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ. ಕೆ.ಎನ್ ಅನುರಾಧ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂಬಂಧ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ ಒಟ್ಟು 383 ರೈತರು ಸುಮಾರು 95 ಲಕ್ಷ ಕೋಳಿಗಳನ್ನು ಸಾಕಾಣಿಕೆ ಮಾಡುತ್ತಿದ್ದು, ವಾಡಿಕೆಯ ಕಣ್ಗಾವಲು (ಪರಿಶೀಲನೆ) ಮಾಡಿದಾಗ ಯಾವುದೇ ಹಕ್ಕಿ ಜ್ವರದ ಪ್ರಕರಣಗಳು ಇದುವರೆಗೂ ಕಂಡುಬರುವುದಿಲ್ಲ. ಹಕ್ಕಿ ಜ್ವರ ಸೋಂಕು ತಗುಲಿದ ಹಕ್ಕಿಗಳ ರೆಕ್ಕೆಗಳು, ನೀರು, ಮೊಟ್ಟೆ, ಪಂಜರ ಮತ್ತು ಇತರೆ ಸಂಬಂಧಿಸಿದ ವಸ್ತುಗಳಿಂದ ಹರಡುತ್ತದೆ.
ಹಕ್ಕಿಗಳ ಚಟುವಟಿಕೆ ಮತ್ತು ಆಹಾರ ಸೇವನೆ ಕಡಿಮೆಯಾಗುವುದು ಉಸಿರು ಆಡುವಾಗ ಶಬ್ದ, ಚರ್ಮವು ನೀಲಿ ಬಣ್ಣಕ್ಕೆ ತಿರುಗುವುದು, ಅತೀ ಬೇಧಿ ಮತ್ತು ಹಕ್ಕಿಗಳು ಪೂರ್ವ ಚಿಹ್ನೆಗಳಿಲ್ಲದೆ ಸಾಯುವುದು ಪ್ರಮುಖ ಲಕ್ಷಣಗಳು. ಯಾವುದೇ ಪಕ್ಷಿಗಳು ಅಥವಾ ಕೋಳಿಗಳು ಅನುಮಾನಾಸ್ಪದವಾಗಿ, ಅಸಹಜವಾಗಿ ಇಲ್ಲವೇ ಇದ್ದಕ್ಕಿದ್ದಂತೆ ಸಾವುಗಳು ಕಂಡು ಬಂದಲ್ಲಿ ಹತ್ತಿರದ ಪಶು ಸಂಗೋಪನಾ ಇಲಾಖೆಗೆ ಮಾಹಿತಿಯನ್ನು ನೀಡಬೇಕು.
ಇದಕ್ಕಾಗಿ ಪ್ರತೀ ತಾಲ್ಲೂಕಿನಲ್ಲಿ ಆರ್.ಆರ್.ಟಿ (ಕ್ಷಿಪ್ರ ಪ್ರತಿಕ್ರಿಯೆ ತಂಡ) ರಚಿಸಿದ್ದು, ಜಿಲ್ಲೆಯಲ್ಲಿ ಒಟ್ಟು 39 ಆರ್.ಆರ್.ಟಿ ಯು ಸನ್ನದ್ಧವಾಗಿದೆ. ಪ್ರತಿ ತಂಡದಲ್ಲಿ ಒಬ್ಬ ಪಶು ವೈದ್ಯಾಧಿಕಾರಿ, ಅರೇ ತಾಂತ್ರಿಕ ಸಿಬ್ಬಂದಿ ಹಾಗೂ ಡಿ ದರ್ಜೆ ನೌಕರರು ಇರುತ್ತಾರೆ.
ಮುಖ್ಯವಾಗಿ ಕೋಳಿ ಫಾರ್ಮ್ ಗಳಿಗೆ ಹೊರಗಿನ ಪ್ರದೇಶದಿಂದ ಬರುವ ಜನರನ್ನು ಮತ್ತು ವಾಹನಗಳನ್ನು ತಾತ್ಕಾಲಿಕವಾಗಿ ಒಳಗೆ ಪ್ರವೇಶಿಸದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ.ಜಗದೀಶ್, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ತಾಲ್ಲೂಕು ಪಶುವೈದ್ಯಾದಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…