ಹಕ್ಕಿ ಜ್ವರ ಭೀತಿ: ಜನರಿಗೆ ಜಾಗೃತಿ ಮೂಡಿಸಿ, ಕೋಳಿ ಸಾಕಾಣಿಕೆ ಮಾಲಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸಿಇಒ ಸೂಚನೆ

ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಂಡು ಬರುತ್ತಿರುವ ಹಕ್ಕಿ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಕೋಳಿ ಸಾಕಾಣಿಕೆ ಮಾಲಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಕ್ತ ನಿರ್ದೇಶನ ನೀಡಿ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ. ಕೆ.ಎನ್ ಅನುರಾಧ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂಬಂಧ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ ಒಟ್ಟು 383 ರೈತರು ಸುಮಾರು 95 ಲಕ್ಷ ಕೋಳಿಗಳನ್ನು ಸಾಕಾಣಿಕೆ ಮಾಡುತ್ತಿದ್ದು, ವಾಡಿಕೆಯ ಕಣ್ಗಾವಲು (ಪರಿಶೀಲನೆ) ಮಾಡಿದಾಗ ಯಾವುದೇ ಹಕ್ಕಿ ಜ್ವರದ ಪ್ರಕರಣಗಳು ಇದುವರೆಗೂ ಕಂಡುಬರುವುದಿಲ್ಲ. ಹಕ್ಕಿ ಜ್ವರ ಸೋಂಕು ತಗುಲಿದ ಹಕ್ಕಿಗಳ ರೆಕ್ಕೆಗಳು, ನೀರು, ಮೊಟ್ಟೆ, ಪಂಜರ ಮತ್ತು ಇತರೆ ಸಂಬಂಧಿಸಿದ ವಸ್ತುಗಳಿಂದ ಹರಡುತ್ತದೆ.

ಹಕ್ಕಿಗಳ ಚಟುವಟಿಕೆ ಮತ್ತು ಆಹಾರ ಸೇವನೆ ಕಡಿಮೆಯಾಗುವುದು ಉಸಿರು ಆಡುವಾಗ ಶಬ್ದ, ಚರ್ಮವು ನೀಲಿ ಬಣ್ಣಕ್ಕೆ ತಿರುಗುವುದು, ಅತೀ ಬೇಧಿ ಮತ್ತು ಹಕ್ಕಿಗಳು ಪೂರ್ವ ಚಿಹ್ನೆಗಳಿಲ್ಲದೆ ಸಾಯುವುದು ಪ್ರಮುಖ ಲಕ್ಷಣಗಳು. ಯಾವುದೇ ಪಕ್ಷಿಗಳು ಅಥವಾ ಕೋಳಿಗಳು ಅನುಮಾನಾಸ್ಪದವಾಗಿ, ಅಸಹಜವಾಗಿ ಇಲ್ಲವೇ ಇದ್ದಕ್ಕಿದ್ದಂತೆ ಸಾವುಗಳು ಕಂಡು ಬಂದಲ್ಲಿ ಹತ್ತಿರದ ಪಶು ಸಂಗೋಪನಾ ಇಲಾಖೆಗೆ ಮಾಹಿತಿಯನ್ನು ನೀಡಬೇಕು.

ಇದಕ್ಕಾಗಿ ಪ್ರತೀ ತಾಲ್ಲೂಕಿನಲ್ಲಿ ಆರ್.ಆರ್.ಟಿ (ಕ್ಷಿಪ್ರ ಪ್ರತಿಕ್ರಿಯೆ ತಂಡ) ರಚಿಸಿದ್ದು, ಜಿಲ್ಲೆಯಲ್ಲಿ ಒಟ್ಟು 39 ಆರ್.ಆರ್.ಟಿ ಯು ಸನ್ನದ್ಧವಾಗಿದೆ. ಪ್ರತಿ ತಂಡದಲ್ಲಿ ಒಬ್ಬ ಪಶು ವೈದ್ಯಾಧಿಕಾರಿ, ಅರೇ ತಾಂತ್ರಿಕ ಸಿಬ್ಬಂದಿ ಹಾಗೂ ಡಿ ದರ್ಜೆ ನೌಕರರು ಇರುತ್ತಾರೆ.

ಮುಖ್ಯವಾಗಿ ಕೋಳಿ ಫಾರ್ಮ್ ಗಳಿಗೆ ಹೊರಗಿನ ಪ್ರದೇಶದಿಂದ ಬರುವ ಜನರನ್ನು ಮತ್ತು ವಾಹನಗಳನ್ನು ತಾತ್ಕಾಲಿಕವಾಗಿ ಒಳಗೆ ಪ್ರವೇಶಿಸದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ.ಜಗದೀಶ್, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ತಾಲ್ಲೂಕು ಪಶುವೈದ್ಯಾದಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

4 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

17 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago