ಹಕ್ಕಿ ಜ್ವರ ಭೀತಿ: ಜನರಿಗೆ ಜಾಗೃತಿ ಮೂಡಿಸಿ, ಕೋಳಿ ಸಾಕಾಣಿಕೆ ಮಾಲಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸಿಇಒ ಸೂಚನೆ

ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಂಡು ಬರುತ್ತಿರುವ ಹಕ್ಕಿ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಕೋಳಿ ಸಾಕಾಣಿಕೆ ಮಾಲಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಕ್ತ ನಿರ್ದೇಶನ ನೀಡಿ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ. ಕೆ.ಎನ್ ಅನುರಾಧ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂಬಂಧ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ ಒಟ್ಟು 383 ರೈತರು ಸುಮಾರು 95 ಲಕ್ಷ ಕೋಳಿಗಳನ್ನು ಸಾಕಾಣಿಕೆ ಮಾಡುತ್ತಿದ್ದು, ವಾಡಿಕೆಯ ಕಣ್ಗಾವಲು (ಪರಿಶೀಲನೆ) ಮಾಡಿದಾಗ ಯಾವುದೇ ಹಕ್ಕಿ ಜ್ವರದ ಪ್ರಕರಣಗಳು ಇದುವರೆಗೂ ಕಂಡುಬರುವುದಿಲ್ಲ. ಹಕ್ಕಿ ಜ್ವರ ಸೋಂಕು ತಗುಲಿದ ಹಕ್ಕಿಗಳ ರೆಕ್ಕೆಗಳು, ನೀರು, ಮೊಟ್ಟೆ, ಪಂಜರ ಮತ್ತು ಇತರೆ ಸಂಬಂಧಿಸಿದ ವಸ್ತುಗಳಿಂದ ಹರಡುತ್ತದೆ.

ಹಕ್ಕಿಗಳ ಚಟುವಟಿಕೆ ಮತ್ತು ಆಹಾರ ಸೇವನೆ ಕಡಿಮೆಯಾಗುವುದು ಉಸಿರು ಆಡುವಾಗ ಶಬ್ದ, ಚರ್ಮವು ನೀಲಿ ಬಣ್ಣಕ್ಕೆ ತಿರುಗುವುದು, ಅತೀ ಬೇಧಿ ಮತ್ತು ಹಕ್ಕಿಗಳು ಪೂರ್ವ ಚಿಹ್ನೆಗಳಿಲ್ಲದೆ ಸಾಯುವುದು ಪ್ರಮುಖ ಲಕ್ಷಣಗಳು. ಯಾವುದೇ ಪಕ್ಷಿಗಳು ಅಥವಾ ಕೋಳಿಗಳು ಅನುಮಾನಾಸ್ಪದವಾಗಿ, ಅಸಹಜವಾಗಿ ಇಲ್ಲವೇ ಇದ್ದಕ್ಕಿದ್ದಂತೆ ಸಾವುಗಳು ಕಂಡು ಬಂದಲ್ಲಿ ಹತ್ತಿರದ ಪಶು ಸಂಗೋಪನಾ ಇಲಾಖೆಗೆ ಮಾಹಿತಿಯನ್ನು ನೀಡಬೇಕು.

ಇದಕ್ಕಾಗಿ ಪ್ರತೀ ತಾಲ್ಲೂಕಿನಲ್ಲಿ ಆರ್.ಆರ್.ಟಿ (ಕ್ಷಿಪ್ರ ಪ್ರತಿಕ್ರಿಯೆ ತಂಡ) ರಚಿಸಿದ್ದು, ಜಿಲ್ಲೆಯಲ್ಲಿ ಒಟ್ಟು 39 ಆರ್.ಆರ್.ಟಿ ಯು ಸನ್ನದ್ಧವಾಗಿದೆ. ಪ್ರತಿ ತಂಡದಲ್ಲಿ ಒಬ್ಬ ಪಶು ವೈದ್ಯಾಧಿಕಾರಿ, ಅರೇ ತಾಂತ್ರಿಕ ಸಿಬ್ಬಂದಿ ಹಾಗೂ ಡಿ ದರ್ಜೆ ನೌಕರರು ಇರುತ್ತಾರೆ.

ಮುಖ್ಯವಾಗಿ ಕೋಳಿ ಫಾರ್ಮ್ ಗಳಿಗೆ ಹೊರಗಿನ ಪ್ರದೇಶದಿಂದ ಬರುವ ಜನರನ್ನು ಮತ್ತು ವಾಹನಗಳನ್ನು ತಾತ್ಕಾಲಿಕವಾಗಿ ಒಳಗೆ ಪ್ರವೇಶಿಸದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ.ಜಗದೀಶ್, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ತಾಲ್ಲೂಕು ಪಶುವೈದ್ಯಾದಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

5 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

5 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

5 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

6 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

7 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

11 hours ago