ಹಕ್ಕಿ ಜ್ವರ ಭೀತಿ: ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ- ಜಿಲ್ಲಾಧಿಕಾರಿ ಎ.ಬಿ ಬಸವರಾಜು ಮನವಿ

ಹಕ್ಕಿ ಜ್ವರವು ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ಮಹಾರಾಷ್ಟ್ರಗಳಲ್ಲಿ ಕಂಡು ಬಂದಿದ್ದು, ಅಲ್ಲದೇ ಪಕ್ಕದ ಜಿಲ್ಲೆಯಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಳಿಗಳು ಅನುಮಾಸ್ಪದವಾಗಿ ಸಾವನ್ನಪ್ಪಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.

ಯಾವುದೇ ಪಕ್ಷಿಗಳು ಅಥವಾ ಕೋಳಿಗಳು ಅನುಮಾನಾಸ್ಪದವಾಗಿ ಅಸಹಜವಾಗಿ ಇಲ್ಲವೇ ಇದ್ದಕ್ಕಿದ್ದಂತೆ ಸಾವುಗಳು ಕಂಡುಬಂದಲ್ಲಿ ಹತ್ತಿರದ ಪಶು ಇಲಾಖೆಗೆ ಮಾಹಿತಿ ನೀಡಿ. ಹಕ್ಕಿ ಜ್ವರ ಕಂಡು ಬಂದ ಸ್ಥಳದಿಂದ 10 ಕೀ.ಮಿ ಸುತ್ತಲಿನ ಗ್ರಾಮಗಳಲ್ಲಿ ಶೀತ ಅಥವಾ ಕೆಮ್ಮು ಮಾದರಿಯ ಪ್ರಕರಣಗಳು, ಜ್ವರ ಪ್ರಕರಣಗಳು, ತಲೆನೋವು, ಸ್ನಾಯುಗಳ ನೋವು, ಗಂಟಲು ನೋವು ಇತರೆ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಮಾಹಿತಿ ನೀಡಿ ಚಿಕಿತ್ಸೆ ಪಡೆಯಿರಿ ಎಂದರು.

ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಹಕ್ಕಿ ಜ್ವರದ (ಹೆಚ್5ಎನ್1) ಬಗ್ಗೆ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ನೀಡುತ್ತಿದ್ದು, ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಗುರುತಿಸಿ ಮಾಲೀಕರು ಮತ್ತು ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಲು ಕ್ರಮವಹಿಸಲಾಗಿದೆ. ಸಾರ್ವಜನಿಕರು ಭಯ ಭೀತಿಗೊಳ್ಳದೆ ಎಚ್ಚರದಿಂದ ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು. ಕೈಗಳನ್ನು ಸಾಬೂನಿನಿಂದ ಆಗಾಗ್ಗೆ ಚೆನ್ನಾಗಿ ತೊಳೆದುಕೊಳ್ಳುವುದು, ಜನ ನಿಬಿಡ ಸ್ಥಳಗಳಲ್ಲಿ ಹಾಗೂ ಇತರೆಡೆ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸಿ ಮುನ್ನೆಚ್ಚರಿಕೆಯಿಂದ ಇರಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

1 hour ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

2 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

4 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

11 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

12 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

12 hours ago