ಹಕ್ಕಿ ಜ್ವರವು ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ಮಹಾರಾಷ್ಟ್ರಗಳಲ್ಲಿ ಕಂಡು ಬಂದಿದ್ದು, ಅಲ್ಲದೇ ಪಕ್ಕದ ಜಿಲ್ಲೆಯಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಳಿಗಳು ಅನುಮಾಸ್ಪದವಾಗಿ ಸಾವನ್ನಪ್ಪಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.
ಯಾವುದೇ ಪಕ್ಷಿಗಳು ಅಥವಾ ಕೋಳಿಗಳು ಅನುಮಾನಾಸ್ಪದವಾಗಿ ಅಸಹಜವಾಗಿ ಇಲ್ಲವೇ ಇದ್ದಕ್ಕಿದ್ದಂತೆ ಸಾವುಗಳು ಕಂಡುಬಂದಲ್ಲಿ ಹತ್ತಿರದ ಪಶು ಇಲಾಖೆಗೆ ಮಾಹಿತಿ ನೀಡಿ. ಹಕ್ಕಿ ಜ್ವರ ಕಂಡು ಬಂದ ಸ್ಥಳದಿಂದ 10 ಕೀ.ಮಿ ಸುತ್ತಲಿನ ಗ್ರಾಮಗಳಲ್ಲಿ ಶೀತ ಅಥವಾ ಕೆಮ್ಮು ಮಾದರಿಯ ಪ್ರಕರಣಗಳು, ಜ್ವರ ಪ್ರಕರಣಗಳು, ತಲೆನೋವು, ಸ್ನಾಯುಗಳ ನೋವು, ಗಂಟಲು ನೋವು ಇತರೆ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಮಾಹಿತಿ ನೀಡಿ ಚಿಕಿತ್ಸೆ ಪಡೆಯಿರಿ ಎಂದರು.
ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಹಕ್ಕಿ ಜ್ವರದ (ಹೆಚ್5ಎನ್1) ಬಗ್ಗೆ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ನೀಡುತ್ತಿದ್ದು, ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಗುರುತಿಸಿ ಮಾಲೀಕರು ಮತ್ತು ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಲು ಕ್ರಮವಹಿಸಲಾಗಿದೆ. ಸಾರ್ವಜನಿಕರು ಭಯ ಭೀತಿಗೊಳ್ಳದೆ ಎಚ್ಚರದಿಂದ ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು. ಕೈಗಳನ್ನು ಸಾಬೂನಿನಿಂದ ಆಗಾಗ್ಗೆ ಚೆನ್ನಾಗಿ ತೊಳೆದುಕೊಳ್ಳುವುದು, ಜನ ನಿಬಿಡ ಸ್ಥಳಗಳಲ್ಲಿ ಹಾಗೂ ಇತರೆಡೆ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸಿ ಮುನ್ನೆಚ್ಚರಿಕೆಯಿಂದ ಇರಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…