ಹಕ್ಕಿ ಜ್ವರವು ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ಮಹಾರಾಷ್ಟ್ರಗಳಲ್ಲಿ ಕಂಡು ಬಂದಿದ್ದು, ಅಲ್ಲದೇ ಪಕ್ಕದ ಜಿಲ್ಲೆಯಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಳಿಗಳು ಅನುಮಾಸ್ಪದವಾಗಿ ಸಾವನ್ನಪ್ಪಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.
ಯಾವುದೇ ಪಕ್ಷಿಗಳು ಅಥವಾ ಕೋಳಿಗಳು ಅನುಮಾನಾಸ್ಪದವಾಗಿ ಅಸಹಜವಾಗಿ ಇಲ್ಲವೇ ಇದ್ದಕ್ಕಿದ್ದಂತೆ ಸಾವುಗಳು ಕಂಡುಬಂದಲ್ಲಿ ಹತ್ತಿರದ ಪಶು ಇಲಾಖೆಗೆ ಮಾಹಿತಿ ನೀಡಿ. ಹಕ್ಕಿ ಜ್ವರ ಕಂಡು ಬಂದ ಸ್ಥಳದಿಂದ 10 ಕೀ.ಮಿ ಸುತ್ತಲಿನ ಗ್ರಾಮಗಳಲ್ಲಿ ಶೀತ ಅಥವಾ ಕೆಮ್ಮು ಮಾದರಿಯ ಪ್ರಕರಣಗಳು, ಜ್ವರ ಪ್ರಕರಣಗಳು, ತಲೆನೋವು, ಸ್ನಾಯುಗಳ ನೋವು, ಗಂಟಲು ನೋವು ಇತರೆ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಮಾಹಿತಿ ನೀಡಿ ಚಿಕಿತ್ಸೆ ಪಡೆಯಿರಿ ಎಂದರು.
ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಹಕ್ಕಿ ಜ್ವರದ (ಹೆಚ್5ಎನ್1) ಬಗ್ಗೆ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ನೀಡುತ್ತಿದ್ದು, ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಗುರುತಿಸಿ ಮಾಲೀಕರು ಮತ್ತು ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಲು ಕ್ರಮವಹಿಸಲಾಗಿದೆ. ಸಾರ್ವಜನಿಕರು ಭಯ ಭೀತಿಗೊಳ್ಳದೆ ಎಚ್ಚರದಿಂದ ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು. ಕೈಗಳನ್ನು ಸಾಬೂನಿನಿಂದ ಆಗಾಗ್ಗೆ ಚೆನ್ನಾಗಿ ತೊಳೆದುಕೊಳ್ಳುವುದು, ಜನ ನಿಬಿಡ ಸ್ಥಳಗಳಲ್ಲಿ ಹಾಗೂ ಇತರೆಡೆ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸಿ ಮುನ್ನೆಚ್ಚರಿಕೆಯಿಂದ ಇರಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…