ಹಕ್ಕಿ ಜ್ವರವು ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ಮಹಾರಾಷ್ಟ್ರಗಳಲ್ಲಿ ಕಂಡು ಬಂದಿದ್ದು, ಅಲ್ಲದೇ ಪಕ್ಕದ ಜಿಲ್ಲೆಯಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಳಿಗಳು ಅನುಮಾಸ್ಪದವಾಗಿ ಸಾವನ್ನಪ್ಪಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.
ಯಾವುದೇ ಪಕ್ಷಿಗಳು ಅಥವಾ ಕೋಳಿಗಳು ಅನುಮಾನಾಸ್ಪದವಾಗಿ ಅಸಹಜವಾಗಿ ಇಲ್ಲವೇ ಇದ್ದಕ್ಕಿದ್ದಂತೆ ಸಾವುಗಳು ಕಂಡುಬಂದಲ್ಲಿ ಹತ್ತಿರದ ಪಶು ಇಲಾಖೆಗೆ ಮಾಹಿತಿ ನೀಡಿ. ಹಕ್ಕಿ ಜ್ವರ ಕಂಡು ಬಂದ ಸ್ಥಳದಿಂದ 10 ಕೀ.ಮಿ ಸುತ್ತಲಿನ ಗ್ರಾಮಗಳಲ್ಲಿ ಶೀತ ಅಥವಾ ಕೆಮ್ಮು ಮಾದರಿಯ ಪ್ರಕರಣಗಳು, ಜ್ವರ ಪ್ರಕರಣಗಳು, ತಲೆನೋವು, ಸ್ನಾಯುಗಳ ನೋವು, ಗಂಟಲು ನೋವು ಇತರೆ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಮಾಹಿತಿ ನೀಡಿ ಚಿಕಿತ್ಸೆ ಪಡೆಯಿರಿ ಎಂದರು.
ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಹಕ್ಕಿ ಜ್ವರದ (ಹೆಚ್5ಎನ್1) ಬಗ್ಗೆ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ನೀಡುತ್ತಿದ್ದು, ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಗುರುತಿಸಿ ಮಾಲೀಕರು ಮತ್ತು ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಲು ಕ್ರಮವಹಿಸಲಾಗಿದೆ. ಸಾರ್ವಜನಿಕರು ಭಯ ಭೀತಿಗೊಳ್ಳದೆ ಎಚ್ಚರದಿಂದ ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು. ಕೈಗಳನ್ನು ಸಾಬೂನಿನಿಂದ ಆಗಾಗ್ಗೆ ಚೆನ್ನಾಗಿ ತೊಳೆದುಕೊಳ್ಳುವುದು, ಜನ ನಿಬಿಡ ಸ್ಥಳಗಳಲ್ಲಿ ಹಾಗೂ ಇತರೆಡೆ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸಿ ಮುನ್ನೆಚ್ಚರಿಕೆಯಿಂದ ಇರಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…