Categories: ಲೇಖನ

ಹಣಕ್ಕೆ ಗುಣಕ್ಕಿಂತ ಮರ್ಯಾದೆ ಜಾಸ್ತಿಯಾದಾಗ..?

ಮತ್ತೆ ಮತ್ತೆ ನಮ್ಮನ್ನು ಪ್ರಶ್ನಿಸಿಕೊಳ್ಳಲೇಬೇಕಿದೆ, ಮತ್ತೆ ಮತ್ತೆ ನಮ್ಮ ಆತ್ಮಾವಲೋಕನ ಮಾಡಿಕೊಳ್ಳಲೇಬೇಕಿದೆ,

ಏಕೆಂದರೆ ಕೇವಲ 20/25 ಲಕ್ಷ ಬೆಲೆಯ ಒಂದು ಕಾರು ನಮ್ಮ ಸಮಾಜದಲ್ಲಿ ಒಬ್ಬ ವ್ಯಕ್ತಿಯ ಇಡೀ ವ್ಯಕ್ತಿತ್ವವನ್ನೇ ಬದಲಿಸುತ್ತದೆ ಎಂಬುದು ಖಂಡಿತ ವಾಸ್ತವಿಕ ಸತ್ಯ.
ಕಾರು ಹೊಂದಿದ ವ್ಯಕ್ತಿ ಇದ್ದಕ್ಕಿದ್ದಂತೆ ಕಾರಿನ ಮಹಿಮೆಯಿಂದಲೇ ಬುದ್ದಿವಂತನೆಂತಲೋ, ಶ್ರಮಜೀವಿಯೆಂತಲೋ, ಯಾವುದೋ ಪಕ್ಷ ಅಥವಾ ಸಂಘಟನೆಯ ನಾಯಕನೆಂತಲೋ, ಶ್ರೀಮಂತನೆಂತಲೋ, ಬಹುತೇಕರಿಂದ ಹುಸಿ ಗೌರವ ಪಡೆಯಲಾರಂಭಿಸುತ್ತಾನೆ.

ಆತನ ಹಿನ್ನಲೆ, ಹಣದ ಮೂಲ,ವರ್ತನೆ ಯಾವುದೂ ಮುಖ್ಯವಾಗುವುದಿಲ್ಲ.

ಅದೇ ಒಬ್ಬ ಸರಳ, ಸಜ್ಜನ, ವಿದ್ಯಾವಂತ, ನಿಜವಾದ ಶ್ರಮಜೀವಿ ಸಾರ್ವಜನಿಕ ಸಾರಿಗೆ ಬಸ್ಸಿನಲ್ಲೋ, ಸೈಕಲ್ ನಲ್ಲೋ ಓಡಾಡುತ್ತಾ ಸಾಧಾರಣ ಬಟ್ಟೆ ಧರಿಸಿದ್ದರೆ ನಿಜವಾಗಿ ಆತನಿಗೆ ಸಿಗುವ ಮರ್ಯಾದೆ ಅಷ್ಟಕಷ್ಟೇ. ಅದರಲ್ಲೂ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಆತ ಅವಮರ್ಯಾದೆಗೆ ಒಳಗಾಗುವ ಸಾಧ್ಯತೆಯೇ ಹೆಚ್ಚು.

ಬಂಧು ಬಳಗದವರಲ್ಲಿ ಸರಳ ವ್ಯಕ್ತಿಯ ಬಗ್ಗೆ ಆತ ಏನೋ ಒಬ್ಬ ಮಾನಸಿಕ ಅಸ್ವಸ್ಥ ಅಥವಾ ಕೆಲಸಕ್ಕೆ ಬಾರದವನು ಎಂಬಂತೆ ಸಹಾನುಭೂತಿ ವ್ಯಕ್ತವಾಗುತ್ತದೆ.

ಕೈ ಬೆರಳುಗಳಿಗೆ ಉಂಗುರ,
ಕೈಗೆ ಚಿನ್ನದ ಚೈನು,
ಕತ್ತಿಗೆ ಚಿನ್ನದ ಸರ ಹಾಕಿಕೊಳ್ಳುವ ವ್ಯಕ್ತಿಗೆ ಸಿಗುವ ಗೌರವ, ಸಾಧಾರಣ ಬಟ್ಟೆಯ ಸರಳ ಮತ್ತು ಒಳ್ಳೆಯ ವ್ಯಕ್ತಿಗೆ ಸಿಗುವುದೇ ಇಲ್ಲ.

ನಾನು ಇಲ್ಲಿ ಶ್ರೀಮಂತರನ್ನು ದೂಷಿಸುತ್ತಿಲ್ಲ ಅಥವಾ ಅವರೆಲ್ಲರೂ ಕೆಟ್ಟವರು ಎಂದು ಹೇಳುತ್ತಿಲ್ಲ. ಆದರೆ ಸಮಾಜದ ಮನೋಭಾವ ಹೇಗೆ ಹಣವಂತರಿಗೆ ಪ್ರೋತ್ಸಾಹದಾಯಕವಾಗಿದೆ ಮತ್ತು ಅದರಿಂದ ಹೇಗೆ ಭ್ರಷ್ಟಾಚಾರ ಹೆಚ್ಚಾಗುತ್ತದೆ ಎಂದು ಮಾತ್ರ ಹೇಳುತ್ತಿದ್ದೇನೆ.

ಹಣಕ್ಕೆ ಗುಣಕ್ಕಿಂತ ಮರ್ಯಾದೆ ಜಾಸ್ತಿಯಾದಾಗ ಜನ ಹಣದ ಹಿಂದೆ ಬೀಳುತ್ತಾರೆ ಮತ್ತು ಅದನ್ನು ಪಡೆಯಲು ಯಾವ ಹಂತಕ್ಕೂ ಹೋಗುತ್ತಾರೆ ಎಂಬ ಅನುಮಾನ ನನ್ನದು.

ಇದರಿಂದಾಗಿ ಗುಣ ಹಿಂದೆ ಸರಿಯುತ್ತದೆ. ಸಮಾಜ ಅಸ್ತವ್ಯಸ್ತವಾಗುತ್ತದೆ.
ಮೌಲ್ಯಗಳು ನಶಿಸುತ್ತವೆ. ಬಹುಶಃ ಈಗ ಆಗುತ್ತಿರುವುದು ಇದೇ.

ಯಾವುದೇ ಮೂಲದಿಂದಾದರು ಹಣ ಅಧಿಕಾರ ಪಡೆಯಲು ಪ್ರಯತ್ನಿಸುವ ಮನೋಭಾವ ಪ್ರಾಮುಖ್ಯತೆ ಹೊಂದಲು ಇದು ಬಹುಮುಖ್ಯ ಕಾರಣವಾಗಿದೆ.

ಆದ್ದರಿಂದ ತಿಳಿದ ಕೆಲವರಾದರೂ ಇದನ್ನು ಅರಿತು ತಮ್ಮ ನಡವಳಿಕೆಗಳಲ್ಲಿ ಬದಲಾವಣೆ ಮಾಡಿಕೊಂಡರೆ ಸಮಾಜವನ್ನು ಕಾಡುತ್ತಿರುವ ಬಹಳಷ್ಟು ಸಮಸ್ಯೆಗಳು ಕಡಿಮೆಯಾಗುತ್ತದೆ ಮತ್ತು ಹಿಂದಿನಂತೆ ಗುಣಕ್ಕೆ ಗೌರವ ದೊರೆಯುತ್ತದೆ ಎಂಬ ಆಶಯದೊಂದಿಗೆ ……………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನ ಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…

6 hours ago

ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ

ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…

8 hours ago

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

14 hours ago

ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…

16 hours ago

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

1 day ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

1 day ago