Categories: ಲೇಖನ

ಹಣಕ್ಕೆ ಗುಣಕ್ಕಿಂತ ಮರ್ಯಾದೆ ಜಾಸ್ತಿಯಾದಾಗ..?

ಮತ್ತೆ ಮತ್ತೆ ನಮ್ಮನ್ನು ಪ್ರಶ್ನಿಸಿಕೊಳ್ಳಲೇಬೇಕಿದೆ, ಮತ್ತೆ ಮತ್ತೆ ನಮ್ಮ ಆತ್ಮಾವಲೋಕನ ಮಾಡಿಕೊಳ್ಳಲೇಬೇಕಿದೆ,

ಏಕೆಂದರೆ ಕೇವಲ 20/25 ಲಕ್ಷ ಬೆಲೆಯ ಒಂದು ಕಾರು ನಮ್ಮ ಸಮಾಜದಲ್ಲಿ ಒಬ್ಬ ವ್ಯಕ್ತಿಯ ಇಡೀ ವ್ಯಕ್ತಿತ್ವವನ್ನೇ ಬದಲಿಸುತ್ತದೆ ಎಂಬುದು ಖಂಡಿತ ವಾಸ್ತವಿಕ ಸತ್ಯ.
ಕಾರು ಹೊಂದಿದ ವ್ಯಕ್ತಿ ಇದ್ದಕ್ಕಿದ್ದಂತೆ ಕಾರಿನ ಮಹಿಮೆಯಿಂದಲೇ ಬುದ್ದಿವಂತನೆಂತಲೋ, ಶ್ರಮಜೀವಿಯೆಂತಲೋ, ಯಾವುದೋ ಪಕ್ಷ ಅಥವಾ ಸಂಘಟನೆಯ ನಾಯಕನೆಂತಲೋ, ಶ್ರೀಮಂತನೆಂತಲೋ, ಬಹುತೇಕರಿಂದ ಹುಸಿ ಗೌರವ ಪಡೆಯಲಾರಂಭಿಸುತ್ತಾನೆ.

ಆತನ ಹಿನ್ನಲೆ, ಹಣದ ಮೂಲ,ವರ್ತನೆ ಯಾವುದೂ ಮುಖ್ಯವಾಗುವುದಿಲ್ಲ.

ಅದೇ ಒಬ್ಬ ಸರಳ, ಸಜ್ಜನ, ವಿದ್ಯಾವಂತ, ನಿಜವಾದ ಶ್ರಮಜೀವಿ ಸಾರ್ವಜನಿಕ ಸಾರಿಗೆ ಬಸ್ಸಿನಲ್ಲೋ, ಸೈಕಲ್ ನಲ್ಲೋ ಓಡಾಡುತ್ತಾ ಸಾಧಾರಣ ಬಟ್ಟೆ ಧರಿಸಿದ್ದರೆ ನಿಜವಾಗಿ ಆತನಿಗೆ ಸಿಗುವ ಮರ್ಯಾದೆ ಅಷ್ಟಕಷ್ಟೇ. ಅದರಲ್ಲೂ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಆತ ಅವಮರ್ಯಾದೆಗೆ ಒಳಗಾಗುವ ಸಾಧ್ಯತೆಯೇ ಹೆಚ್ಚು.

ಬಂಧು ಬಳಗದವರಲ್ಲಿ ಸರಳ ವ್ಯಕ್ತಿಯ ಬಗ್ಗೆ ಆತ ಏನೋ ಒಬ್ಬ ಮಾನಸಿಕ ಅಸ್ವಸ್ಥ ಅಥವಾ ಕೆಲಸಕ್ಕೆ ಬಾರದವನು ಎಂಬಂತೆ ಸಹಾನುಭೂತಿ ವ್ಯಕ್ತವಾಗುತ್ತದೆ.

ಕೈ ಬೆರಳುಗಳಿಗೆ ಉಂಗುರ,
ಕೈಗೆ ಚಿನ್ನದ ಚೈನು,
ಕತ್ತಿಗೆ ಚಿನ್ನದ ಸರ ಹಾಕಿಕೊಳ್ಳುವ ವ್ಯಕ್ತಿಗೆ ಸಿಗುವ ಗೌರವ, ಸಾಧಾರಣ ಬಟ್ಟೆಯ ಸರಳ ಮತ್ತು ಒಳ್ಳೆಯ ವ್ಯಕ್ತಿಗೆ ಸಿಗುವುದೇ ಇಲ್ಲ.

ನಾನು ಇಲ್ಲಿ ಶ್ರೀಮಂತರನ್ನು ದೂಷಿಸುತ್ತಿಲ್ಲ ಅಥವಾ ಅವರೆಲ್ಲರೂ ಕೆಟ್ಟವರು ಎಂದು ಹೇಳುತ್ತಿಲ್ಲ. ಆದರೆ ಸಮಾಜದ ಮನೋಭಾವ ಹೇಗೆ ಹಣವಂತರಿಗೆ ಪ್ರೋತ್ಸಾಹದಾಯಕವಾಗಿದೆ ಮತ್ತು ಅದರಿಂದ ಹೇಗೆ ಭ್ರಷ್ಟಾಚಾರ ಹೆಚ್ಚಾಗುತ್ತದೆ ಎಂದು ಮಾತ್ರ ಹೇಳುತ್ತಿದ್ದೇನೆ.

ಹಣಕ್ಕೆ ಗುಣಕ್ಕಿಂತ ಮರ್ಯಾದೆ ಜಾಸ್ತಿಯಾದಾಗ ಜನ ಹಣದ ಹಿಂದೆ ಬೀಳುತ್ತಾರೆ ಮತ್ತು ಅದನ್ನು ಪಡೆಯಲು ಯಾವ ಹಂತಕ್ಕೂ ಹೋಗುತ್ತಾರೆ ಎಂಬ ಅನುಮಾನ ನನ್ನದು.

ಇದರಿಂದಾಗಿ ಗುಣ ಹಿಂದೆ ಸರಿಯುತ್ತದೆ. ಸಮಾಜ ಅಸ್ತವ್ಯಸ್ತವಾಗುತ್ತದೆ.
ಮೌಲ್ಯಗಳು ನಶಿಸುತ್ತವೆ. ಬಹುಶಃ ಈಗ ಆಗುತ್ತಿರುವುದು ಇದೇ.

ಯಾವುದೇ ಮೂಲದಿಂದಾದರು ಹಣ ಅಧಿಕಾರ ಪಡೆಯಲು ಪ್ರಯತ್ನಿಸುವ ಮನೋಭಾವ ಪ್ರಾಮುಖ್ಯತೆ ಹೊಂದಲು ಇದು ಬಹುಮುಖ್ಯ ಕಾರಣವಾಗಿದೆ.

ಆದ್ದರಿಂದ ತಿಳಿದ ಕೆಲವರಾದರೂ ಇದನ್ನು ಅರಿತು ತಮ್ಮ ನಡವಳಿಕೆಗಳಲ್ಲಿ ಬದಲಾವಣೆ ಮಾಡಿಕೊಂಡರೆ ಸಮಾಜವನ್ನು ಕಾಡುತ್ತಿರುವ ಬಹಳಷ್ಟು ಸಮಸ್ಯೆಗಳು ಕಡಿಮೆಯಾಗುತ್ತದೆ ಮತ್ತು ಹಿಂದಿನಂತೆ ಗುಣಕ್ಕೆ ಗೌರವ ದೊರೆಯುತ್ತದೆ ಎಂಬ ಆಶಯದೊಂದಿಗೆ ……………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನ ಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

2 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

2 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

9 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

10 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

21 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

1 day ago