Categories: ಲೇಖನ

ಹಣಕ್ಕೆ ಗುಣಕ್ಕಿಂತ ಮರ್ಯಾದೆ ಜಾಸ್ತಿಯಾದಾಗ..?

ಮತ್ತೆ ಮತ್ತೆ ನಮ್ಮನ್ನು ಪ್ರಶ್ನಿಸಿಕೊಳ್ಳಲೇಬೇಕಿದೆ, ಮತ್ತೆ ಮತ್ತೆ ನಮ್ಮ ಆತ್ಮಾವಲೋಕನ ಮಾಡಿಕೊಳ್ಳಲೇಬೇಕಿದೆ,

ಏಕೆಂದರೆ ಕೇವಲ 20/25 ಲಕ್ಷ ಬೆಲೆಯ ಒಂದು ಕಾರು ನಮ್ಮ ಸಮಾಜದಲ್ಲಿ ಒಬ್ಬ ವ್ಯಕ್ತಿಯ ಇಡೀ ವ್ಯಕ್ತಿತ್ವವನ್ನೇ ಬದಲಿಸುತ್ತದೆ ಎಂಬುದು ಖಂಡಿತ ವಾಸ್ತವಿಕ ಸತ್ಯ.
ಕಾರು ಹೊಂದಿದ ವ್ಯಕ್ತಿ ಇದ್ದಕ್ಕಿದ್ದಂತೆ ಕಾರಿನ ಮಹಿಮೆಯಿಂದಲೇ ಬುದ್ದಿವಂತನೆಂತಲೋ, ಶ್ರಮಜೀವಿಯೆಂತಲೋ, ಯಾವುದೋ ಪಕ್ಷ ಅಥವಾ ಸಂಘಟನೆಯ ನಾಯಕನೆಂತಲೋ, ಶ್ರೀಮಂತನೆಂತಲೋ, ಬಹುತೇಕರಿಂದ ಹುಸಿ ಗೌರವ ಪಡೆಯಲಾರಂಭಿಸುತ್ತಾನೆ.

ಆತನ ಹಿನ್ನಲೆ, ಹಣದ ಮೂಲ,ವರ್ತನೆ ಯಾವುದೂ ಮುಖ್ಯವಾಗುವುದಿಲ್ಲ.

ಅದೇ ಒಬ್ಬ ಸರಳ, ಸಜ್ಜನ, ವಿದ್ಯಾವಂತ, ನಿಜವಾದ ಶ್ರಮಜೀವಿ ಸಾರ್ವಜನಿಕ ಸಾರಿಗೆ ಬಸ್ಸಿನಲ್ಲೋ, ಸೈಕಲ್ ನಲ್ಲೋ ಓಡಾಡುತ್ತಾ ಸಾಧಾರಣ ಬಟ್ಟೆ ಧರಿಸಿದ್ದರೆ ನಿಜವಾಗಿ ಆತನಿಗೆ ಸಿಗುವ ಮರ್ಯಾದೆ ಅಷ್ಟಕಷ್ಟೇ. ಅದರಲ್ಲೂ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಆತ ಅವಮರ್ಯಾದೆಗೆ ಒಳಗಾಗುವ ಸಾಧ್ಯತೆಯೇ ಹೆಚ್ಚು.

ಬಂಧು ಬಳಗದವರಲ್ಲಿ ಸರಳ ವ್ಯಕ್ತಿಯ ಬಗ್ಗೆ ಆತ ಏನೋ ಒಬ್ಬ ಮಾನಸಿಕ ಅಸ್ವಸ್ಥ ಅಥವಾ ಕೆಲಸಕ್ಕೆ ಬಾರದವನು ಎಂಬಂತೆ ಸಹಾನುಭೂತಿ ವ್ಯಕ್ತವಾಗುತ್ತದೆ.

ಕೈ ಬೆರಳುಗಳಿಗೆ ಉಂಗುರ,
ಕೈಗೆ ಚಿನ್ನದ ಚೈನು,
ಕತ್ತಿಗೆ ಚಿನ್ನದ ಸರ ಹಾಕಿಕೊಳ್ಳುವ ವ್ಯಕ್ತಿಗೆ ಸಿಗುವ ಗೌರವ, ಸಾಧಾರಣ ಬಟ್ಟೆಯ ಸರಳ ಮತ್ತು ಒಳ್ಳೆಯ ವ್ಯಕ್ತಿಗೆ ಸಿಗುವುದೇ ಇಲ್ಲ.

ನಾನು ಇಲ್ಲಿ ಶ್ರೀಮಂತರನ್ನು ದೂಷಿಸುತ್ತಿಲ್ಲ ಅಥವಾ ಅವರೆಲ್ಲರೂ ಕೆಟ್ಟವರು ಎಂದು ಹೇಳುತ್ತಿಲ್ಲ. ಆದರೆ ಸಮಾಜದ ಮನೋಭಾವ ಹೇಗೆ ಹಣವಂತರಿಗೆ ಪ್ರೋತ್ಸಾಹದಾಯಕವಾಗಿದೆ ಮತ್ತು ಅದರಿಂದ ಹೇಗೆ ಭ್ರಷ್ಟಾಚಾರ ಹೆಚ್ಚಾಗುತ್ತದೆ ಎಂದು ಮಾತ್ರ ಹೇಳುತ್ತಿದ್ದೇನೆ.

ಹಣಕ್ಕೆ ಗುಣಕ್ಕಿಂತ ಮರ್ಯಾದೆ ಜಾಸ್ತಿಯಾದಾಗ ಜನ ಹಣದ ಹಿಂದೆ ಬೀಳುತ್ತಾರೆ ಮತ್ತು ಅದನ್ನು ಪಡೆಯಲು ಯಾವ ಹಂತಕ್ಕೂ ಹೋಗುತ್ತಾರೆ ಎಂಬ ಅನುಮಾನ ನನ್ನದು.

ಇದರಿಂದಾಗಿ ಗುಣ ಹಿಂದೆ ಸರಿಯುತ್ತದೆ. ಸಮಾಜ ಅಸ್ತವ್ಯಸ್ತವಾಗುತ್ತದೆ.
ಮೌಲ್ಯಗಳು ನಶಿಸುತ್ತವೆ. ಬಹುಶಃ ಈಗ ಆಗುತ್ತಿರುವುದು ಇದೇ.

ಯಾವುದೇ ಮೂಲದಿಂದಾದರು ಹಣ ಅಧಿಕಾರ ಪಡೆಯಲು ಪ್ರಯತ್ನಿಸುವ ಮನೋಭಾವ ಪ್ರಾಮುಖ್ಯತೆ ಹೊಂದಲು ಇದು ಬಹುಮುಖ್ಯ ಕಾರಣವಾಗಿದೆ.

ಆದ್ದರಿಂದ ತಿಳಿದ ಕೆಲವರಾದರೂ ಇದನ್ನು ಅರಿತು ತಮ್ಮ ನಡವಳಿಕೆಗಳಲ್ಲಿ ಬದಲಾವಣೆ ಮಾಡಿಕೊಂಡರೆ ಸಮಾಜವನ್ನು ಕಾಡುತ್ತಿರುವ ಬಹಳಷ್ಟು ಸಮಸ್ಯೆಗಳು ಕಡಿಮೆಯಾಗುತ್ತದೆ ಮತ್ತು ಹಿಂದಿನಂತೆ ಗುಣಕ್ಕೆ ಗೌರವ ದೊರೆಯುತ್ತದೆ ಎಂಬ ಆಶಯದೊಂದಿಗೆ ……………..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನ ಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

14 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

15 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

18 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

1 day ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

1 day ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

2 days ago