ಹಣದಾಸೆಗೆ ಬರೋಬ್ಬರಿ 50 ಜನರನ್ನು ವಿವಾಹವಾಗಿ ವಂಚಿಸಿದ ಕಿಲಾಡಿ ಲೇಡಿ: ಅಧಿಕಾರಿ, ಉದ್ಯಮಿಗಳು ಸೇರಿದಂತೆ 50 ಜನರಿಗೆ ಮೋಸ: ಸದ್ಯ ಪೊಲೀಸರ ಅತಿಥಿ

ದುಡ್ಡೇ ದೊಡ್ಡಪ್ಪ…., ದುಡ್ಡು ಇದ್ರೆ ದುನಿಯಾ… ಹಣ ಕಂಡ್ರೆ ಹೆಣವೂ ಬಾಯಿ ಬಿಡುತ್ತೆ….! ಹೀಗೆ ನಾನಾ ರೀತಿಯಾಗಿ ಹಣದ ಬಗ್ಗೆ ಜನ ಮಾತಾಡುತ್ತಾರೆ. ಕಾಸಿಗಾಗಿ ಯಾರೂ ಏನು ಬೇಕಾದರೂ ಮಾಡೋದಕ್ಕೆ ತಯಾರಿಯಾಗಿರುತ್ತಾರೆ.

ಹಣಕ್ಕಾಗಿ ಮೋಸ, ವಂಚನೆ, ಕಳ್ಳತನ, ದರೋಡೆ, ಕೊಲೆ ಸೇರಿದಂತೆ ಇತರೆ ಅಪರಾಧ ಕೃತ್ಯಗಳಲ್ಲಿ ಜನ ತೊಡಗುತ್ತಾರೆ.

ಇದೇ ರೀತಿಯ ಘಟನೆಯೊಂದು ಇದೀಗ ನಡೆದಿದ್ದು, ಮಹಿಳೆಯೊಬ್ಬಳು ಹಣದಾಸೆಗೆ ಬರೋಬ್ಬರಿ 50 ಜನರನ್ನು ವಿವಾಹವಾಗಿ ವಂಚಿಸಿದ್ದಾಳೆ.

ಮದುವೆ ಆಗೋದು ದುಡ್ಡು, ಚಿನ್ನ ದೋಚಿ ತಾಳಿ‌ ಕಟ್ಟಿದ ಗಂಡನನ್ನು ಬಿಟ್ಟು ಪರಾರಿ ಆಗೋದು, ಮತ್ತೆ ಕೆಲ ದಿನಗಳ ಬಳಿಕ ಮತ್ತೊಬ್ಬ ಯುವಕನ ಜೊತೆ ಮ್ಯಾರೇಜ್‌ ಆಗೋದು ಈಕೆಯ ಕೆಲಸ. ಹೀಗೆ ವಂಚಿಸಿ ದುಡ್ಡು, ಬಂಗಾರ ದೋಚಿ ಪರಾರಿಯಾಗುತ್ತಿದ್ದ ಈ ಕಿಲಾಡಿ ಲೇಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.

ಈ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಇಲ್ಲಿನ ತಿರುಪುರದಲ್ಲಿನ 35 ವರ್ಷದ ಅವಿವಾಹಿತ ಯುವಕನೊಬ್ಬ ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ʼ‌ದಿ ತಮಿಳು ವೇʼ ನಲ್ಲಿ ಪರಿಚಯವಾದ ಸಂಧ್ಯಾ (30) ಎಂಬ ಮಹಿಳೆಯನ್ನು ಕೆಲ ಸಮಯದ ಹಿಂದೆ ಮದುವೆಯಾಗಿದ್ದನು. ಮದುವೆಯಾದ ಕೆಲ ದಿನಗಳ ಬಳಿಕ ಆಕೆಯ ವರ್ತನೆಯಲ್ಲಿ ತೀರಾ ಬದಲಾವಣೆ ಕಂಡು ಬಂದಿದ್ದು, ನಂತರ ಆತ ಸಂಧ್ಯಾಳ ಆಧಾರ್‌ ಕಾರ್ಡ್‌ ಪರಿಶೀಲಿಸಿದ್ದಾರೆ. ಆಧಾರ್‌ ಕಾರ್ಡ್‌ ದಾಖಲೆಯಲ್ಲಿ ಸಂಧ್ಯಾಳ ಪತಿಯ ಹೆಸರು ಬೇರೆಯೇ ಇದೆ. ತನಗೆ ವಂಚನೆ ಮಾಡಿದ್ದಾಳೆ ಎಂದು ತಿಳಿದ ಈ ಯುವಕ ತಾರಾಪುರಂ ಪೊಲೀಸ್‌ ಠಾಣೆಗೆ ದೂರನ್ನು ನೀಡಿದ್ದಾನೆ. ಪೊಲೀಸರು ಸಂಧ್ಯಾಳನ್ನು ಪತ್ತೆ ಮಾಡಿ ವಿಚಾರಣೆ ನಡೆಸಿದಾಗ ಆಕೆಯ ವಂಚನೆಗಳು ಬಯಲಾಗಿವೆ.

10 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಈಕೆಗೆ ಒಂದು ಮಗು ಕೂಡಾ ಇದೆ. ನಂತರ ತನ್ನ ಮೊದಲ ಪತಿಯಿಂದ ಬೇರ್ಟಟ್ಟು ಹಣದಾಸೆಗೆ ಅವಿವಾಹಿತ ಪುರುಷೆನ್ನೇ ಟಾರ್ಗೆಟ್‌ ಮಾಡಿ ಮಾದುವೆಯಾಗಿ ಸ್ವಲ್ಪ ದಿನಕ್ಕೆಯೇ ದುಡ್ಡು ಬಂಗಾರವನ್ನು ಎತ್ತಿಕೊಂಡ ಎಸ್ಕೇಪ್‌ ಆಗುತ್ತಿದ್ದಳು. ಹೀಗೆ ಡಿವೈಎಸ್ಪಿ, ಎಸ್ಪಿ, ಉದ್ಯಮಿಗಳು ಸೇರಿದಂತೆ 50 ಜನರಿಗೆ ವಂಚಿಸಿದ್ದಾಳೆ. ಇದೀಗ ಆಕೆಯ ಮೋಸದಾಟ ಬಯಲಾಗಿದ್ದು, ಪೊಲೀಸರ ಅತಿಥಿಯಾಗಿದ್ದಾಳೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

10 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

18 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

23 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago