ದುಡ್ಡೇ ದೊಡ್ಡಪ್ಪ…., ದುಡ್ಡು ಇದ್ರೆ ದುನಿಯಾ… ಹಣ ಕಂಡ್ರೆ ಹೆಣವೂ ಬಾಯಿ ಬಿಡುತ್ತೆ….! ಹೀಗೆ ನಾನಾ ರೀತಿಯಾಗಿ ಹಣದ ಬಗ್ಗೆ ಜನ ಮಾತಾಡುತ್ತಾರೆ. ಕಾಸಿಗಾಗಿ ಯಾರೂ ಏನು ಬೇಕಾದರೂ ಮಾಡೋದಕ್ಕೆ ತಯಾರಿಯಾಗಿರುತ್ತಾರೆ.
ಹಣಕ್ಕಾಗಿ ಮೋಸ, ವಂಚನೆ, ಕಳ್ಳತನ, ದರೋಡೆ, ಕೊಲೆ ಸೇರಿದಂತೆ ಇತರೆ ಅಪರಾಧ ಕೃತ್ಯಗಳಲ್ಲಿ ಜನ ತೊಡಗುತ್ತಾರೆ.
ಇದೇ ರೀತಿಯ ಘಟನೆಯೊಂದು ಇದೀಗ ನಡೆದಿದ್ದು, ಮಹಿಳೆಯೊಬ್ಬಳು ಹಣದಾಸೆಗೆ ಬರೋಬ್ಬರಿ 50 ಜನರನ್ನು ವಿವಾಹವಾಗಿ ವಂಚಿಸಿದ್ದಾಳೆ.
ಮದುವೆ ಆಗೋದು ದುಡ್ಡು, ಚಿನ್ನ ದೋಚಿ ತಾಳಿ ಕಟ್ಟಿದ ಗಂಡನನ್ನು ಬಿಟ್ಟು ಪರಾರಿ ಆಗೋದು, ಮತ್ತೆ ಕೆಲ ದಿನಗಳ ಬಳಿಕ ಮತ್ತೊಬ್ಬ ಯುವಕನ ಜೊತೆ ಮ್ಯಾರೇಜ್ ಆಗೋದು ಈಕೆಯ ಕೆಲಸ. ಹೀಗೆ ವಂಚಿಸಿ ದುಡ್ಡು, ಬಂಗಾರ ದೋಚಿ ಪರಾರಿಯಾಗುತ್ತಿದ್ದ ಈ ಕಿಲಾಡಿ ಲೇಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.
ಈ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಇಲ್ಲಿನ ತಿರುಪುರದಲ್ಲಿನ 35 ವರ್ಷದ ಅವಿವಾಹಿತ ಯುವಕನೊಬ್ಬ ಆನ್ಲೈನ್ ಪ್ಲಾಟ್ಫಾರ್ಮ್ ʼದಿ ತಮಿಳು ವೇʼ ನಲ್ಲಿ ಪರಿಚಯವಾದ ಸಂಧ್ಯಾ (30) ಎಂಬ ಮಹಿಳೆಯನ್ನು ಕೆಲ ಸಮಯದ ಹಿಂದೆ ಮದುವೆಯಾಗಿದ್ದನು. ಮದುವೆಯಾದ ಕೆಲ ದಿನಗಳ ಬಳಿಕ ಆಕೆಯ ವರ್ತನೆಯಲ್ಲಿ ತೀರಾ ಬದಲಾವಣೆ ಕಂಡು ಬಂದಿದ್ದು, ನಂತರ ಆತ ಸಂಧ್ಯಾಳ ಆಧಾರ್ ಕಾರ್ಡ್ ಪರಿಶೀಲಿಸಿದ್ದಾರೆ. ಆಧಾರ್ ಕಾರ್ಡ್ ದಾಖಲೆಯಲ್ಲಿ ಸಂಧ್ಯಾಳ ಪತಿಯ ಹೆಸರು ಬೇರೆಯೇ ಇದೆ. ತನಗೆ ವಂಚನೆ ಮಾಡಿದ್ದಾಳೆ ಎಂದು ತಿಳಿದ ಈ ಯುವಕ ತಾರಾಪುರಂ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾನೆ. ಪೊಲೀಸರು ಸಂಧ್ಯಾಳನ್ನು ಪತ್ತೆ ಮಾಡಿ ವಿಚಾರಣೆ ನಡೆಸಿದಾಗ ಆಕೆಯ ವಂಚನೆಗಳು ಬಯಲಾಗಿವೆ.
10 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಈಕೆಗೆ ಒಂದು ಮಗು ಕೂಡಾ ಇದೆ. ನಂತರ ತನ್ನ ಮೊದಲ ಪತಿಯಿಂದ ಬೇರ್ಟಟ್ಟು ಹಣದಾಸೆಗೆ ಅವಿವಾಹಿತ ಪುರುಷೆನ್ನೇ ಟಾರ್ಗೆಟ್ ಮಾಡಿ ಮಾದುವೆಯಾಗಿ ಸ್ವಲ್ಪ ದಿನಕ್ಕೆಯೇ ದುಡ್ಡು ಬಂಗಾರವನ್ನು ಎತ್ತಿಕೊಂಡ ಎಸ್ಕೇಪ್ ಆಗುತ್ತಿದ್ದಳು. ಹೀಗೆ ಡಿವೈಎಸ್ಪಿ, ಎಸ್ಪಿ, ಉದ್ಯಮಿಗಳು ಸೇರಿದಂತೆ 50 ಜನರಿಗೆ ವಂಚಿಸಿದ್ದಾಳೆ. ಇದೀಗ ಆಕೆಯ ಮೋಸದಾಟ ಬಯಲಾಗಿದ್ದು, ಪೊಲೀಸರ ಅತಿಥಿಯಾಗಿದ್ದಾಳೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…