ಹಣದಾಸೆಗೆ ಬರೋಬ್ಬರಿ 50 ಜನರನ್ನು ವಿವಾಹವಾಗಿ ವಂಚಿಸಿದ ಕಿಲಾಡಿ ಲೇಡಿ: ಅಧಿಕಾರಿ, ಉದ್ಯಮಿಗಳು ಸೇರಿದಂತೆ 50 ಜನರಿಗೆ ಮೋಸ: ಸದ್ಯ ಪೊಲೀಸರ ಅತಿಥಿ

ದುಡ್ಡೇ ದೊಡ್ಡಪ್ಪ…., ದುಡ್ಡು ಇದ್ರೆ ದುನಿಯಾ… ಹಣ ಕಂಡ್ರೆ ಹೆಣವೂ ಬಾಯಿ ಬಿಡುತ್ತೆ….! ಹೀಗೆ ನಾನಾ ರೀತಿಯಾಗಿ ಹಣದ ಬಗ್ಗೆ ಜನ ಮಾತಾಡುತ್ತಾರೆ. ಕಾಸಿಗಾಗಿ ಯಾರೂ ಏನು ಬೇಕಾದರೂ ಮಾಡೋದಕ್ಕೆ ತಯಾರಿಯಾಗಿರುತ್ತಾರೆ.

ಹಣಕ್ಕಾಗಿ ಮೋಸ, ವಂಚನೆ, ಕಳ್ಳತನ, ದರೋಡೆ, ಕೊಲೆ ಸೇರಿದಂತೆ ಇತರೆ ಅಪರಾಧ ಕೃತ್ಯಗಳಲ್ಲಿ ಜನ ತೊಡಗುತ್ತಾರೆ.

ಇದೇ ರೀತಿಯ ಘಟನೆಯೊಂದು ಇದೀಗ ನಡೆದಿದ್ದು, ಮಹಿಳೆಯೊಬ್ಬಳು ಹಣದಾಸೆಗೆ ಬರೋಬ್ಬರಿ 50 ಜನರನ್ನು ವಿವಾಹವಾಗಿ ವಂಚಿಸಿದ್ದಾಳೆ.

ಮದುವೆ ಆಗೋದು ದುಡ್ಡು, ಚಿನ್ನ ದೋಚಿ ತಾಳಿ‌ ಕಟ್ಟಿದ ಗಂಡನನ್ನು ಬಿಟ್ಟು ಪರಾರಿ ಆಗೋದು, ಮತ್ತೆ ಕೆಲ ದಿನಗಳ ಬಳಿಕ ಮತ್ತೊಬ್ಬ ಯುವಕನ ಜೊತೆ ಮ್ಯಾರೇಜ್‌ ಆಗೋದು ಈಕೆಯ ಕೆಲಸ. ಹೀಗೆ ವಂಚಿಸಿ ದುಡ್ಡು, ಬಂಗಾರ ದೋಚಿ ಪರಾರಿಯಾಗುತ್ತಿದ್ದ ಈ ಕಿಲಾಡಿ ಲೇಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.

ಈ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಇಲ್ಲಿನ ತಿರುಪುರದಲ್ಲಿನ 35 ವರ್ಷದ ಅವಿವಾಹಿತ ಯುವಕನೊಬ್ಬ ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ʼ‌ದಿ ತಮಿಳು ವೇʼ ನಲ್ಲಿ ಪರಿಚಯವಾದ ಸಂಧ್ಯಾ (30) ಎಂಬ ಮಹಿಳೆಯನ್ನು ಕೆಲ ಸಮಯದ ಹಿಂದೆ ಮದುವೆಯಾಗಿದ್ದನು. ಮದುವೆಯಾದ ಕೆಲ ದಿನಗಳ ಬಳಿಕ ಆಕೆಯ ವರ್ತನೆಯಲ್ಲಿ ತೀರಾ ಬದಲಾವಣೆ ಕಂಡು ಬಂದಿದ್ದು, ನಂತರ ಆತ ಸಂಧ್ಯಾಳ ಆಧಾರ್‌ ಕಾರ್ಡ್‌ ಪರಿಶೀಲಿಸಿದ್ದಾರೆ. ಆಧಾರ್‌ ಕಾರ್ಡ್‌ ದಾಖಲೆಯಲ್ಲಿ ಸಂಧ್ಯಾಳ ಪತಿಯ ಹೆಸರು ಬೇರೆಯೇ ಇದೆ. ತನಗೆ ವಂಚನೆ ಮಾಡಿದ್ದಾಳೆ ಎಂದು ತಿಳಿದ ಈ ಯುವಕ ತಾರಾಪುರಂ ಪೊಲೀಸ್‌ ಠಾಣೆಗೆ ದೂರನ್ನು ನೀಡಿದ್ದಾನೆ. ಪೊಲೀಸರು ಸಂಧ್ಯಾಳನ್ನು ಪತ್ತೆ ಮಾಡಿ ವಿಚಾರಣೆ ನಡೆಸಿದಾಗ ಆಕೆಯ ವಂಚನೆಗಳು ಬಯಲಾಗಿವೆ.

10 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಈಕೆಗೆ ಒಂದು ಮಗು ಕೂಡಾ ಇದೆ. ನಂತರ ತನ್ನ ಮೊದಲ ಪತಿಯಿಂದ ಬೇರ್ಟಟ್ಟು ಹಣದಾಸೆಗೆ ಅವಿವಾಹಿತ ಪುರುಷೆನ್ನೇ ಟಾರ್ಗೆಟ್‌ ಮಾಡಿ ಮಾದುವೆಯಾಗಿ ಸ್ವಲ್ಪ ದಿನಕ್ಕೆಯೇ ದುಡ್ಡು ಬಂಗಾರವನ್ನು ಎತ್ತಿಕೊಂಡ ಎಸ್ಕೇಪ್‌ ಆಗುತ್ತಿದ್ದಳು. ಹೀಗೆ ಡಿವೈಎಸ್ಪಿ, ಎಸ್ಪಿ, ಉದ್ಯಮಿಗಳು ಸೇರಿದಂತೆ 50 ಜನರಿಗೆ ವಂಚಿಸಿದ್ದಾಳೆ. ಇದೀಗ ಆಕೆಯ ಮೋಸದಾಟ ಬಯಲಾಗಿದ್ದು, ಪೊಲೀಸರ ಅತಿಥಿಯಾಗಿದ್ದಾಳೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

12 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

18 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

21 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago