Categories: ತುಮಕೂರು

ಹಣದ ದುರಾಸೆ: ಚಿನ್ನ ದೋಚಲು ಹೋಗಿ, ವಯೋವೃದ್ದೆಯ ಜೀವ ತೆಗೆದ ಪಾಪಿ: ಆರೋಪಿ ಬಂಧನ

ಹಣದ ದುರಾಸೆಗಾಗಿ ಚಿನ್ನ ದೋಚಲು ಹೋಗಿ, ವಯೋವೃದ್ದೆಯನ್ನು ಕೊಲೆಮಾಡಿದ ಆರೋಪಿಯನ್ನು ಶಿರಾ ಗ್ರಾಮಾಂತರ ವೃತ್ತದ ಪೊಲೀಸರು ಬಂಧನ ಮಾಡಿದ್ದಾರೆ.

ಅ.31ರಂದು ಶಿರಾ ತಾಲ್ಲೂಕು, ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ಸರಹದ್ದು ದೊಡ್ಡಬಾಣಗೆರೆ ಗ್ರಾಮದ ಮನೆಯಲ್ಲಿ ಒಂಟಿಯಾಗಿದ್ದ ಸುಮಾರು 86 ವರ್ಷದ ಪುಟೀರಮ್ಮ ಎನ್ನುವ ವಯೋವೃದ್ದೆಯನ್ನು ಬರ್ಬರವಾಗಿ ಕೊಲೆ ಮಾಡಿ ಆಕೆಯ ಕೊರಳಲ್ಲಿದ್ದ ಸುಮಾರು 53 ಗ್ರಾಂ ಚಿನ್ನದ ಸರವನ್ನು ಅಪಹರಿಸಲಾಗಿತ್ತು. ಈ ಬಗ್ಗೆ ಮೃತೆಯ ಮಗ ವೀರಣ್ಣ ನೀಡಿದ ದೂರಿನ ಮೇರೆಗೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ಮೊ.ನಂ. 138/2025 ಕಲಂ 103, 309(6) ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ದೊಡ್ಡಬಾಣಗೆರೆ ಗ್ರಾಮದ ಮೃತೆಯ ಸಂಬಂಧಿಕನಾದ ಆರೋಪಿ ಶ್ರೀಧರ ಕುಡಿತ, ಹೆಂಗಸರ ಸಹವಾಸ ಜೂಜಾಟದಂತಹ ದುಶ್ಚಟಗಳಿಗೆ ಒಳಗಾಗಿದ್ದು, ಹಣದ ದುರಾಸೆಗಾಗಿ ಅ.31ರಂದು ಒಂಟಿಯಾಗಿ ಅಡುಗೆ ಮನೆಯಲ್ಲಿದ್ದ ಪುಟೀರಮ್ಮರವರಿಗೆ ಹಿಂದಿನಿಂದ ಬಂದು ಬಟ್ಟೆಯ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೆಳಗೆ ಬೀಳಿಸಿ ಮುಖಕ್ಕೆ ಟವೆಲ್ ಒತ್ತಿಹಿಡಿದು ಕೊಲೆ ಮಾಡಿ ಆಕೆಯ ಕೊರಳಿನಲ್ಲಿದ್ದ 53 ಗ್ರಾಂ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದನು.

ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ರವರ ಮಾರ್ಗದರ್ಶನದಲ್ಲಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಸಿ.ಗೋಪಾಲ್ ಮತ್ತು ಪುರುಷೋತ್ತಮ.ಎಂ.ಎಲ್. ರವರ ನೇತೃತ್ವದಲ್ಲಿ, ಶಿರಾ ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಬಿ.ಕೆ. ಶೇಖರ್ ರವರ ಮಾರ್ಗಸೂಚನೆ ಮೇರೆಗೆ, ಶಿರಾ ಗ್ರಾಮಾಂತರ ವೃತ್ತದ ಸಿಪಿಐ, ಡಿ.ಜಿ.ಶ್ರೀನಿವಾಸ, ಪಿಎಸ್‌ಐ ಸಂಜಯ್, ಎ.ಎಸ್.ಐ ನರಸಿಂಹಯ್ಯ ರವರುಗಳು ಮತ್ತು ಸಿಬ್ಬಂದಿ ಸಿ.ಪಿ.ಕಿರಣ್‌ ಕುಮಾರ್, ಪ್ರಸಾದ್‌ ಬಿ.ಕೆ, ರೇಣುಕ, ಹನುಮಂತಚಾರ್, ಷಫೀವುಲ್ಲಾ, ಕರಿಯಪ್ಪ, ಭೂತರಾಜು ಮತ್ತು ಚಾಲಕರುಗಳಾದ ಮಂಜುನಾಥ, ರಘುಕುಮಾ‌ರ್ ಜಿಲ್ಲಾ ಪೊಲೀಸ್ ಕಚೇರಿಯ ನರಸಿಂಹರಾಜು ಮತ್ತು ದುಶ್ಯಂತ್ ರವರುಗಳ ಅಪರಾಧ ಪತ್ತೆ ತಂಡವನ್ನು ರಚಿಸಿದ್ದು, ಸದರಿ ತಂಡವು ಕಾರ್ಯಚರಣೆ ನಡೆಸಿ ಶೀಘ್ರವಾಗಿ ಶಿರಾ ನಗರದ ಕೆ.ಎಸ್.ಆರ್.ಟಿ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದ್ದು. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸುಲಿಗೆ ಮಾಡಿದ ಸರವನ್ನು ಬೆಂಗಳೂರು ನಗರದ ಬಾಗಲುಕುಂಟೆಯಲ್ಲಿರುವ ಖಾಸಗಿ ಬ್ಯಾಂಕಿನಲ್ಲಿ 2,01,000=00 ರೂ.ಗಳಿಗೆ ಗಿರವಿ ಇಟ್ಟಿದ್ದು, ಈ ಗಿರಿವಿಯಿಂದ ಬಂದ ಹಣದಲ್ಲಿ ಒಂದು ಮೊಬೈಲ್ ಫೋನ್, ಬಟ್ಟೆಗಳನ್ನು ಖರೀದಿಸಿ ಹಾಗೂ ಲೈಂಗಿಕ ಕಾರ್ಯಕರ್ತೆಯರ ಸಹವಾಸಕ್ಕೆ ದುಂದುವೆಚ್ಚ ಮಾಡಿರುತ್ತಾನೆಂದು ತಿಳಿದು ಬಂದಿರುತ್ತದೆ. ಈತನು ಬೆಂಗಳೂರು ನಗರದ ಮಡಿವಾಳ ಮತ್ತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಸುಲಿಗೆ ಹಾಗೂ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿರುತ್ತದೆ. ಪತ್ತೆ ತಂಡವು ಆರೋಪಿತನು ಖಾಸಗಿ ಬ್ಯಾಂಕಿನಲ್ಲಿ ಒತ್ತೆ ಇಟ್ಟಿದ್ದ 53 ಗ್ರಾಂ ಚಿನ್ನದ ಸರವನ್ನು ಯಥಾವತ್ತಾಗಿ ವಶಪಡಿಸಿಕೊಂಡಿದ್ದು ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತ ಆರೋಪಿಯ ಹೆಸರು ಮತ್ತು ವಿಳಾಸ.

ಶ್ರೀಧರ ಬಿನ್ ಲೇಟ್ ಈರಣ್ಣ 30 ವರ್ಷ ವ್ಯವಸಾಯ ಮತ್ತು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವ ಕೆಲಸ. ದೊಡ್ಡಬಾಣಗೆರೆ ಗ್ರಾಮ ಶಿರಾ ತಾಲ್ಲೂಕ್ ತುಮಕೂರು ಜಿಲ್ಲೆ.

ಆರೋಪಿಯಿಂದ ವಶಪಡಿಸಿಕೊಂಡ ಮಾಲುಗಳ ವಿವರ

ಸುಮಾರು 6 ಲಕ್ಷ ರೂ ಬೆಲೆ ಬಾಳುವ 53 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಮತ್ತು ಎರಡು ಮೊಬೈಲ್ ಫೋನ್‌ಗಳು.

ಆರೋಪಿಯನ್ನು ಪತ್ತೆಹಚ್ಚಿ ಚಿನ್ನದಸರವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಸದರಿ ಪತ್ತೆ ತಂಡವನ್ನು ಪೊಲೀಸ್ ಅಧೀಕ್ಷಕರಾದ ಕೆ.ವಿ.ಅಶೋಕ್, ಐ.ಪಿ.ಎಸ್ ರವರು ಪ್ರಶಂಸಿರುತ್ತಾರೆ.

ಚಿನ್ನದ ಬೆಲೆ ಮಿತಿಮೀರಿ ಏರಿಕೆಯಾಗಿರುವುದರಿಂದ ಒಂಟಿಯಾಗಿ ವಾಸಿಸುವ ವಯೋವೃದ್ಧರು ಚಿನ್ನದ ಆಭರಣಗಳನ್ನು ಧರಿಸುವಾಗ ಎಚ್ಚರಿಕೆಯಿಂದ ಇರಬೇಕೆಂದು ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಮನವಿ ಮಾಡಿದೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

23 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago