Categories: ತುಮಕೂರು

ಹಣದ ದುರಾಸೆ: ಚಿನ್ನ ದೋಚಲು ಹೋಗಿ, ವಯೋವೃದ್ದೆಯ ಜೀವ ತೆಗೆದ ಪಾಪಿ: ಆರೋಪಿ ಬಂಧನ

ಹಣದ ದುರಾಸೆಗಾಗಿ ಚಿನ್ನ ದೋಚಲು ಹೋಗಿ, ವಯೋವೃದ್ದೆಯನ್ನು ಕೊಲೆಮಾಡಿದ ಆರೋಪಿಯನ್ನು ಶಿರಾ ಗ್ರಾಮಾಂತರ ವೃತ್ತದ ಪೊಲೀಸರು ಬಂಧನ ಮಾಡಿದ್ದಾರೆ.

ಅ.31ರಂದು ಶಿರಾ ತಾಲ್ಲೂಕು, ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ಸರಹದ್ದು ದೊಡ್ಡಬಾಣಗೆರೆ ಗ್ರಾಮದ ಮನೆಯಲ್ಲಿ ಒಂಟಿಯಾಗಿದ್ದ ಸುಮಾರು 86 ವರ್ಷದ ಪುಟೀರಮ್ಮ ಎನ್ನುವ ವಯೋವೃದ್ದೆಯನ್ನು ಬರ್ಬರವಾಗಿ ಕೊಲೆ ಮಾಡಿ ಆಕೆಯ ಕೊರಳಲ್ಲಿದ್ದ ಸುಮಾರು 53 ಗ್ರಾಂ ಚಿನ್ನದ ಸರವನ್ನು ಅಪಹರಿಸಲಾಗಿತ್ತು. ಈ ಬಗ್ಗೆ ಮೃತೆಯ ಮಗ ವೀರಣ್ಣ ನೀಡಿದ ದೂರಿನ ಮೇರೆಗೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ಮೊ.ನಂ. 138/2025 ಕಲಂ 103, 309(6) ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ದೊಡ್ಡಬಾಣಗೆರೆ ಗ್ರಾಮದ ಮೃತೆಯ ಸಂಬಂಧಿಕನಾದ ಆರೋಪಿ ಶ್ರೀಧರ ಕುಡಿತ, ಹೆಂಗಸರ ಸಹವಾಸ ಜೂಜಾಟದಂತಹ ದುಶ್ಚಟಗಳಿಗೆ ಒಳಗಾಗಿದ್ದು, ಹಣದ ದುರಾಸೆಗಾಗಿ ಅ.31ರಂದು ಒಂಟಿಯಾಗಿ ಅಡುಗೆ ಮನೆಯಲ್ಲಿದ್ದ ಪುಟೀರಮ್ಮರವರಿಗೆ ಹಿಂದಿನಿಂದ ಬಂದು ಬಟ್ಟೆಯ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೆಳಗೆ ಬೀಳಿಸಿ ಮುಖಕ್ಕೆ ಟವೆಲ್ ಒತ್ತಿಹಿಡಿದು ಕೊಲೆ ಮಾಡಿ ಆಕೆಯ ಕೊರಳಿನಲ್ಲಿದ್ದ 53 ಗ್ರಾಂ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದನು.

ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ರವರ ಮಾರ್ಗದರ್ಶನದಲ್ಲಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಸಿ.ಗೋಪಾಲ್ ಮತ್ತು ಪುರುಷೋತ್ತಮ.ಎಂ.ಎಲ್. ರವರ ನೇತೃತ್ವದಲ್ಲಿ, ಶಿರಾ ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಬಿ.ಕೆ. ಶೇಖರ್ ರವರ ಮಾರ್ಗಸೂಚನೆ ಮೇರೆಗೆ, ಶಿರಾ ಗ್ರಾಮಾಂತರ ವೃತ್ತದ ಸಿಪಿಐ, ಡಿ.ಜಿ.ಶ್ರೀನಿವಾಸ, ಪಿಎಸ್‌ಐ ಸಂಜಯ್, ಎ.ಎಸ್.ಐ ನರಸಿಂಹಯ್ಯ ರವರುಗಳು ಮತ್ತು ಸಿಬ್ಬಂದಿ ಸಿ.ಪಿ.ಕಿರಣ್‌ ಕುಮಾರ್, ಪ್ರಸಾದ್‌ ಬಿ.ಕೆ, ರೇಣುಕ, ಹನುಮಂತಚಾರ್, ಷಫೀವುಲ್ಲಾ, ಕರಿಯಪ್ಪ, ಭೂತರಾಜು ಮತ್ತು ಚಾಲಕರುಗಳಾದ ಮಂಜುನಾಥ, ರಘುಕುಮಾ‌ರ್ ಜಿಲ್ಲಾ ಪೊಲೀಸ್ ಕಚೇರಿಯ ನರಸಿಂಹರಾಜು ಮತ್ತು ದುಶ್ಯಂತ್ ರವರುಗಳ ಅಪರಾಧ ಪತ್ತೆ ತಂಡವನ್ನು ರಚಿಸಿದ್ದು, ಸದರಿ ತಂಡವು ಕಾರ್ಯಚರಣೆ ನಡೆಸಿ ಶೀಘ್ರವಾಗಿ ಶಿರಾ ನಗರದ ಕೆ.ಎಸ್.ಆರ್.ಟಿ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದ್ದು. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸುಲಿಗೆ ಮಾಡಿದ ಸರವನ್ನು ಬೆಂಗಳೂರು ನಗರದ ಬಾಗಲುಕುಂಟೆಯಲ್ಲಿರುವ ಖಾಸಗಿ ಬ್ಯಾಂಕಿನಲ್ಲಿ 2,01,000=00 ರೂ.ಗಳಿಗೆ ಗಿರವಿ ಇಟ್ಟಿದ್ದು, ಈ ಗಿರಿವಿಯಿಂದ ಬಂದ ಹಣದಲ್ಲಿ ಒಂದು ಮೊಬೈಲ್ ಫೋನ್, ಬಟ್ಟೆಗಳನ್ನು ಖರೀದಿಸಿ ಹಾಗೂ ಲೈಂಗಿಕ ಕಾರ್ಯಕರ್ತೆಯರ ಸಹವಾಸಕ್ಕೆ ದುಂದುವೆಚ್ಚ ಮಾಡಿರುತ್ತಾನೆಂದು ತಿಳಿದು ಬಂದಿರುತ್ತದೆ. ಈತನು ಬೆಂಗಳೂರು ನಗರದ ಮಡಿವಾಳ ಮತ್ತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಸುಲಿಗೆ ಹಾಗೂ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿರುತ್ತದೆ. ಪತ್ತೆ ತಂಡವು ಆರೋಪಿತನು ಖಾಸಗಿ ಬ್ಯಾಂಕಿನಲ್ಲಿ ಒತ್ತೆ ಇಟ್ಟಿದ್ದ 53 ಗ್ರಾಂ ಚಿನ್ನದ ಸರವನ್ನು ಯಥಾವತ್ತಾಗಿ ವಶಪಡಿಸಿಕೊಂಡಿದ್ದು ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತ ಆರೋಪಿಯ ಹೆಸರು ಮತ್ತು ವಿಳಾಸ.

ಶ್ರೀಧರ ಬಿನ್ ಲೇಟ್ ಈರಣ್ಣ 30 ವರ್ಷ ವ್ಯವಸಾಯ ಮತ್ತು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವ ಕೆಲಸ. ದೊಡ್ಡಬಾಣಗೆರೆ ಗ್ರಾಮ ಶಿರಾ ತಾಲ್ಲೂಕ್ ತುಮಕೂರು ಜಿಲ್ಲೆ.

ಆರೋಪಿಯಿಂದ ವಶಪಡಿಸಿಕೊಂಡ ಮಾಲುಗಳ ವಿವರ

ಸುಮಾರು 6 ಲಕ್ಷ ರೂ ಬೆಲೆ ಬಾಳುವ 53 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಮತ್ತು ಎರಡು ಮೊಬೈಲ್ ಫೋನ್‌ಗಳು.

ಆರೋಪಿಯನ್ನು ಪತ್ತೆಹಚ್ಚಿ ಚಿನ್ನದಸರವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಸದರಿ ಪತ್ತೆ ತಂಡವನ್ನು ಪೊಲೀಸ್ ಅಧೀಕ್ಷಕರಾದ ಕೆ.ವಿ.ಅಶೋಕ್, ಐ.ಪಿ.ಎಸ್ ರವರು ಪ್ರಶಂಸಿರುತ್ತಾರೆ.

ಚಿನ್ನದ ಬೆಲೆ ಮಿತಿಮೀರಿ ಏರಿಕೆಯಾಗಿರುವುದರಿಂದ ಒಂಟಿಯಾಗಿ ವಾಸಿಸುವ ವಯೋವೃದ್ಧರು ಚಿನ್ನದ ಆಭರಣಗಳನ್ನು ಧರಿಸುವಾಗ ಎಚ್ಚರಿಕೆಯಿಂದ ಇರಬೇಕೆಂದು ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಮನವಿ ಮಾಡಿದೆ.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

19 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

21 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

1 day ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

2 days ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

2 days ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

2 days ago