ಹಣದ ದುರಾಸೆಗಾಗಿ ಚಿನ್ನ ದೋಚಲು ಹೋಗಿ, ವಯೋವೃದ್ದೆಯನ್ನು ಕೊಲೆಮಾಡಿದ ಆರೋಪಿಯನ್ನು ಶಿರಾ ಗ್ರಾಮಾಂತರ ವೃತ್ತದ ಪೊಲೀಸರು ಬಂಧನ ಮಾಡಿದ್ದಾರೆ.
ಅ.31ರಂದು ಶಿರಾ ತಾಲ್ಲೂಕು, ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ಸರಹದ್ದು ದೊಡ್ಡಬಾಣಗೆರೆ ಗ್ರಾಮದ ಮನೆಯಲ್ಲಿ ಒಂಟಿಯಾಗಿದ್ದ ಸುಮಾರು 86 ವರ್ಷದ ಪುಟೀರಮ್ಮ ಎನ್ನುವ ವಯೋವೃದ್ದೆಯನ್ನು ಬರ್ಬರವಾಗಿ ಕೊಲೆ ಮಾಡಿ ಆಕೆಯ ಕೊರಳಲ್ಲಿದ್ದ ಸುಮಾರು 53 ಗ್ರಾಂ ಚಿನ್ನದ ಸರವನ್ನು ಅಪಹರಿಸಲಾಗಿತ್ತು. ಈ ಬಗ್ಗೆ ಮೃತೆಯ ಮಗ ವೀರಣ್ಣ ನೀಡಿದ ದೂರಿನ ಮೇರೆಗೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ಮೊ.ನಂ. 138/2025 ಕಲಂ 103, 309(6) ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.
ದೊಡ್ಡಬಾಣಗೆರೆ ಗ್ರಾಮದ ಮೃತೆಯ ಸಂಬಂಧಿಕನಾದ ಆರೋಪಿ ಶ್ರೀಧರ ಕುಡಿತ, ಹೆಂಗಸರ ಸಹವಾಸ ಜೂಜಾಟದಂತಹ ದುಶ್ಚಟಗಳಿಗೆ ಒಳಗಾಗಿದ್ದು, ಹಣದ ದುರಾಸೆಗಾಗಿ ಅ.31ರಂದು ಒಂಟಿಯಾಗಿ ಅಡುಗೆ ಮನೆಯಲ್ಲಿದ್ದ ಪುಟೀರಮ್ಮರವರಿಗೆ ಹಿಂದಿನಿಂದ ಬಂದು ಬಟ್ಟೆಯ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೆಳಗೆ ಬೀಳಿಸಿ ಮುಖಕ್ಕೆ ಟವೆಲ್ ಒತ್ತಿಹಿಡಿದು ಕೊಲೆ ಮಾಡಿ ಆಕೆಯ ಕೊರಳಿನಲ್ಲಿದ್ದ 53 ಗ್ರಾಂ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದನು.
ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ರವರ ಮಾರ್ಗದರ್ಶನದಲ್ಲಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಸಿ.ಗೋಪಾಲ್ ಮತ್ತು ಪುರುಷೋತ್ತಮ.ಎಂ.ಎಲ್. ರವರ ನೇತೃತ್ವದಲ್ಲಿ, ಶಿರಾ ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಬಿ.ಕೆ. ಶೇಖರ್ ರವರ ಮಾರ್ಗಸೂಚನೆ ಮೇರೆಗೆ, ಶಿರಾ ಗ್ರಾಮಾಂತರ ವೃತ್ತದ ಸಿಪಿಐ, ಡಿ.ಜಿ.ಶ್ರೀನಿವಾಸ, ಪಿಎಸ್ಐ ಸಂಜಯ್, ಎ.ಎಸ್.ಐ ನರಸಿಂಹಯ್ಯ ರವರುಗಳು ಮತ್ತು ಸಿಬ್ಬಂದಿ ಸಿ.ಪಿ.ಕಿರಣ್ ಕುಮಾರ್, ಪ್ರಸಾದ್ ಬಿ.ಕೆ, ರೇಣುಕ, ಹನುಮಂತಚಾರ್, ಷಫೀವುಲ್ಲಾ, ಕರಿಯಪ್ಪ, ಭೂತರಾಜು ಮತ್ತು ಚಾಲಕರುಗಳಾದ ಮಂಜುನಾಥ, ರಘುಕುಮಾರ್ ಜಿಲ್ಲಾ ಪೊಲೀಸ್ ಕಚೇರಿಯ ನರಸಿಂಹರಾಜು ಮತ್ತು ದುಶ್ಯಂತ್ ರವರುಗಳ ಅಪರಾಧ ಪತ್ತೆ ತಂಡವನ್ನು ರಚಿಸಿದ್ದು, ಸದರಿ ತಂಡವು ಕಾರ್ಯಚರಣೆ ನಡೆಸಿ ಶೀಘ್ರವಾಗಿ ಶಿರಾ ನಗರದ ಕೆ.ಎಸ್.ಆರ್.ಟಿ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದ್ದು. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸುಲಿಗೆ ಮಾಡಿದ ಸರವನ್ನು ಬೆಂಗಳೂರು ನಗರದ ಬಾಗಲುಕುಂಟೆಯಲ್ಲಿರುವ ಖಾಸಗಿ ಬ್ಯಾಂಕಿನಲ್ಲಿ 2,01,000=00 ರೂ.ಗಳಿಗೆ ಗಿರವಿ ಇಟ್ಟಿದ್ದು, ಈ ಗಿರಿವಿಯಿಂದ ಬಂದ ಹಣದಲ್ಲಿ ಒಂದು ಮೊಬೈಲ್ ಫೋನ್, ಬಟ್ಟೆಗಳನ್ನು ಖರೀದಿಸಿ ಹಾಗೂ ಲೈಂಗಿಕ ಕಾರ್ಯಕರ್ತೆಯರ ಸಹವಾಸಕ್ಕೆ ದುಂದುವೆಚ್ಚ ಮಾಡಿರುತ್ತಾನೆಂದು ತಿಳಿದು ಬಂದಿರುತ್ತದೆ. ಈತನು ಬೆಂಗಳೂರು ನಗರದ ಮಡಿವಾಳ ಮತ್ತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಸುಲಿಗೆ ಹಾಗೂ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿರುತ್ತದೆ. ಪತ್ತೆ ತಂಡವು ಆರೋಪಿತನು ಖಾಸಗಿ ಬ್ಯಾಂಕಿನಲ್ಲಿ ಒತ್ತೆ ಇಟ್ಟಿದ್ದ 53 ಗ್ರಾಂ ಚಿನ್ನದ ಸರವನ್ನು ಯಥಾವತ್ತಾಗಿ ವಶಪಡಿಸಿಕೊಂಡಿದ್ದು ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಂಧಿತ ಆರೋಪಿಯ ಹೆಸರು ಮತ್ತು ವಿಳಾಸ.
ಶ್ರೀಧರ ಬಿನ್ ಲೇಟ್ ಈರಣ್ಣ 30 ವರ್ಷ ವ್ಯವಸಾಯ ಮತ್ತು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವ ಕೆಲಸ. ದೊಡ್ಡಬಾಣಗೆರೆ ಗ್ರಾಮ ಶಿರಾ ತಾಲ್ಲೂಕ್ ತುಮಕೂರು ಜಿಲ್ಲೆ.
ಆರೋಪಿಯಿಂದ ವಶಪಡಿಸಿಕೊಂಡ ಮಾಲುಗಳ ವಿವರ
ಸುಮಾರು 6 ಲಕ್ಷ ರೂ ಬೆಲೆ ಬಾಳುವ 53 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಮತ್ತು ಎರಡು ಮೊಬೈಲ್ ಫೋನ್ಗಳು.
ಆರೋಪಿಯನ್ನು ಪತ್ತೆಹಚ್ಚಿ ಚಿನ್ನದಸರವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಸದರಿ ಪತ್ತೆ ತಂಡವನ್ನು ಪೊಲೀಸ್ ಅಧೀಕ್ಷಕರಾದ ಕೆ.ವಿ.ಅಶೋಕ್, ಐ.ಪಿ.ಎಸ್ ರವರು ಪ್ರಶಂಸಿರುತ್ತಾರೆ.
ಚಿನ್ನದ ಬೆಲೆ ಮಿತಿಮೀರಿ ಏರಿಕೆಯಾಗಿರುವುದರಿಂದ ಒಂಟಿಯಾಗಿ ವಾಸಿಸುವ ವಯೋವೃದ್ಧರು ಚಿನ್ನದ ಆಭರಣಗಳನ್ನು ಧರಿಸುವಾಗ ಎಚ್ಚರಿಕೆಯಿಂದ ಇರಬೇಕೆಂದು ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
When it involves on-line gambling enterpris padişahbet günceles, among one of the most tempting deals…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…