Categories: ತುಮಕೂರು

ಹಣದ ದುರಾಸೆ: ಚಿನ್ನ ದೋಚಲು ಹೋಗಿ, ವಯೋವೃದ್ದೆಯ ಜೀವ ತೆಗೆದ ಪಾಪಿ: ಆರೋಪಿ ಬಂಧನ

ಹಣದ ದುರಾಸೆಗಾಗಿ ಚಿನ್ನ ದೋಚಲು ಹೋಗಿ, ವಯೋವೃದ್ದೆಯನ್ನು ಕೊಲೆಮಾಡಿದ ಆರೋಪಿಯನ್ನು ಶಿರಾ ಗ್ರಾಮಾಂತರ ವೃತ್ತದ ಪೊಲೀಸರು ಬಂಧನ ಮಾಡಿದ್ದಾರೆ.

ಅ.31ರಂದು ಶಿರಾ ತಾಲ್ಲೂಕು, ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ಸರಹದ್ದು ದೊಡ್ಡಬಾಣಗೆರೆ ಗ್ರಾಮದ ಮನೆಯಲ್ಲಿ ಒಂಟಿಯಾಗಿದ್ದ ಸುಮಾರು 86 ವರ್ಷದ ಪುಟೀರಮ್ಮ ಎನ್ನುವ ವಯೋವೃದ್ದೆಯನ್ನು ಬರ್ಬರವಾಗಿ ಕೊಲೆ ಮಾಡಿ ಆಕೆಯ ಕೊರಳಲ್ಲಿದ್ದ ಸುಮಾರು 53 ಗ್ರಾಂ ಚಿನ್ನದ ಸರವನ್ನು ಅಪಹರಿಸಲಾಗಿತ್ತು. ಈ ಬಗ್ಗೆ ಮೃತೆಯ ಮಗ ವೀರಣ್ಣ ನೀಡಿದ ದೂರಿನ ಮೇರೆಗೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ಮೊ.ನಂ. 138/2025 ಕಲಂ 103, 309(6) ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ದೊಡ್ಡಬಾಣಗೆರೆ ಗ್ರಾಮದ ಮೃತೆಯ ಸಂಬಂಧಿಕನಾದ ಆರೋಪಿ ಶ್ರೀಧರ ಕುಡಿತ, ಹೆಂಗಸರ ಸಹವಾಸ ಜೂಜಾಟದಂತಹ ದುಶ್ಚಟಗಳಿಗೆ ಒಳಗಾಗಿದ್ದು, ಹಣದ ದುರಾಸೆಗಾಗಿ ಅ.31ರಂದು ಒಂಟಿಯಾಗಿ ಅಡುಗೆ ಮನೆಯಲ್ಲಿದ್ದ ಪುಟೀರಮ್ಮರವರಿಗೆ ಹಿಂದಿನಿಂದ ಬಂದು ಬಟ್ಟೆಯ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೆಳಗೆ ಬೀಳಿಸಿ ಮುಖಕ್ಕೆ ಟವೆಲ್ ಒತ್ತಿಹಿಡಿದು ಕೊಲೆ ಮಾಡಿ ಆಕೆಯ ಕೊರಳಿನಲ್ಲಿದ್ದ 53 ಗ್ರಾಂ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದನು.

ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ರವರ ಮಾರ್ಗದರ್ಶನದಲ್ಲಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಸಿ.ಗೋಪಾಲ್ ಮತ್ತು ಪುರುಷೋತ್ತಮ.ಎಂ.ಎಲ್. ರವರ ನೇತೃತ್ವದಲ್ಲಿ, ಶಿರಾ ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಬಿ.ಕೆ. ಶೇಖರ್ ರವರ ಮಾರ್ಗಸೂಚನೆ ಮೇರೆಗೆ, ಶಿರಾ ಗ್ರಾಮಾಂತರ ವೃತ್ತದ ಸಿಪಿಐ, ಡಿ.ಜಿ.ಶ್ರೀನಿವಾಸ, ಪಿಎಸ್‌ಐ ಸಂಜಯ್, ಎ.ಎಸ್.ಐ ನರಸಿಂಹಯ್ಯ ರವರುಗಳು ಮತ್ತು ಸಿಬ್ಬಂದಿ ಸಿ.ಪಿ.ಕಿರಣ್‌ ಕುಮಾರ್, ಪ್ರಸಾದ್‌ ಬಿ.ಕೆ, ರೇಣುಕ, ಹನುಮಂತಚಾರ್, ಷಫೀವುಲ್ಲಾ, ಕರಿಯಪ್ಪ, ಭೂತರಾಜು ಮತ್ತು ಚಾಲಕರುಗಳಾದ ಮಂಜುನಾಥ, ರಘುಕುಮಾ‌ರ್ ಜಿಲ್ಲಾ ಪೊಲೀಸ್ ಕಚೇರಿಯ ನರಸಿಂಹರಾಜು ಮತ್ತು ದುಶ್ಯಂತ್ ರವರುಗಳ ಅಪರಾಧ ಪತ್ತೆ ತಂಡವನ್ನು ರಚಿಸಿದ್ದು, ಸದರಿ ತಂಡವು ಕಾರ್ಯಚರಣೆ ನಡೆಸಿ ಶೀಘ್ರವಾಗಿ ಶಿರಾ ನಗರದ ಕೆ.ಎಸ್.ಆರ್.ಟಿ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದ್ದು. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸುಲಿಗೆ ಮಾಡಿದ ಸರವನ್ನು ಬೆಂಗಳೂರು ನಗರದ ಬಾಗಲುಕುಂಟೆಯಲ್ಲಿರುವ ಖಾಸಗಿ ಬ್ಯಾಂಕಿನಲ್ಲಿ 2,01,000=00 ರೂ.ಗಳಿಗೆ ಗಿರವಿ ಇಟ್ಟಿದ್ದು, ಈ ಗಿರಿವಿಯಿಂದ ಬಂದ ಹಣದಲ್ಲಿ ಒಂದು ಮೊಬೈಲ್ ಫೋನ್, ಬಟ್ಟೆಗಳನ್ನು ಖರೀದಿಸಿ ಹಾಗೂ ಲೈಂಗಿಕ ಕಾರ್ಯಕರ್ತೆಯರ ಸಹವಾಸಕ್ಕೆ ದುಂದುವೆಚ್ಚ ಮಾಡಿರುತ್ತಾನೆಂದು ತಿಳಿದು ಬಂದಿರುತ್ತದೆ. ಈತನು ಬೆಂಗಳೂರು ನಗರದ ಮಡಿವಾಳ ಮತ್ತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಸುಲಿಗೆ ಹಾಗೂ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿರುತ್ತದೆ. ಪತ್ತೆ ತಂಡವು ಆರೋಪಿತನು ಖಾಸಗಿ ಬ್ಯಾಂಕಿನಲ್ಲಿ ಒತ್ತೆ ಇಟ್ಟಿದ್ದ 53 ಗ್ರಾಂ ಚಿನ್ನದ ಸರವನ್ನು ಯಥಾವತ್ತಾಗಿ ವಶಪಡಿಸಿಕೊಂಡಿದ್ದು ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತ ಆರೋಪಿಯ ಹೆಸರು ಮತ್ತು ವಿಳಾಸ.

ಶ್ರೀಧರ ಬಿನ್ ಲೇಟ್ ಈರಣ್ಣ 30 ವರ್ಷ ವ್ಯವಸಾಯ ಮತ್ತು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವ ಕೆಲಸ. ದೊಡ್ಡಬಾಣಗೆರೆ ಗ್ರಾಮ ಶಿರಾ ತಾಲ್ಲೂಕ್ ತುಮಕೂರು ಜಿಲ್ಲೆ.

ಆರೋಪಿಯಿಂದ ವಶಪಡಿಸಿಕೊಂಡ ಮಾಲುಗಳ ವಿವರ

ಸುಮಾರು 6 ಲಕ್ಷ ರೂ ಬೆಲೆ ಬಾಳುವ 53 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಮತ್ತು ಎರಡು ಮೊಬೈಲ್ ಫೋನ್‌ಗಳು.

ಆರೋಪಿಯನ್ನು ಪತ್ತೆಹಚ್ಚಿ ಚಿನ್ನದಸರವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಸದರಿ ಪತ್ತೆ ತಂಡವನ್ನು ಪೊಲೀಸ್ ಅಧೀಕ್ಷಕರಾದ ಕೆ.ವಿ.ಅಶೋಕ್, ಐ.ಪಿ.ಎಸ್ ರವರು ಪ್ರಶಂಸಿರುತ್ತಾರೆ.

ಚಿನ್ನದ ಬೆಲೆ ಮಿತಿಮೀರಿ ಏರಿಕೆಯಾಗಿರುವುದರಿಂದ ಒಂಟಿಯಾಗಿ ವಾಸಿಸುವ ವಯೋವೃದ್ಧರು ಚಿನ್ನದ ಆಭರಣಗಳನ್ನು ಧರಿಸುವಾಗ ಎಚ್ಚರಿಕೆಯಿಂದ ಇರಬೇಕೆಂದು ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಮನವಿ ಮಾಡಿದೆ.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 hour ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

3 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

8 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago