Categories: ತುಮಕೂರು

ಹಣದ ದುರಾಸೆ: ಚಿನ್ನ ದೋಚಲು ಹೋಗಿ, ವಯೋವೃದ್ದೆಯ ಜೀವ ತೆಗೆದ ಪಾಪಿ: ಆರೋಪಿ ಬಂಧನ

ಹಣದ ದುರಾಸೆಗಾಗಿ ಚಿನ್ನ ದೋಚಲು ಹೋಗಿ, ವಯೋವೃದ್ದೆಯನ್ನು ಕೊಲೆಮಾಡಿದ ಆರೋಪಿಯನ್ನು ಶಿರಾ ಗ್ರಾಮಾಂತರ ವೃತ್ತದ ಪೊಲೀಸರು ಬಂಧನ ಮಾಡಿದ್ದಾರೆ.

ಅ.31ರಂದು ಶಿರಾ ತಾಲ್ಲೂಕು, ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ಸರಹದ್ದು ದೊಡ್ಡಬಾಣಗೆರೆ ಗ್ರಾಮದ ಮನೆಯಲ್ಲಿ ಒಂಟಿಯಾಗಿದ್ದ ಸುಮಾರು 86 ವರ್ಷದ ಪುಟೀರಮ್ಮ ಎನ್ನುವ ವಯೋವೃದ್ದೆಯನ್ನು ಬರ್ಬರವಾಗಿ ಕೊಲೆ ಮಾಡಿ ಆಕೆಯ ಕೊರಳಲ್ಲಿದ್ದ ಸುಮಾರು 53 ಗ್ರಾಂ ಚಿನ್ನದ ಸರವನ್ನು ಅಪಹರಿಸಲಾಗಿತ್ತು. ಈ ಬಗ್ಗೆ ಮೃತೆಯ ಮಗ ವೀರಣ್ಣ ನೀಡಿದ ದೂರಿನ ಮೇರೆಗೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ಮೊ.ನಂ. 138/2025 ಕಲಂ 103, 309(6) ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ದೊಡ್ಡಬಾಣಗೆರೆ ಗ್ರಾಮದ ಮೃತೆಯ ಸಂಬಂಧಿಕನಾದ ಆರೋಪಿ ಶ್ರೀಧರ ಕುಡಿತ, ಹೆಂಗಸರ ಸಹವಾಸ ಜೂಜಾಟದಂತಹ ದುಶ್ಚಟಗಳಿಗೆ ಒಳಗಾಗಿದ್ದು, ಹಣದ ದುರಾಸೆಗಾಗಿ ಅ.31ರಂದು ಒಂಟಿಯಾಗಿ ಅಡುಗೆ ಮನೆಯಲ್ಲಿದ್ದ ಪುಟೀರಮ್ಮರವರಿಗೆ ಹಿಂದಿನಿಂದ ಬಂದು ಬಟ್ಟೆಯ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೆಳಗೆ ಬೀಳಿಸಿ ಮುಖಕ್ಕೆ ಟವೆಲ್ ಒತ್ತಿಹಿಡಿದು ಕೊಲೆ ಮಾಡಿ ಆಕೆಯ ಕೊರಳಿನಲ್ಲಿದ್ದ 53 ಗ್ರಾಂ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದನು.

ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ರವರ ಮಾರ್ಗದರ್ಶನದಲ್ಲಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಸಿ.ಗೋಪಾಲ್ ಮತ್ತು ಪುರುಷೋತ್ತಮ.ಎಂ.ಎಲ್. ರವರ ನೇತೃತ್ವದಲ್ಲಿ, ಶಿರಾ ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಬಿ.ಕೆ. ಶೇಖರ್ ರವರ ಮಾರ್ಗಸೂಚನೆ ಮೇರೆಗೆ, ಶಿರಾ ಗ್ರಾಮಾಂತರ ವೃತ್ತದ ಸಿಪಿಐ, ಡಿ.ಜಿ.ಶ್ರೀನಿವಾಸ, ಪಿಎಸ್‌ಐ ಸಂಜಯ್, ಎ.ಎಸ್.ಐ ನರಸಿಂಹಯ್ಯ ರವರುಗಳು ಮತ್ತು ಸಿಬ್ಬಂದಿ ಸಿ.ಪಿ.ಕಿರಣ್‌ ಕುಮಾರ್, ಪ್ರಸಾದ್‌ ಬಿ.ಕೆ, ರೇಣುಕ, ಹನುಮಂತಚಾರ್, ಷಫೀವುಲ್ಲಾ, ಕರಿಯಪ್ಪ, ಭೂತರಾಜು ಮತ್ತು ಚಾಲಕರುಗಳಾದ ಮಂಜುನಾಥ, ರಘುಕುಮಾ‌ರ್ ಜಿಲ್ಲಾ ಪೊಲೀಸ್ ಕಚೇರಿಯ ನರಸಿಂಹರಾಜು ಮತ್ತು ದುಶ್ಯಂತ್ ರವರುಗಳ ಅಪರಾಧ ಪತ್ತೆ ತಂಡವನ್ನು ರಚಿಸಿದ್ದು, ಸದರಿ ತಂಡವು ಕಾರ್ಯಚರಣೆ ನಡೆಸಿ ಶೀಘ್ರವಾಗಿ ಶಿರಾ ನಗರದ ಕೆ.ಎಸ್.ಆರ್.ಟಿ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದ್ದು. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸುಲಿಗೆ ಮಾಡಿದ ಸರವನ್ನು ಬೆಂಗಳೂರು ನಗರದ ಬಾಗಲುಕುಂಟೆಯಲ್ಲಿರುವ ಖಾಸಗಿ ಬ್ಯಾಂಕಿನಲ್ಲಿ 2,01,000=00 ರೂ.ಗಳಿಗೆ ಗಿರವಿ ಇಟ್ಟಿದ್ದು, ಈ ಗಿರಿವಿಯಿಂದ ಬಂದ ಹಣದಲ್ಲಿ ಒಂದು ಮೊಬೈಲ್ ಫೋನ್, ಬಟ್ಟೆಗಳನ್ನು ಖರೀದಿಸಿ ಹಾಗೂ ಲೈಂಗಿಕ ಕಾರ್ಯಕರ್ತೆಯರ ಸಹವಾಸಕ್ಕೆ ದುಂದುವೆಚ್ಚ ಮಾಡಿರುತ್ತಾನೆಂದು ತಿಳಿದು ಬಂದಿರುತ್ತದೆ. ಈತನು ಬೆಂಗಳೂರು ನಗರದ ಮಡಿವಾಳ ಮತ್ತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಸುಲಿಗೆ ಹಾಗೂ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿರುತ್ತದೆ. ಪತ್ತೆ ತಂಡವು ಆರೋಪಿತನು ಖಾಸಗಿ ಬ್ಯಾಂಕಿನಲ್ಲಿ ಒತ್ತೆ ಇಟ್ಟಿದ್ದ 53 ಗ್ರಾಂ ಚಿನ್ನದ ಸರವನ್ನು ಯಥಾವತ್ತಾಗಿ ವಶಪಡಿಸಿಕೊಂಡಿದ್ದು ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತ ಆರೋಪಿಯ ಹೆಸರು ಮತ್ತು ವಿಳಾಸ.

ಶ್ರೀಧರ ಬಿನ್ ಲೇಟ್ ಈರಣ್ಣ 30 ವರ್ಷ ವ್ಯವಸಾಯ ಮತ್ತು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವ ಕೆಲಸ. ದೊಡ್ಡಬಾಣಗೆರೆ ಗ್ರಾಮ ಶಿರಾ ತಾಲ್ಲೂಕ್ ತುಮಕೂರು ಜಿಲ್ಲೆ.

ಆರೋಪಿಯಿಂದ ವಶಪಡಿಸಿಕೊಂಡ ಮಾಲುಗಳ ವಿವರ

ಸುಮಾರು 6 ಲಕ್ಷ ರೂ ಬೆಲೆ ಬಾಳುವ 53 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಮತ್ತು ಎರಡು ಮೊಬೈಲ್ ಫೋನ್‌ಗಳು.

ಆರೋಪಿಯನ್ನು ಪತ್ತೆಹಚ್ಚಿ ಚಿನ್ನದಸರವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಸದರಿ ಪತ್ತೆ ತಂಡವನ್ನು ಪೊಲೀಸ್ ಅಧೀಕ್ಷಕರಾದ ಕೆ.ವಿ.ಅಶೋಕ್, ಐ.ಪಿ.ಎಸ್ ರವರು ಪ್ರಶಂಸಿರುತ್ತಾರೆ.

ಚಿನ್ನದ ಬೆಲೆ ಮಿತಿಮೀರಿ ಏರಿಕೆಯಾಗಿರುವುದರಿಂದ ಒಂಟಿಯಾಗಿ ವಾಸಿಸುವ ವಯೋವೃದ್ಧರು ಚಿನ್ನದ ಆಭರಣಗಳನ್ನು ಧರಿಸುವಾಗ ಎಚ್ಚರಿಕೆಯಿಂದ ಇರಬೇಕೆಂದು ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಮನವಿ ಮಾಡಿದೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

20 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago