‘ದೃಶ್ಯ’ ಸಿನಿಮಾದ ಮಾದರಿಯಲ್ಲಿ ದೊಡ್ಡಬಳ್ಳಾಪುರದ ಹೊರವಲಯದ ನಾರಾಯಣ್ ಇನ್ಫೋಸಿಟಿಯಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಸೋಕೋ ತಂಡದೊಂದಿಗೆ ಶವವನ್ನು ಹೂತಿಟ್ಟ ಸ್ಥಳವನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಪರಿಶೀಲನೆ ವೇಳೆ ಶವದ ತಲೆ ಕೂದಲು, ಚಪ್ಪಲಿ ಸಿಕ್ಕಿದ್ದು, ಹೆಚ್ಚಿನ ಮಾಹಿತಿಗಾಗಿ ಮಧುರೆ ಕೆರೆಯಲ್ಲಿ ಮೂಳೆಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಅ.17ರಂದು ಸಂಜೆ 5.45 ಗಂಟೆ ಸಮಯದಲ್ಲಿ ದೇವರಾಜ್(65) ಬಾಶೆಟ್ಟಿಹಳ್ಳಿಯಲ್ಲಿರುವ ನಂದಿನಿ ಮಿಲ್ಕ್ ಪಾರ್ಲರ್ ನಿಂದ ಮತ್ತೆ ಮನೆಗೆ ಬಂದಿರುವುದಿಲ್ಲ. ಈ ಕುರಿತು ಮೃತ ದೇವರಾಜ್ ಕುಟುಂಬಸ್ಥರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ದಾಖಲು ಮಾಡುತ್ತಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಚುರುಕು ತನಿಖೆ ಪ್ರಾರಂಭಿಸಿ, ವ್ಯಕ್ತಿಯ ಕೊಲೆಯಾಗಿರುವುದನ್ನು ಖಚಿತಪಡಿಸಿಕೊಂಡ ಪೊಲೀಸರು ಆರೋಪಿಗಳಾದ ರಾಜಕುಮಾರ್, ಅನಿಲ್ ನನ್ನು ವಶಪಡಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.
ಘಟನೆ ವಿವರ
ಕೊಲೆ ಮಾಡಲು ಆರೋಪಿಗಳು ಪೂರ್ವ ತಯಾರಿ ಮಾಡಿಕೊಂಡಿರುತ್ತಾರೆ. ಕೊಲೆ ಮಾಡಿದ ನಂತೆ ಹೆಣವನ್ನು ಮುಚ್ಚಲು ದೊಡ್ಡಬಳ್ಳಾಪುರದ ಹೊರವಲಯದ ನಾರಾಯಣ್ ಇನ್ಫೋಸಿಟಿಯಲ್ಲಿ ಅ.15ರಂದು ಗುಂಡಿಯನ್ನು ಸಹ ತೆಗೆದಿರುತ್ತಾರೆ.
ಅ.17ರಂದು ಹಣ ಕೊಡುತ್ತೇನೆಂದು ಗೌರಿಬಿದನೂರು ಕಡೆ ಕರೆದುಕೊಂಡು ಹೋಗಿ ಕಾರಲ್ಲಿ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲ್ಲಲಾಗುತ್ತದೆ. ಕೊಲೆ ಮಾಡಿದ ನಂತರ ಅದೇ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ಈಗಾಗಲೇ ಗುಂಡಿ ತೋಡಿದ್ದ ಸ್ಥಳಕ್ಕೆ ಶವವನ್ನು ತೆಗೆದುಕೊಂಡು ಬಂದು ಗುಂಡಿಯಲ್ಲಿ ಮುಚ್ಚಲಾಗುತ್ತದೆ. ನಂತರ ಅನುಮಾನ ಬರುತ್ತದೆ ಎಂದು ಶವವನ್ನು ಗುಂಡಿಯಿಂದ ತೆಗೆದು ಗ್ಯಾರೇಜ್ ನಿಂದ ಮೆಟಲ್ ಡ್ರಂ ತಂದು ಅದರಲ್ಲಿ ಶವವನ್ನು ಹಾಕಿ ಸುಡಲಾಗುತ್ತದೆ. ಸುಟ್ಟ ನಂತರ ಬೂದಿಯನ್ನು ಮಧುರೆ ಕೆರೆಯಲ್ಲಿ ಹಾಕುತ್ತಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ..
ಮೊದಲು ಠಾಣೆಗೆ ದೂರು ನೀಡುವ ದಿನದಂದು ಮೃತನ ಕುಟುಂಬಸ್ಥರೊಂದಿಗೆ ಪೊಲೀಸ್ ಠಾಣೆಗೆ ಪ್ರಮುಖ ಕೊಲೆ ಆರೋಪಿ ರಾಜಕುಮಾರ್ ಸಹ ಕೊಲೆಗೂ ನನಗೂ ಏನೂ ಸಂಬಂಧವಿಲ್ಲವೆಂದು ಅಮಾಯಕನ ರೀತಿ ಬಂದಿರುತ್ತಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…