‘ದೃಶ್ಯ’ ಸಿನಿಮಾದ ಮಾದರಿಯಲ್ಲಿ ದೊಡ್ಡಬಳ್ಳಾಪುರದ ಹೊರವಲಯದ ನಾರಾಯಣ್ ಇನ್ಫೋಸಿಟಿಯಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಸೋಕೋ ತಂಡದೊಂದಿಗೆ ಶವವನ್ನು ಹೂತಿಟ್ಟ ಸ್ಥಳವನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಪರಿಶೀಲನೆ ವೇಳೆ ಶವದ ತಲೆ ಕೂದಲು, ಚಪ್ಪಲಿ ಸಿಕ್ಕಿದ್ದು, ಹೆಚ್ಚಿನ ಮಾಹಿತಿಗಾಗಿ ಮಧುರೆ ಕೆರೆಯಲ್ಲಿ ಮೂಳೆಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಅ.17ರಂದು ಸಂಜೆ 5.45 ಗಂಟೆ ಸಮಯದಲ್ಲಿ ದೇವರಾಜ್(65) ಬಾಶೆಟ್ಟಿಹಳ್ಳಿಯಲ್ಲಿರುವ ನಂದಿನಿ ಮಿಲ್ಕ್ ಪಾರ್ಲರ್ ನಿಂದ ಮತ್ತೆ ಮನೆಗೆ ಬಂದಿರುವುದಿಲ್ಲ. ಈ ಕುರಿತು ಮೃತ ದೇವರಾಜ್ ಕುಟುಂಬಸ್ಥರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ದಾಖಲು ಮಾಡುತ್ತಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಚುರುಕು ತನಿಖೆ ಪ್ರಾರಂಭಿಸಿ, ವ್ಯಕ್ತಿಯ ಕೊಲೆಯಾಗಿರುವುದನ್ನು ಖಚಿತಪಡಿಸಿಕೊಂಡ ಪೊಲೀಸರು ಆರೋಪಿಗಳಾದ ರಾಜಕುಮಾರ್, ಅನಿಲ್ ನನ್ನು ವಶಪಡಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.
ಘಟನೆ ವಿವರ
ಕೊಲೆ ಮಾಡಲು ಆರೋಪಿಗಳು ಪೂರ್ವ ತಯಾರಿ ಮಾಡಿಕೊಂಡಿರುತ್ತಾರೆ. ಕೊಲೆ ಮಾಡಿದ ನಂತೆ ಹೆಣವನ್ನು ಮುಚ್ಚಲು ದೊಡ್ಡಬಳ್ಳಾಪುರದ ಹೊರವಲಯದ ನಾರಾಯಣ್ ಇನ್ಫೋಸಿಟಿಯಲ್ಲಿ ಅ.15ರಂದು ಗುಂಡಿಯನ್ನು ಸಹ ತೆಗೆದಿರುತ್ತಾರೆ.
ಅ.17ರಂದು ಹಣ ಕೊಡುತ್ತೇನೆಂದು ಗೌರಿಬಿದನೂರು ಕಡೆ ಕರೆದುಕೊಂಡು ಹೋಗಿ ಕಾರಲ್ಲಿ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲ್ಲಲಾಗುತ್ತದೆ. ಕೊಲೆ ಮಾಡಿದ ನಂತರ ಅದೇ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ಈಗಾಗಲೇ ಗುಂಡಿ ತೋಡಿದ್ದ ಸ್ಥಳಕ್ಕೆ ಶವವನ್ನು ತೆಗೆದುಕೊಂಡು ಬಂದು ಗುಂಡಿಯಲ್ಲಿ ಮುಚ್ಚಲಾಗುತ್ತದೆ. ನಂತರ ಅನುಮಾನ ಬರುತ್ತದೆ ಎಂದು ಶವವನ್ನು ಗುಂಡಿಯಿಂದ ತೆಗೆದು ಗ್ಯಾರೇಜ್ ನಿಂದ ಮೆಟಲ್ ಡ್ರಂ ತಂದು ಅದರಲ್ಲಿ ಶವವನ್ನು ಹಾಕಿ ಸುಡಲಾಗುತ್ತದೆ. ಸುಟ್ಟ ನಂತರ ಬೂದಿಯನ್ನು ಮಧುರೆ ಕೆರೆಯಲ್ಲಿ ಹಾಕುತ್ತಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ..
ಮೊದಲು ಠಾಣೆಗೆ ದೂರು ನೀಡುವ ದಿನದಂದು ಮೃತನ ಕುಟುಂಬಸ್ಥರೊಂದಿಗೆ ಪೊಲೀಸ್ ಠಾಣೆಗೆ ಪ್ರಮುಖ ಕೊಲೆ ಆರೋಪಿ ರಾಜಕುಮಾರ್ ಸಹ ಕೊಲೆಗೂ ನನಗೂ ಏನೂ ಸಂಬಂಧವಿಲ್ಲವೆಂದು ಅಮಾಯಕನ ರೀತಿ ಬಂದಿರುತ್ತಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…