ಬೆಂಗಳೂರು: 54 ವರ್ಷದ ವ್ಯಕ್ತಿಯೊಬ್ಬರ ಹಣೆಯ ಮೇಲೆ ನಿಂಬೆ ಗಾತ್ರದ “ ಟ್ಯೂಮರ್” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ಮೂಲಕ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ತೆಗೆದು ಹಾಕಲಾಗಿದೆ.
ಮುಂಭಾಗದ ಸೈನಸ್ನ ಸೋಂಕನ್ನು ಒಳಗೊಂಡಿರುವ ಅಪರೂಪದ ಮತ್ತು ಆಕ್ರಮಣಕಾರಿ ಸ್ಥಿತಿಯಾಗಿರುವ ಪಾಟ್ನ ಪಫಿ ಟ್ಯೂಮರ್ ಇದಾಗಿತ್ತು.
ಬನ್ನೇರುಘಟ್ಟ ರಸ್ತೆ ಫೋರ್ಟಿಸ್ ಆಸ್ಪತ್ರೆಯ ಇಎನ್ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಡಾ. ಸುಶೀನ್ ದತ್ ಮತ್ತು ಓಟೋರಿನೋಲಾರಿಂಗೋಲಜಿ ಸಲಹೆಗಾರ ಡಾ ಅಭಿಷೇಕ್ ಎಸ್. ಅವರ ತಜ್ಞರ ಆರೈಕೆಯಡಿ ಶಸ್ತ್ರಚಿಕಿತ್ಸೆ ನಡೆಸಿ, ಐದು ದಿನಗಳ ನಂತರ ಬಿಡುಗಡೆ ಮಾಡಲಾಯಿತು.
ಡಾ. ಸುಶೀನ್ ಮಾತನಾಡಿ, ಅನಂತಪುರದ ನಿವಾಸಿಯಾದ ಶಾಮ್ (ಹೆಸರು ಬದಲಾಗಿದೆ), ಹಣೆಯ ಮೇಲೆ ದೊಡ್ಡ ಗಾತ್ರದ ಊತ ಕಾಣಿಸಿಕೊಂಡಿದೆ. ಕೇವಲ ಮೂರೂವರೆ ವಾರದಲ್ಲೇ ನಿಂಬೆ ಗಾತ್ರಕ್ಕೂ ಹೆಚ್ಚು ದೊಡ್ಡದಾಗಿ ಬೆಳೆದುಕೊಂಡಿತು. ಆರಂಭದಲ್ಲಿ, ಅವರು ತಮ್ಮ ಹುಬ್ಬುಗಳ ನಡುವೆ ಸಾಮಾನ್ಯ ಊತ ಎಂದು ಭಾವಿಸಿದ್ದರು. ಆದರೆ, ಆ ಊತದಿಂದ ವಿಪರೀತ ನೋವು ಕಾಡಲಾಂಭಿಸಿದೆ. ಸಾಕಷ್ಟು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಈ ಊತ ಕಡಿಮೆಯಾಗಿಲ್ಲ. ಸಮಸ್ಯೆಯ ತೀವ್ರತೆ ಗಮನಿಸಿ ಅವರು ಅಂತಿಮವಾಗಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು.
ಇವರ ಪ್ರಕರಣವನ್ನು ಕೂಲಂಕುಷವಾಗಿ ಪರೀಕ್ಷೆ ನಡೆಸಿದ ಬಳಿಕ ಸೋಂಕು ಮೆದುಳಿಗೆ ಹರಡಿರುವ ಬಗ್ಗೆ ನಿರ್ಧರಿಸಲು ಎಂಆರ್ಐ (ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್) ಸೇರಿದಂತೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನವನ್ನು ನಡೆಸಲಾಯಿತು. ಮೆದುಳಿಗಿನ್ನೂ ಹರಡಿರಲಿಲ್ಲ. ಆದರೆ, ಈ ಊತವೂ ಈಗಾಗಲೇ ಸಾಕಷ್ಟು ಸಮಸ್ಯೆಯನ್ನು ನಿರ್ಮಾಣ ಮಾಡಿದ್ದರಿಂದ ಇದನ್ನು ತೆಗೆಯುವುದು ಸವಾಲಿನ ಕೆಲಸವಾಗಿತ್ತು. ನಾವು ಸಂಯೋಜಿತ ವಿಧಾನ (ಮುಕ್ತ ಮತ್ತು ಎಂಡೋಸ್ಕೋಪಿಕ್) ಆರಿಸಿಕೊಂಡೆವು, ಹಣೆಯ ಮೇಲೆ ನಿಖರವಾದ ಛೇದನ ಮಾಡಿ, ಸೋಂಕಿತ ಅಂಗಾಂಶವನ್ನು ಸಂಪೂರ್ಣವಾಗಿ ತೆಗೆದುಹಾಕಿ, ಸೋಂಕು ತೆಳುವಾದ ಪದರವನ್ನು ಮೆದುಳಿನಿಂದ ಬೇರ್ಪಡಿಸಲಾಯಿತು ಎಂದು ಹೇಳಿದರು.
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…
ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…
ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…