Categories: ಆರೋಗ್ಯ

ಹಣೆಯ ಮೇಲೆ ನಿಂಬೆಗಾತ್ರದ “ಪಾಟ್ಸ್ ಪಫಿ ಟ್ಯೂಮರ್” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು: 54 ವರ್ಷದ ವ್ಯಕ್ತಿಯೊಬ್ಬರ ಹಣೆಯ ಮೇಲೆ ನಿಂಬೆ ಗಾತ್ರದ “ ಟ್ಯೂಮರ್‌” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ಮೂಲಕ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ತೆಗೆದು ಹಾಕಲಾಗಿದೆ.

ಮುಂಭಾಗದ ಸೈನಸ್‌ನ ಸೋಂಕನ್ನು ಒಳಗೊಂಡಿರುವ ಅಪರೂಪದ ಮತ್ತು ಆಕ್ರಮಣಕಾರಿ ಸ್ಥಿತಿಯಾಗಿರುವ ಪಾಟ್‌ನ ಪಫಿ ಟ್ಯೂಮರ್‌ ಇದಾಗಿತ್ತು.
ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯ ಇಎನ್‌ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಡಾ. ಸುಶೀನ್ ದತ್ ಮತ್ತು ಓಟೋರಿನೋಲಾರಿಂಗೋಲಜಿ ಸಲಹೆಗಾರ ಡಾ ಅಭಿಷೇಕ್ ಎಸ್. ಅವರ ತಜ್ಞರ ಆರೈಕೆಯಡಿ ಶಸ್ತ್ರಚಿಕಿತ್ಸೆ ನಡೆಸಿ, ಐದು ದಿನಗಳ ನಂತರ ಬಿಡುಗಡೆ ಮಾಡಲಾಯಿತು.

ಡಾ. ಸುಶೀನ್ ಮಾತನಾಡಿ, ಅನಂತಪುರದ ನಿವಾಸಿಯಾದ ಶಾಮ್ (ಹೆಸರು ಬದಲಾಗಿದೆ), ಹಣೆಯ ಮೇಲೆ ದೊಡ್ಡ ಗಾತ್ರದ ಊತ ಕಾಣಿಸಿಕೊಂಡಿದೆ. ಕೇವಲ ಮೂರೂವರೆ ವಾರದಲ್ಲೇ ನಿಂಬೆ ಗಾತ್ರಕ್ಕೂ ಹೆಚ್ಚು ದೊಡ್ಡದಾಗಿ ಬೆಳೆದುಕೊಂಡಿತು. ಆರಂಭದಲ್ಲಿ, ಅವರು ತಮ್ಮ ಹುಬ್ಬುಗಳ ನಡುವೆ ಸಾಮಾನ್ಯ ಊತ ಎಂದು ಭಾವಿಸಿದ್ದರು. ಆದರೆ, ಆ ಊತದಿಂದ ವಿಪರೀತ ನೋವು ಕಾಡಲಾಂಭಿಸಿದೆ. ಸಾಕಷ್ಟು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಈ ಊತ ಕಡಿಮೆಯಾಗಿಲ್ಲ. ಸಮಸ್ಯೆಯ ತೀವ್ರತೆ ಗಮನಿಸಿ ಅವರು ಅಂತಿಮವಾಗಿ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

ಇವರ ಪ್ರಕರಣವನ್ನು ಕೂಲಂಕುಷವಾಗಿ ಪರೀಕ್ಷೆ ನಡೆಸಿದ ಬಳಿಕ ಸೋಂಕು ಮೆದುಳಿಗೆ ಹರಡಿರುವ ಬಗ್ಗೆ ನಿರ್ಧರಿಸಲು ಎಂಆರ್‌ಐ (ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್) ಸೇರಿದಂತೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನವನ್ನು ನಡೆಸಲಾಯಿತು. ಮೆದುಳಿಗಿನ್ನೂ ಹರಡಿರಲಿಲ್ಲ. ಆದರೆ, ಈ ಊತವೂ ಈಗಾಗಲೇ ಸಾಕಷ್ಟು ಸಮಸ್ಯೆಯನ್ನು ನಿರ್ಮಾಣ ಮಾಡಿದ್ದರಿಂದ ಇದನ್ನು ತೆಗೆಯುವುದು ಸವಾಲಿನ ಕೆಲಸವಾಗಿತ್ತು. ನಾವು ಸಂಯೋಜಿತ ವಿಧಾನ (ಮುಕ್ತ ಮತ್ತು ಎಂಡೋಸ್ಕೋಪಿಕ್) ಆರಿಸಿಕೊಂಡೆವು, ಹಣೆಯ ಮೇಲೆ ನಿಖರವಾದ ಛೇದನ ಮಾಡಿ, ಸೋಂಕಿತ ಅಂಗಾಂಶವನ್ನು ಸಂಪೂರ್ಣವಾಗಿ ತೆಗೆದುಹಾಕಿ, ಸೋಂಕು ತೆಳುವಾದ ಪದರವನ್ನು ಮೆದುಳಿನಿಂದ ಬೇರ್ಪಡಿಸಲಾಯಿತು ಎಂದು ಹೇಳಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

7 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

9 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

10 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

23 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago