ಬೆಂಗಳೂರು: 54 ವರ್ಷದ ವ್ಯಕ್ತಿಯೊಬ್ಬರ ಹಣೆಯ ಮೇಲೆ ನಿಂಬೆ ಗಾತ್ರದ “ ಟ್ಯೂಮರ್” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ಮೂಲಕ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ತೆಗೆದು ಹಾಕಲಾಗಿದೆ.
ಮುಂಭಾಗದ ಸೈನಸ್ನ ಸೋಂಕನ್ನು ಒಳಗೊಂಡಿರುವ ಅಪರೂಪದ ಮತ್ತು ಆಕ್ರಮಣಕಾರಿ ಸ್ಥಿತಿಯಾಗಿರುವ ಪಾಟ್ನ ಪಫಿ ಟ್ಯೂಮರ್ ಇದಾಗಿತ್ತು.
ಬನ್ನೇರುಘಟ್ಟ ರಸ್ತೆ ಫೋರ್ಟಿಸ್ ಆಸ್ಪತ್ರೆಯ ಇಎನ್ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಡಾ. ಸುಶೀನ್ ದತ್ ಮತ್ತು ಓಟೋರಿನೋಲಾರಿಂಗೋಲಜಿ ಸಲಹೆಗಾರ ಡಾ ಅಭಿಷೇಕ್ ಎಸ್. ಅವರ ತಜ್ಞರ ಆರೈಕೆಯಡಿ ಶಸ್ತ್ರಚಿಕಿತ್ಸೆ ನಡೆಸಿ, ಐದು ದಿನಗಳ ನಂತರ ಬಿಡುಗಡೆ ಮಾಡಲಾಯಿತು.
ಡಾ. ಸುಶೀನ್ ಮಾತನಾಡಿ, ಅನಂತಪುರದ ನಿವಾಸಿಯಾದ ಶಾಮ್ (ಹೆಸರು ಬದಲಾಗಿದೆ), ಹಣೆಯ ಮೇಲೆ ದೊಡ್ಡ ಗಾತ್ರದ ಊತ ಕಾಣಿಸಿಕೊಂಡಿದೆ. ಕೇವಲ ಮೂರೂವರೆ ವಾರದಲ್ಲೇ ನಿಂಬೆ ಗಾತ್ರಕ್ಕೂ ಹೆಚ್ಚು ದೊಡ್ಡದಾಗಿ ಬೆಳೆದುಕೊಂಡಿತು. ಆರಂಭದಲ್ಲಿ, ಅವರು ತಮ್ಮ ಹುಬ್ಬುಗಳ ನಡುವೆ ಸಾಮಾನ್ಯ ಊತ ಎಂದು ಭಾವಿಸಿದ್ದರು. ಆದರೆ, ಆ ಊತದಿಂದ ವಿಪರೀತ ನೋವು ಕಾಡಲಾಂಭಿಸಿದೆ. ಸಾಕಷ್ಟು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಈ ಊತ ಕಡಿಮೆಯಾಗಿಲ್ಲ. ಸಮಸ್ಯೆಯ ತೀವ್ರತೆ ಗಮನಿಸಿ ಅವರು ಅಂತಿಮವಾಗಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು.
ಇವರ ಪ್ರಕರಣವನ್ನು ಕೂಲಂಕುಷವಾಗಿ ಪರೀಕ್ಷೆ ನಡೆಸಿದ ಬಳಿಕ ಸೋಂಕು ಮೆದುಳಿಗೆ ಹರಡಿರುವ ಬಗ್ಗೆ ನಿರ್ಧರಿಸಲು ಎಂಆರ್ಐ (ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್) ಸೇರಿದಂತೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನವನ್ನು ನಡೆಸಲಾಯಿತು. ಮೆದುಳಿಗಿನ್ನೂ ಹರಡಿರಲಿಲ್ಲ. ಆದರೆ, ಈ ಊತವೂ ಈಗಾಗಲೇ ಸಾಕಷ್ಟು ಸಮಸ್ಯೆಯನ್ನು ನಿರ್ಮಾಣ ಮಾಡಿದ್ದರಿಂದ ಇದನ್ನು ತೆಗೆಯುವುದು ಸವಾಲಿನ ಕೆಲಸವಾಗಿತ್ತು. ನಾವು ಸಂಯೋಜಿತ ವಿಧಾನ (ಮುಕ್ತ ಮತ್ತು ಎಂಡೋಸ್ಕೋಪಿಕ್) ಆರಿಸಿಕೊಂಡೆವು, ಹಣೆಯ ಮೇಲೆ ನಿಖರವಾದ ಛೇದನ ಮಾಡಿ, ಸೋಂಕಿತ ಅಂಗಾಂಶವನ್ನು ಸಂಪೂರ್ಣವಾಗಿ ತೆಗೆದುಹಾಕಿ, ಸೋಂಕು ತೆಳುವಾದ ಪದರವನ್ನು ಮೆದುಳಿನಿಂದ ಬೇರ್ಪಡಿಸಲಾಯಿತು ಎಂದು ಹೇಳಿದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…