Categories: ಆರೋಗ್ಯ

ಹಣೆಯ ಮೇಲೆ ನಿಂಬೆಗಾತ್ರದ “ಪಾಟ್ಸ್ ಪಫಿ ಟ್ಯೂಮರ್” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು: 54 ವರ್ಷದ ವ್ಯಕ್ತಿಯೊಬ್ಬರ ಹಣೆಯ ಮೇಲೆ ನಿಂಬೆ ಗಾತ್ರದ “ ಟ್ಯೂಮರ್‌” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ಮೂಲಕ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ತೆಗೆದು ಹಾಕಲಾಗಿದೆ.

ಮುಂಭಾಗದ ಸೈನಸ್‌ನ ಸೋಂಕನ್ನು ಒಳಗೊಂಡಿರುವ ಅಪರೂಪದ ಮತ್ತು ಆಕ್ರಮಣಕಾರಿ ಸ್ಥಿತಿಯಾಗಿರುವ ಪಾಟ್‌ನ ಪಫಿ ಟ್ಯೂಮರ್‌ ಇದಾಗಿತ್ತು.
ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯ ಇಎನ್‌ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಡಾ. ಸುಶೀನ್ ದತ್ ಮತ್ತು ಓಟೋರಿನೋಲಾರಿಂಗೋಲಜಿ ಸಲಹೆಗಾರ ಡಾ ಅಭಿಷೇಕ್ ಎಸ್. ಅವರ ತಜ್ಞರ ಆರೈಕೆಯಡಿ ಶಸ್ತ್ರಚಿಕಿತ್ಸೆ ನಡೆಸಿ, ಐದು ದಿನಗಳ ನಂತರ ಬಿಡುಗಡೆ ಮಾಡಲಾಯಿತು.

ಡಾ. ಸುಶೀನ್ ಮಾತನಾಡಿ, ಅನಂತಪುರದ ನಿವಾಸಿಯಾದ ಶಾಮ್ (ಹೆಸರು ಬದಲಾಗಿದೆ), ಹಣೆಯ ಮೇಲೆ ದೊಡ್ಡ ಗಾತ್ರದ ಊತ ಕಾಣಿಸಿಕೊಂಡಿದೆ. ಕೇವಲ ಮೂರೂವರೆ ವಾರದಲ್ಲೇ ನಿಂಬೆ ಗಾತ್ರಕ್ಕೂ ಹೆಚ್ಚು ದೊಡ್ಡದಾಗಿ ಬೆಳೆದುಕೊಂಡಿತು. ಆರಂಭದಲ್ಲಿ, ಅವರು ತಮ್ಮ ಹುಬ್ಬುಗಳ ನಡುವೆ ಸಾಮಾನ್ಯ ಊತ ಎಂದು ಭಾವಿಸಿದ್ದರು. ಆದರೆ, ಆ ಊತದಿಂದ ವಿಪರೀತ ನೋವು ಕಾಡಲಾಂಭಿಸಿದೆ. ಸಾಕಷ್ಟು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಈ ಊತ ಕಡಿಮೆಯಾಗಿಲ್ಲ. ಸಮಸ್ಯೆಯ ತೀವ್ರತೆ ಗಮನಿಸಿ ಅವರು ಅಂತಿಮವಾಗಿ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

ಇವರ ಪ್ರಕರಣವನ್ನು ಕೂಲಂಕುಷವಾಗಿ ಪರೀಕ್ಷೆ ನಡೆಸಿದ ಬಳಿಕ ಸೋಂಕು ಮೆದುಳಿಗೆ ಹರಡಿರುವ ಬಗ್ಗೆ ನಿರ್ಧರಿಸಲು ಎಂಆರ್‌ಐ (ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್) ಸೇರಿದಂತೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನವನ್ನು ನಡೆಸಲಾಯಿತು. ಮೆದುಳಿಗಿನ್ನೂ ಹರಡಿರಲಿಲ್ಲ. ಆದರೆ, ಈ ಊತವೂ ಈಗಾಗಲೇ ಸಾಕಷ್ಟು ಸಮಸ್ಯೆಯನ್ನು ನಿರ್ಮಾಣ ಮಾಡಿದ್ದರಿಂದ ಇದನ್ನು ತೆಗೆಯುವುದು ಸವಾಲಿನ ಕೆಲಸವಾಗಿತ್ತು. ನಾವು ಸಂಯೋಜಿತ ವಿಧಾನ (ಮುಕ್ತ ಮತ್ತು ಎಂಡೋಸ್ಕೋಪಿಕ್) ಆರಿಸಿಕೊಂಡೆವು, ಹಣೆಯ ಮೇಲೆ ನಿಖರವಾದ ಛೇದನ ಮಾಡಿ, ಸೋಂಕಿತ ಅಂಗಾಂಶವನ್ನು ಸಂಪೂರ್ಣವಾಗಿ ತೆಗೆದುಹಾಕಿ, ಸೋಂಕು ತೆಳುವಾದ ಪದರವನ್ನು ಮೆದುಳಿನಿಂದ ಬೇರ್ಪಡಿಸಲಾಯಿತು ಎಂದು ಹೇಳಿದರು.

Ramesh Babu

Journalist

Recent Posts

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

4 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

7 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

19 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

21 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

24 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

1 day ago