ಬೆಂಗಳೂರು: 54 ವರ್ಷದ ವ್ಯಕ್ತಿಯೊಬ್ಬರ ಹಣೆಯ ಮೇಲೆ ನಿಂಬೆ ಗಾತ್ರದ “ ಟ್ಯೂಮರ್” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ಮೂಲಕ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ತೆಗೆದು ಹಾಕಲಾಗಿದೆ.
ಮುಂಭಾಗದ ಸೈನಸ್ನ ಸೋಂಕನ್ನು ಒಳಗೊಂಡಿರುವ ಅಪರೂಪದ ಮತ್ತು ಆಕ್ರಮಣಕಾರಿ ಸ್ಥಿತಿಯಾಗಿರುವ ಪಾಟ್ನ ಪಫಿ ಟ್ಯೂಮರ್ ಇದಾಗಿತ್ತು.
ಬನ್ನೇರುಘಟ್ಟ ರಸ್ತೆ ಫೋರ್ಟಿಸ್ ಆಸ್ಪತ್ರೆಯ ಇಎನ್ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಡಾ. ಸುಶೀನ್ ದತ್ ಮತ್ತು ಓಟೋರಿನೋಲಾರಿಂಗೋಲಜಿ ಸಲಹೆಗಾರ ಡಾ ಅಭಿಷೇಕ್ ಎಸ್. ಅವರ ತಜ್ಞರ ಆರೈಕೆಯಡಿ ಶಸ್ತ್ರಚಿಕಿತ್ಸೆ ನಡೆಸಿ, ಐದು ದಿನಗಳ ನಂತರ ಬಿಡುಗಡೆ ಮಾಡಲಾಯಿತು.
ಡಾ. ಸುಶೀನ್ ಮಾತನಾಡಿ, ಅನಂತಪುರದ ನಿವಾಸಿಯಾದ ಶಾಮ್ (ಹೆಸರು ಬದಲಾಗಿದೆ), ಹಣೆಯ ಮೇಲೆ ದೊಡ್ಡ ಗಾತ್ರದ ಊತ ಕಾಣಿಸಿಕೊಂಡಿದೆ. ಕೇವಲ ಮೂರೂವರೆ ವಾರದಲ್ಲೇ ನಿಂಬೆ ಗಾತ್ರಕ್ಕೂ ಹೆಚ್ಚು ದೊಡ್ಡದಾಗಿ ಬೆಳೆದುಕೊಂಡಿತು. ಆರಂಭದಲ್ಲಿ, ಅವರು ತಮ್ಮ ಹುಬ್ಬುಗಳ ನಡುವೆ ಸಾಮಾನ್ಯ ಊತ ಎಂದು ಭಾವಿಸಿದ್ದರು. ಆದರೆ, ಆ ಊತದಿಂದ ವಿಪರೀತ ನೋವು ಕಾಡಲಾಂಭಿಸಿದೆ. ಸಾಕಷ್ಟು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಈ ಊತ ಕಡಿಮೆಯಾಗಿಲ್ಲ. ಸಮಸ್ಯೆಯ ತೀವ್ರತೆ ಗಮನಿಸಿ ಅವರು ಅಂತಿಮವಾಗಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು.
ಇವರ ಪ್ರಕರಣವನ್ನು ಕೂಲಂಕುಷವಾಗಿ ಪರೀಕ್ಷೆ ನಡೆಸಿದ ಬಳಿಕ ಸೋಂಕು ಮೆದುಳಿಗೆ ಹರಡಿರುವ ಬಗ್ಗೆ ನಿರ್ಧರಿಸಲು ಎಂಆರ್ಐ (ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್) ಸೇರಿದಂತೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನವನ್ನು ನಡೆಸಲಾಯಿತು. ಮೆದುಳಿಗಿನ್ನೂ ಹರಡಿರಲಿಲ್ಲ. ಆದರೆ, ಈ ಊತವೂ ಈಗಾಗಲೇ ಸಾಕಷ್ಟು ಸಮಸ್ಯೆಯನ್ನು ನಿರ್ಮಾಣ ಮಾಡಿದ್ದರಿಂದ ಇದನ್ನು ತೆಗೆಯುವುದು ಸವಾಲಿನ ಕೆಲಸವಾಗಿತ್ತು. ನಾವು ಸಂಯೋಜಿತ ವಿಧಾನ (ಮುಕ್ತ ಮತ್ತು ಎಂಡೋಸ್ಕೋಪಿಕ್) ಆರಿಸಿಕೊಂಡೆವು, ಹಣೆಯ ಮೇಲೆ ನಿಖರವಾದ ಛೇದನ ಮಾಡಿ, ಸೋಂಕಿತ ಅಂಗಾಂಶವನ್ನು ಸಂಪೂರ್ಣವಾಗಿ ತೆಗೆದುಹಾಕಿ, ಸೋಂಕು ತೆಳುವಾದ ಪದರವನ್ನು ಮೆದುಳಿನಿಂದ ಬೇರ್ಪಡಿಸಲಾಯಿತು ಎಂದು ಹೇಳಿದರು.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…