Categories: ಆರೋಗ್ಯ

ಹಣೆಯ ಮೇಲೆ ನಿಂಬೆಗಾತ್ರದ “ಪಾಟ್ಸ್ ಪಫಿ ಟ್ಯೂಮರ್” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು: 54 ವರ್ಷದ ವ್ಯಕ್ತಿಯೊಬ್ಬರ ಹಣೆಯ ಮೇಲೆ ನಿಂಬೆ ಗಾತ್ರದ “ ಟ್ಯೂಮರ್‌” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ಮೂಲಕ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ತೆಗೆದು ಹಾಕಲಾಗಿದೆ.

ಮುಂಭಾಗದ ಸೈನಸ್‌ನ ಸೋಂಕನ್ನು ಒಳಗೊಂಡಿರುವ ಅಪರೂಪದ ಮತ್ತು ಆಕ್ರಮಣಕಾರಿ ಸ್ಥಿತಿಯಾಗಿರುವ ಪಾಟ್‌ನ ಪಫಿ ಟ್ಯೂಮರ್‌ ಇದಾಗಿತ್ತು.
ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯ ಇಎನ್‌ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಡಾ. ಸುಶೀನ್ ದತ್ ಮತ್ತು ಓಟೋರಿನೋಲಾರಿಂಗೋಲಜಿ ಸಲಹೆಗಾರ ಡಾ ಅಭಿಷೇಕ್ ಎಸ್. ಅವರ ತಜ್ಞರ ಆರೈಕೆಯಡಿ ಶಸ್ತ್ರಚಿಕಿತ್ಸೆ ನಡೆಸಿ, ಐದು ದಿನಗಳ ನಂತರ ಬಿಡುಗಡೆ ಮಾಡಲಾಯಿತು.

ಡಾ. ಸುಶೀನ್ ಮಾತನಾಡಿ, ಅನಂತಪುರದ ನಿವಾಸಿಯಾದ ಶಾಮ್ (ಹೆಸರು ಬದಲಾಗಿದೆ), ಹಣೆಯ ಮೇಲೆ ದೊಡ್ಡ ಗಾತ್ರದ ಊತ ಕಾಣಿಸಿಕೊಂಡಿದೆ. ಕೇವಲ ಮೂರೂವರೆ ವಾರದಲ್ಲೇ ನಿಂಬೆ ಗಾತ್ರಕ್ಕೂ ಹೆಚ್ಚು ದೊಡ್ಡದಾಗಿ ಬೆಳೆದುಕೊಂಡಿತು. ಆರಂಭದಲ್ಲಿ, ಅವರು ತಮ್ಮ ಹುಬ್ಬುಗಳ ನಡುವೆ ಸಾಮಾನ್ಯ ಊತ ಎಂದು ಭಾವಿಸಿದ್ದರು. ಆದರೆ, ಆ ಊತದಿಂದ ವಿಪರೀತ ನೋವು ಕಾಡಲಾಂಭಿಸಿದೆ. ಸಾಕಷ್ಟು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಈ ಊತ ಕಡಿಮೆಯಾಗಿಲ್ಲ. ಸಮಸ್ಯೆಯ ತೀವ್ರತೆ ಗಮನಿಸಿ ಅವರು ಅಂತಿಮವಾಗಿ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

ಇವರ ಪ್ರಕರಣವನ್ನು ಕೂಲಂಕುಷವಾಗಿ ಪರೀಕ್ಷೆ ನಡೆಸಿದ ಬಳಿಕ ಸೋಂಕು ಮೆದುಳಿಗೆ ಹರಡಿರುವ ಬಗ್ಗೆ ನಿರ್ಧರಿಸಲು ಎಂಆರ್‌ಐ (ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್) ಸೇರಿದಂತೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನವನ್ನು ನಡೆಸಲಾಯಿತು. ಮೆದುಳಿಗಿನ್ನೂ ಹರಡಿರಲಿಲ್ಲ. ಆದರೆ, ಈ ಊತವೂ ಈಗಾಗಲೇ ಸಾಕಷ್ಟು ಸಮಸ್ಯೆಯನ್ನು ನಿರ್ಮಾಣ ಮಾಡಿದ್ದರಿಂದ ಇದನ್ನು ತೆಗೆಯುವುದು ಸವಾಲಿನ ಕೆಲಸವಾಗಿತ್ತು. ನಾವು ಸಂಯೋಜಿತ ವಿಧಾನ (ಮುಕ್ತ ಮತ್ತು ಎಂಡೋಸ್ಕೋಪಿಕ್) ಆರಿಸಿಕೊಂಡೆವು, ಹಣೆಯ ಮೇಲೆ ನಿಖರವಾದ ಛೇದನ ಮಾಡಿ, ಸೋಂಕಿತ ಅಂಗಾಂಶವನ್ನು ಸಂಪೂರ್ಣವಾಗಿ ತೆಗೆದುಹಾಕಿ, ಸೋಂಕು ತೆಳುವಾದ ಪದರವನ್ನು ಮೆದುಳಿನಿಂದ ಬೇರ್ಪಡಿಸಲಾಯಿತು ಎಂದು ಹೇಳಿದರು.

Ramesh Babu

Journalist

Recent Posts

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

8 minutes ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

12 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

13 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

15 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

18 hours ago

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

20 hours ago