Categories: ಆರೋಗ್ಯ

ಹಣೆಯ ಮೇಲೆ ನಿಂಬೆಗಾತ್ರದ “ಪಾಟ್ಸ್ ಪಫಿ ಟ್ಯೂಮರ್” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು: 54 ವರ್ಷದ ವ್ಯಕ್ತಿಯೊಬ್ಬರ ಹಣೆಯ ಮೇಲೆ ನಿಂಬೆ ಗಾತ್ರದ “ ಟ್ಯೂಮರ್‌” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ಮೂಲಕ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ತೆಗೆದು ಹಾಕಲಾಗಿದೆ.

ಮುಂಭಾಗದ ಸೈನಸ್‌ನ ಸೋಂಕನ್ನು ಒಳಗೊಂಡಿರುವ ಅಪರೂಪದ ಮತ್ತು ಆಕ್ರಮಣಕಾರಿ ಸ್ಥಿತಿಯಾಗಿರುವ ಪಾಟ್‌ನ ಪಫಿ ಟ್ಯೂಮರ್‌ ಇದಾಗಿತ್ತು.
ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯ ಇಎನ್‌ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಡಾ. ಸುಶೀನ್ ದತ್ ಮತ್ತು ಓಟೋರಿನೋಲಾರಿಂಗೋಲಜಿ ಸಲಹೆಗಾರ ಡಾ ಅಭಿಷೇಕ್ ಎಸ್. ಅವರ ತಜ್ಞರ ಆರೈಕೆಯಡಿ ಶಸ್ತ್ರಚಿಕಿತ್ಸೆ ನಡೆಸಿ, ಐದು ದಿನಗಳ ನಂತರ ಬಿಡುಗಡೆ ಮಾಡಲಾಯಿತು.

ಡಾ. ಸುಶೀನ್ ಮಾತನಾಡಿ, ಅನಂತಪುರದ ನಿವಾಸಿಯಾದ ಶಾಮ್ (ಹೆಸರು ಬದಲಾಗಿದೆ), ಹಣೆಯ ಮೇಲೆ ದೊಡ್ಡ ಗಾತ್ರದ ಊತ ಕಾಣಿಸಿಕೊಂಡಿದೆ. ಕೇವಲ ಮೂರೂವರೆ ವಾರದಲ್ಲೇ ನಿಂಬೆ ಗಾತ್ರಕ್ಕೂ ಹೆಚ್ಚು ದೊಡ್ಡದಾಗಿ ಬೆಳೆದುಕೊಂಡಿತು. ಆರಂಭದಲ್ಲಿ, ಅವರು ತಮ್ಮ ಹುಬ್ಬುಗಳ ನಡುವೆ ಸಾಮಾನ್ಯ ಊತ ಎಂದು ಭಾವಿಸಿದ್ದರು. ಆದರೆ, ಆ ಊತದಿಂದ ವಿಪರೀತ ನೋವು ಕಾಡಲಾಂಭಿಸಿದೆ. ಸಾಕಷ್ಟು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಈ ಊತ ಕಡಿಮೆಯಾಗಿಲ್ಲ. ಸಮಸ್ಯೆಯ ತೀವ್ರತೆ ಗಮನಿಸಿ ಅವರು ಅಂತಿಮವಾಗಿ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

ಇವರ ಪ್ರಕರಣವನ್ನು ಕೂಲಂಕುಷವಾಗಿ ಪರೀಕ್ಷೆ ನಡೆಸಿದ ಬಳಿಕ ಸೋಂಕು ಮೆದುಳಿಗೆ ಹರಡಿರುವ ಬಗ್ಗೆ ನಿರ್ಧರಿಸಲು ಎಂಆರ್‌ಐ (ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್) ಸೇರಿದಂತೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನವನ್ನು ನಡೆಸಲಾಯಿತು. ಮೆದುಳಿಗಿನ್ನೂ ಹರಡಿರಲಿಲ್ಲ. ಆದರೆ, ಈ ಊತವೂ ಈಗಾಗಲೇ ಸಾಕಷ್ಟು ಸಮಸ್ಯೆಯನ್ನು ನಿರ್ಮಾಣ ಮಾಡಿದ್ದರಿಂದ ಇದನ್ನು ತೆಗೆಯುವುದು ಸವಾಲಿನ ಕೆಲಸವಾಗಿತ್ತು. ನಾವು ಸಂಯೋಜಿತ ವಿಧಾನ (ಮುಕ್ತ ಮತ್ತು ಎಂಡೋಸ್ಕೋಪಿಕ್) ಆರಿಸಿಕೊಂಡೆವು, ಹಣೆಯ ಮೇಲೆ ನಿಖರವಾದ ಛೇದನ ಮಾಡಿ, ಸೋಂಕಿತ ಅಂಗಾಂಶವನ್ನು ಸಂಪೂರ್ಣವಾಗಿ ತೆಗೆದುಹಾಕಿ, ಸೋಂಕು ತೆಳುವಾದ ಪದರವನ್ನು ಮೆದುಳಿನಿಂದ ಬೇರ್ಪಡಿಸಲಾಯಿತು ಎಂದು ಹೇಳಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

16 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago