ಬೆಂಗಳೂರು: 54 ವರ್ಷದ ವ್ಯಕ್ತಿಯೊಬ್ಬರ ಹಣೆಯ ಮೇಲೆ ನಿಂಬೆ ಗಾತ್ರದ “ ಟ್ಯೂಮರ್” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ಮೂಲಕ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ತೆಗೆದು ಹಾಕಲಾಗಿದೆ.
ಮುಂಭಾಗದ ಸೈನಸ್ನ ಸೋಂಕನ್ನು ಒಳಗೊಂಡಿರುವ ಅಪರೂಪದ ಮತ್ತು ಆಕ್ರಮಣಕಾರಿ ಸ್ಥಿತಿಯಾಗಿರುವ ಪಾಟ್ನ ಪಫಿ ಟ್ಯೂಮರ್ ಇದಾಗಿತ್ತು.
ಬನ್ನೇರುಘಟ್ಟ ರಸ್ತೆ ಫೋರ್ಟಿಸ್ ಆಸ್ಪತ್ರೆಯ ಇಎನ್ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಡಾ. ಸುಶೀನ್ ದತ್ ಮತ್ತು ಓಟೋರಿನೋಲಾರಿಂಗೋಲಜಿ ಸಲಹೆಗಾರ ಡಾ ಅಭಿಷೇಕ್ ಎಸ್. ಅವರ ತಜ್ಞರ ಆರೈಕೆಯಡಿ ಶಸ್ತ್ರಚಿಕಿತ್ಸೆ ನಡೆಸಿ, ಐದು ದಿನಗಳ ನಂತರ ಬಿಡುಗಡೆ ಮಾಡಲಾಯಿತು.
ಡಾ. ಸುಶೀನ್ ಮಾತನಾಡಿ, ಅನಂತಪುರದ ನಿವಾಸಿಯಾದ ಶಾಮ್ (ಹೆಸರು ಬದಲಾಗಿದೆ), ಹಣೆಯ ಮೇಲೆ ದೊಡ್ಡ ಗಾತ್ರದ ಊತ ಕಾಣಿಸಿಕೊಂಡಿದೆ. ಕೇವಲ ಮೂರೂವರೆ ವಾರದಲ್ಲೇ ನಿಂಬೆ ಗಾತ್ರಕ್ಕೂ ಹೆಚ್ಚು ದೊಡ್ಡದಾಗಿ ಬೆಳೆದುಕೊಂಡಿತು. ಆರಂಭದಲ್ಲಿ, ಅವರು ತಮ್ಮ ಹುಬ್ಬುಗಳ ನಡುವೆ ಸಾಮಾನ್ಯ ಊತ ಎಂದು ಭಾವಿಸಿದ್ದರು. ಆದರೆ, ಆ ಊತದಿಂದ ವಿಪರೀತ ನೋವು ಕಾಡಲಾಂಭಿಸಿದೆ. ಸಾಕಷ್ಟು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಈ ಊತ ಕಡಿಮೆಯಾಗಿಲ್ಲ. ಸಮಸ್ಯೆಯ ತೀವ್ರತೆ ಗಮನಿಸಿ ಅವರು ಅಂತಿಮವಾಗಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು.
ಇವರ ಪ್ರಕರಣವನ್ನು ಕೂಲಂಕುಷವಾಗಿ ಪರೀಕ್ಷೆ ನಡೆಸಿದ ಬಳಿಕ ಸೋಂಕು ಮೆದುಳಿಗೆ ಹರಡಿರುವ ಬಗ್ಗೆ ನಿರ್ಧರಿಸಲು ಎಂಆರ್ಐ (ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್) ಸೇರಿದಂತೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನವನ್ನು ನಡೆಸಲಾಯಿತು. ಮೆದುಳಿಗಿನ್ನೂ ಹರಡಿರಲಿಲ್ಲ. ಆದರೆ, ಈ ಊತವೂ ಈಗಾಗಲೇ ಸಾಕಷ್ಟು ಸಮಸ್ಯೆಯನ್ನು ನಿರ್ಮಾಣ ಮಾಡಿದ್ದರಿಂದ ಇದನ್ನು ತೆಗೆಯುವುದು ಸವಾಲಿನ ಕೆಲಸವಾಗಿತ್ತು. ನಾವು ಸಂಯೋಜಿತ ವಿಧಾನ (ಮುಕ್ತ ಮತ್ತು ಎಂಡೋಸ್ಕೋಪಿಕ್) ಆರಿಸಿಕೊಂಡೆವು, ಹಣೆಯ ಮೇಲೆ ನಿಖರವಾದ ಛೇದನ ಮಾಡಿ, ಸೋಂಕಿತ ಅಂಗಾಂಶವನ್ನು ಸಂಪೂರ್ಣವಾಗಿ ತೆಗೆದುಹಾಕಿ, ಸೋಂಕು ತೆಳುವಾದ ಪದರವನ್ನು ಮೆದುಳಿನಿಂದ ಬೇರ್ಪಡಿಸಲಾಯಿತು ಎಂದು ಹೇಳಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…