ಬೆಂಗಳೂರು: 54 ವರ್ಷದ ವ್ಯಕ್ತಿಯೊಬ್ಬರ ಹಣೆಯ ಮೇಲೆ ನಿಂಬೆ ಗಾತ್ರದ “ ಟ್ಯೂಮರ್” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ಮೂಲಕ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ತೆಗೆದು ಹಾಕಲಾಗಿದೆ.
ಮುಂಭಾಗದ ಸೈನಸ್ನ ಸೋಂಕನ್ನು ಒಳಗೊಂಡಿರುವ ಅಪರೂಪದ ಮತ್ತು ಆಕ್ರಮಣಕಾರಿ ಸ್ಥಿತಿಯಾಗಿರುವ ಪಾಟ್ನ ಪಫಿ ಟ್ಯೂಮರ್ ಇದಾಗಿತ್ತು.
ಬನ್ನೇರುಘಟ್ಟ ರಸ್ತೆ ಫೋರ್ಟಿಸ್ ಆಸ್ಪತ್ರೆಯ ಇಎನ್ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಡಾ. ಸುಶೀನ್ ದತ್ ಮತ್ತು ಓಟೋರಿನೋಲಾರಿಂಗೋಲಜಿ ಸಲಹೆಗಾರ ಡಾ ಅಭಿಷೇಕ್ ಎಸ್. ಅವರ ತಜ್ಞರ ಆರೈಕೆಯಡಿ ಶಸ್ತ್ರಚಿಕಿತ್ಸೆ ನಡೆಸಿ, ಐದು ದಿನಗಳ ನಂತರ ಬಿಡುಗಡೆ ಮಾಡಲಾಯಿತು.
ಡಾ. ಸುಶೀನ್ ಮಾತನಾಡಿ, ಅನಂತಪುರದ ನಿವಾಸಿಯಾದ ಶಾಮ್ (ಹೆಸರು ಬದಲಾಗಿದೆ), ಹಣೆಯ ಮೇಲೆ ದೊಡ್ಡ ಗಾತ್ರದ ಊತ ಕಾಣಿಸಿಕೊಂಡಿದೆ. ಕೇವಲ ಮೂರೂವರೆ ವಾರದಲ್ಲೇ ನಿಂಬೆ ಗಾತ್ರಕ್ಕೂ ಹೆಚ್ಚು ದೊಡ್ಡದಾಗಿ ಬೆಳೆದುಕೊಂಡಿತು. ಆರಂಭದಲ್ಲಿ, ಅವರು ತಮ್ಮ ಹುಬ್ಬುಗಳ ನಡುವೆ ಸಾಮಾನ್ಯ ಊತ ಎಂದು ಭಾವಿಸಿದ್ದರು. ಆದರೆ, ಆ ಊತದಿಂದ ವಿಪರೀತ ನೋವು ಕಾಡಲಾಂಭಿಸಿದೆ. ಸಾಕಷ್ಟು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಈ ಊತ ಕಡಿಮೆಯಾಗಿಲ್ಲ. ಸಮಸ್ಯೆಯ ತೀವ್ರತೆ ಗಮನಿಸಿ ಅವರು ಅಂತಿಮವಾಗಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು.
ಇವರ ಪ್ರಕರಣವನ್ನು ಕೂಲಂಕುಷವಾಗಿ ಪರೀಕ್ಷೆ ನಡೆಸಿದ ಬಳಿಕ ಸೋಂಕು ಮೆದುಳಿಗೆ ಹರಡಿರುವ ಬಗ್ಗೆ ನಿರ್ಧರಿಸಲು ಎಂಆರ್ಐ (ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್) ಸೇರಿದಂತೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನವನ್ನು ನಡೆಸಲಾಯಿತು. ಮೆದುಳಿಗಿನ್ನೂ ಹರಡಿರಲಿಲ್ಲ. ಆದರೆ, ಈ ಊತವೂ ಈಗಾಗಲೇ ಸಾಕಷ್ಟು ಸಮಸ್ಯೆಯನ್ನು ನಿರ್ಮಾಣ ಮಾಡಿದ್ದರಿಂದ ಇದನ್ನು ತೆಗೆಯುವುದು ಸವಾಲಿನ ಕೆಲಸವಾಗಿತ್ತು. ನಾವು ಸಂಯೋಜಿತ ವಿಧಾನ (ಮುಕ್ತ ಮತ್ತು ಎಂಡೋಸ್ಕೋಪಿಕ್) ಆರಿಸಿಕೊಂಡೆವು, ಹಣೆಯ ಮೇಲೆ ನಿಖರವಾದ ಛೇದನ ಮಾಡಿ, ಸೋಂಕಿತ ಅಂಗಾಂಶವನ್ನು ಸಂಪೂರ್ಣವಾಗಿ ತೆಗೆದುಹಾಕಿ, ಸೋಂಕು ತೆಳುವಾದ ಪದರವನ್ನು ಮೆದುಳಿನಿಂದ ಬೇರ್ಪಡಿಸಲಾಯಿತು ಎಂದು ಹೇಳಿದರು.
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…