ಹಣ್ಣು-ತರಕಾರಿ ಸಾಗಾಟ ಲಾರಿ ಪಲ್ಟಿ: 10 ಮಂದಿ ಸಾವು: ಮೃತರ ಕುಟುಂಬಗಳಿಗೆ ತಲಾ ರೂ.3 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಹಾವೇರಿಯಿಂದ ಕುಮಟಾ ಕಡೆಗೆ ವ್ಯಾಪಾರಕ್ಕೆಂದು ತರಕಾರಿ ಹಾಗೂ ಹಣ್ಣುಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಯಲ್ಲಾಪುರದ ಗುಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ಪಲ್ಟಿಯಾಗಿ 14 ಜನ ಮೃತ ಪಟ್ಟ ಘಟನೆ ನಡೆದಿದೆ.

ತಮ್ಮ ದಿನನಿತ್ಯ ಜೀವನ ಸಾಗಿಸಲು ಪರ ಸ್ಥಳಗಳಿಂದ ವ್ಯಾಪಾರಕ್ಕೆ ಬಂದವರು ಕ್ರೂರ ವಿಧಿಯ ಆಟಕ್ಕೆ ಬಲಿಯಾಗಿದ್ದಾರೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

8 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago