Categories: ಲೇಖನ

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ………

ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು……

ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು…..

ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು……..

ಭ್ರಷ್ಟಾಚಾರದ ಕೂಪವಾಗುತ್ತಿರುವ ಸರ್ಕಾರಿ ಕಚೇರಿಗಳು…….

ಅಪಘಾತಗಳ ತವರೂರಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಗಳು…..

ಮೌಢ್ಯಗಳ ಮಹಲುಗಳಾಗುತ್ತಿರುವ ಎಲ್ಲಾ ಧರ್ಮಗಳ ದೇವಮಂದಿರಗಳು……

ಗುಲಾಮಿ ಮನೋಭಾವ ಸೃಷ್ಟಿಸುತ್ತಿರುವ ಐಟಿಬಿಟಿ ಕಂಪನಿಗಳು…….

ವಿವೇಚನಾ ಶಕ್ತಿಯನ್ನೇ ನಾಶ ಮಾಡುತ್ತಿರುವ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳು………

ಉದ್ಯೋಗಿಗಳನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿರುವ ವಿದೇಶಿ ಕಂಪನಿಗಳು……

ಮೋಸ, ವಂಚನೆ, ಕುತಂತ್ರಗಳ ಕಣಗಳಾಗುತ್ತಿರುವ ರಾಜಕೀಯ ಪಕ್ಷಗಳು…..

ದುಷ್ಟ ಜನಪ್ರತಿನಿಧಿಗಳು ಆಯ್ಕೆಯಾಗಲು ವೇದಿಕೆಯಾಗುತ್ತಿರುವ ಚುನಾವಣೆಗಳು……

ಅಪರಾಧಿಗಳ ಸೃಷ್ಟಿಗೆ ಕಾರಣವಾಗುತ್ತಿರುವ ಪೊಲೀಸ್ ಸ್ಟೇಷನ್ ಮತ್ತು ಜೈಲುಗಳು……

ಮೂಢನಂಬಿಕೆಗಳಿಗೆ ದಾಸರನ್ನಾಗಿ ಮಾಡುತ್ತಿರುವ ಮಠಮಾನ್ಯಗಳು…….

ಸೀಡ್ಲೆಸ್ ಯುವ ಜನಾಂಗದ ಸೃಷ್ಟಿಗೆ ಕಾರಣವಾಗುತ್ತಿರುವ ಮೊಬೈಲ್, ಲ್ಯಾಪ್ಟಾಪ್ ಮುಂತಾದ ಗ್ಯಾಜೆಟ್ ಗಳು…….

ದೇಹ ಮತ್ತು ಮನಸ್ಸುಗಳ ಮೇಲೆ ನಿಯಂತ್ರಣ ಕಳೆದುಕೊಂಡು ಮಾನಸಿಕ ಅಸ್ವಸ್ಥರಂತೆ ಮಾಡುತ್ತಿರುವ ವೇಗ ಮತ್ತು ಸ್ಪರ್ಧೆಯ ಆಧುನಿಕ ತಂತ್ರಜ್ಞಾನ…..

ಕೆಲವು ಜನರ ಬದುಕಿನ ನಾಶಕ್ಕೆ ಕಾರಣವಾಗುತ್ತಿರುವ ಆನ್ಲೈನ್ ಗೇಮ್ ಗಳು…..

ಸಾವಿನ ವ್ಯಾಪಾರಿಗಳಾಗುತ್ತಿರುವ ಮಾದಕದ್ರವ್ಯ ಮಾರಾಟಗಾರರು…..

ಸುಳ್ಳುಗಳ ಸೃಷ್ಟಿಕರ್ತರಾಗುತ್ತಿರುವ ಸ್ವಯಂ ಘೋಷಿತ ದೇವಮಾನವರು…..

ಹೀಗೆ ಸಮಾಜ ತನ್ನ ಮೂಲ ಆಶಯದಿಂದ ನಿಧಾನವಾಗಿ ಈ ರೀತಿಯ ಬದಲಾವಣೆಯತ್ತ ಸಾಗುತ್ತಿದೆ‌. ಈ ಬದಲಾವಣೆಗಳು ಮೂಲ ಆಶಯದ ವಿರುದ್ಧ ದಿಕ್ಕಿನಲ್ಲಿ ವಿನಾಶದತ್ತ ಚಲಿಸುತ್ತಿವೆ‌. ಮನುಷ್ಯ ತನ್ನ ಅನುಕೂಲಕ್ಕಾಗಿ ನಿರ್ಮಿಸಿಕೊಂಡ ಈ ವ್ಯವಸ್ಥೆಗಳು ಈಗ ಅವನ ನಾಶಕ್ಕೆ ಬಳಕೆಯಾಗುತ್ತಿರುವುದು ಮಾನವ ಸಮಾಜದ ದುರಂತ‌.

ಈ ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಪುನರ್ ಸ್ಥಾಪಿಸುವ ಮೂಲಕ ಈ ದುರಂತಗಳನ್ನು ತಡೆಗಟ್ಟಬಹುದು. ಇಲ್ಲದಿದ್ದರೆ ಪ್ರಕೃತಿಯೇ ಮುಂದೊಂದು ದಿನ ಪಾಠ ಕಲಿಸುವವರೆಗೂ ಮನುಷ್ಯನ ದುರಂತಗಳ ಸರಮಾಲೆ ನಡೆಯುತ್ತಲೇ ಇರುತ್ತದೆ………

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

4 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

7 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

9 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

10 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

16 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

17 hours ago