Categories: ಲೇಖನ

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ………

ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು……

ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು…..

ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು……..

ಭ್ರಷ್ಟಾಚಾರದ ಕೂಪವಾಗುತ್ತಿರುವ ಸರ್ಕಾರಿ ಕಚೇರಿಗಳು…….

ಅಪಘಾತಗಳ ತವರೂರಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಗಳು…..

ಮೌಢ್ಯಗಳ ಮಹಲುಗಳಾಗುತ್ತಿರುವ ಎಲ್ಲಾ ಧರ್ಮಗಳ ದೇವಮಂದಿರಗಳು……

ಗುಲಾಮಿ ಮನೋಭಾವ ಸೃಷ್ಟಿಸುತ್ತಿರುವ ಐಟಿಬಿಟಿ ಕಂಪನಿಗಳು…….

ವಿವೇಚನಾ ಶಕ್ತಿಯನ್ನೇ ನಾಶ ಮಾಡುತ್ತಿರುವ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳು………

ಉದ್ಯೋಗಿಗಳನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿರುವ ವಿದೇಶಿ ಕಂಪನಿಗಳು……

ಮೋಸ, ವಂಚನೆ, ಕುತಂತ್ರಗಳ ಕಣಗಳಾಗುತ್ತಿರುವ ರಾಜಕೀಯ ಪಕ್ಷಗಳು…..

ದುಷ್ಟ ಜನಪ್ರತಿನಿಧಿಗಳು ಆಯ್ಕೆಯಾಗಲು ವೇದಿಕೆಯಾಗುತ್ತಿರುವ ಚುನಾವಣೆಗಳು……

ಅಪರಾಧಿಗಳ ಸೃಷ್ಟಿಗೆ ಕಾರಣವಾಗುತ್ತಿರುವ ಪೊಲೀಸ್ ಸ್ಟೇಷನ್ ಮತ್ತು ಜೈಲುಗಳು……

ಮೂಢನಂಬಿಕೆಗಳಿಗೆ ದಾಸರನ್ನಾಗಿ ಮಾಡುತ್ತಿರುವ ಮಠಮಾನ್ಯಗಳು…….

ಸೀಡ್ಲೆಸ್ ಯುವ ಜನಾಂಗದ ಸೃಷ್ಟಿಗೆ ಕಾರಣವಾಗುತ್ತಿರುವ ಮೊಬೈಲ್, ಲ್ಯಾಪ್ಟಾಪ್ ಮುಂತಾದ ಗ್ಯಾಜೆಟ್ ಗಳು…….

ದೇಹ ಮತ್ತು ಮನಸ್ಸುಗಳ ಮೇಲೆ ನಿಯಂತ್ರಣ ಕಳೆದುಕೊಂಡು ಮಾನಸಿಕ ಅಸ್ವಸ್ಥರಂತೆ ಮಾಡುತ್ತಿರುವ ವೇಗ ಮತ್ತು ಸ್ಪರ್ಧೆಯ ಆಧುನಿಕ ತಂತ್ರಜ್ಞಾನ…..

ಕೆಲವು ಜನರ ಬದುಕಿನ ನಾಶಕ್ಕೆ ಕಾರಣವಾಗುತ್ತಿರುವ ಆನ್ಲೈನ್ ಗೇಮ್ ಗಳು…..

ಸಾವಿನ ವ್ಯಾಪಾರಿಗಳಾಗುತ್ತಿರುವ ಮಾದಕದ್ರವ್ಯ ಮಾರಾಟಗಾರರು…..

ಸುಳ್ಳುಗಳ ಸೃಷ್ಟಿಕರ್ತರಾಗುತ್ತಿರುವ ಸ್ವಯಂ ಘೋಷಿತ ದೇವಮಾನವರು…..

ಹೀಗೆ ಸಮಾಜ ತನ್ನ ಮೂಲ ಆಶಯದಿಂದ ನಿಧಾನವಾಗಿ ಈ ರೀತಿಯ ಬದಲಾವಣೆಯತ್ತ ಸಾಗುತ್ತಿದೆ‌. ಈ ಬದಲಾವಣೆಗಳು ಮೂಲ ಆಶಯದ ವಿರುದ್ಧ ದಿಕ್ಕಿನಲ್ಲಿ ವಿನಾಶದತ್ತ ಚಲಿಸುತ್ತಿವೆ‌. ಮನುಷ್ಯ ತನ್ನ ಅನುಕೂಲಕ್ಕಾಗಿ ನಿರ್ಮಿಸಿಕೊಂಡ ಈ ವ್ಯವಸ್ಥೆಗಳು ಈಗ ಅವನ ನಾಶಕ್ಕೆ ಬಳಕೆಯಾಗುತ್ತಿರುವುದು ಮಾನವ ಸಮಾಜದ ದುರಂತ‌.

ಈ ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಪುನರ್ ಸ್ಥಾಪಿಸುವ ಮೂಲಕ ಈ ದುರಂತಗಳನ್ನು ತಡೆಗಟ್ಟಬಹುದು. ಇಲ್ಲದಿದ್ದರೆ ಪ್ರಕೃತಿಯೇ ಮುಂದೊಂದು ದಿನ ಪಾಠ ಕಲಿಸುವವರೆಗೂ ಮನುಷ್ಯನ ದುರಂತಗಳ ಸರಮಾಲೆ ನಡೆಯುತ್ತಲೇ ಇರುತ್ತದೆ………

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

44 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

56 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

24 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago