Categories: ಲೇಖನ

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ………

ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು……

ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು…..

ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು……..

ಭ್ರಷ್ಟಾಚಾರದ ಕೂಪವಾಗುತ್ತಿರುವ ಸರ್ಕಾರಿ ಕಚೇರಿಗಳು…….

ಅಪಘಾತಗಳ ತವರೂರಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಗಳು…..

ಮೌಢ್ಯಗಳ ಮಹಲುಗಳಾಗುತ್ತಿರುವ ಎಲ್ಲಾ ಧರ್ಮಗಳ ದೇವಮಂದಿರಗಳು……

ಗುಲಾಮಿ ಮನೋಭಾವ ಸೃಷ್ಟಿಸುತ್ತಿರುವ ಐಟಿಬಿಟಿ ಕಂಪನಿಗಳು…….

ವಿವೇಚನಾ ಶಕ್ತಿಯನ್ನೇ ನಾಶ ಮಾಡುತ್ತಿರುವ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳು………

ಉದ್ಯೋಗಿಗಳನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿರುವ ವಿದೇಶಿ ಕಂಪನಿಗಳು……

ಮೋಸ, ವಂಚನೆ, ಕುತಂತ್ರಗಳ ಕಣಗಳಾಗುತ್ತಿರುವ ರಾಜಕೀಯ ಪಕ್ಷಗಳು…..

ದುಷ್ಟ ಜನಪ್ರತಿನಿಧಿಗಳು ಆಯ್ಕೆಯಾಗಲು ವೇದಿಕೆಯಾಗುತ್ತಿರುವ ಚುನಾವಣೆಗಳು……

ಅಪರಾಧಿಗಳ ಸೃಷ್ಟಿಗೆ ಕಾರಣವಾಗುತ್ತಿರುವ ಪೊಲೀಸ್ ಸ್ಟೇಷನ್ ಮತ್ತು ಜೈಲುಗಳು……

ಮೂಢನಂಬಿಕೆಗಳಿಗೆ ದಾಸರನ್ನಾಗಿ ಮಾಡುತ್ತಿರುವ ಮಠಮಾನ್ಯಗಳು…….

ಸೀಡ್ಲೆಸ್ ಯುವ ಜನಾಂಗದ ಸೃಷ್ಟಿಗೆ ಕಾರಣವಾಗುತ್ತಿರುವ ಮೊಬೈಲ್, ಲ್ಯಾಪ್ಟಾಪ್ ಮುಂತಾದ ಗ್ಯಾಜೆಟ್ ಗಳು…….

ದೇಹ ಮತ್ತು ಮನಸ್ಸುಗಳ ಮೇಲೆ ನಿಯಂತ್ರಣ ಕಳೆದುಕೊಂಡು ಮಾನಸಿಕ ಅಸ್ವಸ್ಥರಂತೆ ಮಾಡುತ್ತಿರುವ ವೇಗ ಮತ್ತು ಸ್ಪರ್ಧೆಯ ಆಧುನಿಕ ತಂತ್ರಜ್ಞಾನ…..

ಕೆಲವು ಜನರ ಬದುಕಿನ ನಾಶಕ್ಕೆ ಕಾರಣವಾಗುತ್ತಿರುವ ಆನ್ಲೈನ್ ಗೇಮ್ ಗಳು…..

ಸಾವಿನ ವ್ಯಾಪಾರಿಗಳಾಗುತ್ತಿರುವ ಮಾದಕದ್ರವ್ಯ ಮಾರಾಟಗಾರರು…..

ಸುಳ್ಳುಗಳ ಸೃಷ್ಟಿಕರ್ತರಾಗುತ್ತಿರುವ ಸ್ವಯಂ ಘೋಷಿತ ದೇವಮಾನವರು…..

ಹೀಗೆ ಸಮಾಜ ತನ್ನ ಮೂಲ ಆಶಯದಿಂದ ನಿಧಾನವಾಗಿ ಈ ರೀತಿಯ ಬದಲಾವಣೆಯತ್ತ ಸಾಗುತ್ತಿದೆ‌. ಈ ಬದಲಾವಣೆಗಳು ಮೂಲ ಆಶಯದ ವಿರುದ್ಧ ದಿಕ್ಕಿನಲ್ಲಿ ವಿನಾಶದತ್ತ ಚಲಿಸುತ್ತಿವೆ‌. ಮನುಷ್ಯ ತನ್ನ ಅನುಕೂಲಕ್ಕಾಗಿ ನಿರ್ಮಿಸಿಕೊಂಡ ಈ ವ್ಯವಸ್ಥೆಗಳು ಈಗ ಅವನ ನಾಶಕ್ಕೆ ಬಳಕೆಯಾಗುತ್ತಿರುವುದು ಮಾನವ ಸಮಾಜದ ದುರಂತ‌.

ಈ ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಪುನರ್ ಸ್ಥಾಪಿಸುವ ಮೂಲಕ ಈ ದುರಂತಗಳನ್ನು ತಡೆಗಟ್ಟಬಹುದು. ಇಲ್ಲದಿದ್ದರೆ ಪ್ರಕೃತಿಯೇ ಮುಂದೊಂದು ದಿನ ಪಾಠ ಕಲಿಸುವವರೆಗೂ ಮನುಷ್ಯನ ದುರಂತಗಳ ಸರಮಾಲೆ ನಡೆಯುತ್ತಲೇ ಇರುತ್ತದೆ………

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

2 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

12 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

15 hours ago

Instant Play Casino

Instant play casinos allow you to play casino games online without installing any software. These…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

1 day ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

1 day ago