Categories: ಲೇಖನ

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ………

ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು……

ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು…..

ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು……..

ಭ್ರಷ್ಟಾಚಾರದ ಕೂಪವಾಗುತ್ತಿರುವ ಸರ್ಕಾರಿ ಕಚೇರಿಗಳು…….

ಅಪಘಾತಗಳ ತವರೂರಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಗಳು…..

ಮೌಢ್ಯಗಳ ಮಹಲುಗಳಾಗುತ್ತಿರುವ ಎಲ್ಲಾ ಧರ್ಮಗಳ ದೇವಮಂದಿರಗಳು……

ಗುಲಾಮಿ ಮನೋಭಾವ ಸೃಷ್ಟಿಸುತ್ತಿರುವ ಐಟಿಬಿಟಿ ಕಂಪನಿಗಳು…….

ವಿವೇಚನಾ ಶಕ್ತಿಯನ್ನೇ ನಾಶ ಮಾಡುತ್ತಿರುವ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳು………

ಉದ್ಯೋಗಿಗಳನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿರುವ ವಿದೇಶಿ ಕಂಪನಿಗಳು……

ಮೋಸ, ವಂಚನೆ, ಕುತಂತ್ರಗಳ ಕಣಗಳಾಗುತ್ತಿರುವ ರಾಜಕೀಯ ಪಕ್ಷಗಳು…..

ದುಷ್ಟ ಜನಪ್ರತಿನಿಧಿಗಳು ಆಯ್ಕೆಯಾಗಲು ವೇದಿಕೆಯಾಗುತ್ತಿರುವ ಚುನಾವಣೆಗಳು……

ಅಪರಾಧಿಗಳ ಸೃಷ್ಟಿಗೆ ಕಾರಣವಾಗುತ್ತಿರುವ ಪೊಲೀಸ್ ಸ್ಟೇಷನ್ ಮತ್ತು ಜೈಲುಗಳು……

ಮೂಢನಂಬಿಕೆಗಳಿಗೆ ದಾಸರನ್ನಾಗಿ ಮಾಡುತ್ತಿರುವ ಮಠಮಾನ್ಯಗಳು…….

ಸೀಡ್ಲೆಸ್ ಯುವ ಜನಾಂಗದ ಸೃಷ್ಟಿಗೆ ಕಾರಣವಾಗುತ್ತಿರುವ ಮೊಬೈಲ್, ಲ್ಯಾಪ್ಟಾಪ್ ಮುಂತಾದ ಗ್ಯಾಜೆಟ್ ಗಳು…….

ದೇಹ ಮತ್ತು ಮನಸ್ಸುಗಳ ಮೇಲೆ ನಿಯಂತ್ರಣ ಕಳೆದುಕೊಂಡು ಮಾನಸಿಕ ಅಸ್ವಸ್ಥರಂತೆ ಮಾಡುತ್ತಿರುವ ವೇಗ ಮತ್ತು ಸ್ಪರ್ಧೆಯ ಆಧುನಿಕ ತಂತ್ರಜ್ಞಾನ…..

ಕೆಲವು ಜನರ ಬದುಕಿನ ನಾಶಕ್ಕೆ ಕಾರಣವಾಗುತ್ತಿರುವ ಆನ್ಲೈನ್ ಗೇಮ್ ಗಳು…..

ಸಾವಿನ ವ್ಯಾಪಾರಿಗಳಾಗುತ್ತಿರುವ ಮಾದಕದ್ರವ್ಯ ಮಾರಾಟಗಾರರು…..

ಸುಳ್ಳುಗಳ ಸೃಷ್ಟಿಕರ್ತರಾಗುತ್ತಿರುವ ಸ್ವಯಂ ಘೋಷಿತ ದೇವಮಾನವರು…..

ಹೀಗೆ ಸಮಾಜ ತನ್ನ ಮೂಲ ಆಶಯದಿಂದ ನಿಧಾನವಾಗಿ ಈ ರೀತಿಯ ಬದಲಾವಣೆಯತ್ತ ಸಾಗುತ್ತಿದೆ‌. ಈ ಬದಲಾವಣೆಗಳು ಮೂಲ ಆಶಯದ ವಿರುದ್ಧ ದಿಕ್ಕಿನಲ್ಲಿ ವಿನಾಶದತ್ತ ಚಲಿಸುತ್ತಿವೆ‌. ಮನುಷ್ಯ ತನ್ನ ಅನುಕೂಲಕ್ಕಾಗಿ ನಿರ್ಮಿಸಿಕೊಂಡ ಈ ವ್ಯವಸ್ಥೆಗಳು ಈಗ ಅವನ ನಾಶಕ್ಕೆ ಬಳಕೆಯಾಗುತ್ತಿರುವುದು ಮಾನವ ಸಮಾಜದ ದುರಂತ‌.

ಈ ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಪುನರ್ ಸ್ಥಾಪಿಸುವ ಮೂಲಕ ಈ ದುರಂತಗಳನ್ನು ತಡೆಗಟ್ಟಬಹುದು. ಇಲ್ಲದಿದ್ದರೆ ಪ್ರಕೃತಿಯೇ ಮುಂದೊಂದು ದಿನ ಪಾಠ ಕಲಿಸುವವರೆಗೂ ಮನುಷ್ಯನ ದುರಂತಗಳ ಸರಮಾಲೆ ನಡೆಯುತ್ತಲೇ ಇರುತ್ತದೆ………

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

4 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

15 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

16 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

16 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

18 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago