Categories: ಲೇಖನ

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ………

ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು……

ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು…..

ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು……..

ಭ್ರಷ್ಟಾಚಾರದ ಕೂಪವಾಗುತ್ತಿರುವ ಸರ್ಕಾರಿ ಕಚೇರಿಗಳು…….

ಅಪಘಾತಗಳ ತವರೂರಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಗಳು…..

ಮೌಢ್ಯಗಳ ಮಹಲುಗಳಾಗುತ್ತಿರುವ ಎಲ್ಲಾ ಧರ್ಮಗಳ ದೇವಮಂದಿರಗಳು……

ಗುಲಾಮಿ ಮನೋಭಾವ ಸೃಷ್ಟಿಸುತ್ತಿರುವ ಐಟಿಬಿಟಿ ಕಂಪನಿಗಳು…….

ವಿವೇಚನಾ ಶಕ್ತಿಯನ್ನೇ ನಾಶ ಮಾಡುತ್ತಿರುವ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳು………

ಉದ್ಯೋಗಿಗಳನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿರುವ ವಿದೇಶಿ ಕಂಪನಿಗಳು……

ಮೋಸ, ವಂಚನೆ, ಕುತಂತ್ರಗಳ ಕಣಗಳಾಗುತ್ತಿರುವ ರಾಜಕೀಯ ಪಕ್ಷಗಳು…..

ದುಷ್ಟ ಜನಪ್ರತಿನಿಧಿಗಳು ಆಯ್ಕೆಯಾಗಲು ವೇದಿಕೆಯಾಗುತ್ತಿರುವ ಚುನಾವಣೆಗಳು……

ಅಪರಾಧಿಗಳ ಸೃಷ್ಟಿಗೆ ಕಾರಣವಾಗುತ್ತಿರುವ ಪೊಲೀಸ್ ಸ್ಟೇಷನ್ ಮತ್ತು ಜೈಲುಗಳು……

ಮೂಢನಂಬಿಕೆಗಳಿಗೆ ದಾಸರನ್ನಾಗಿ ಮಾಡುತ್ತಿರುವ ಮಠಮಾನ್ಯಗಳು…….

ಸೀಡ್ಲೆಸ್ ಯುವ ಜನಾಂಗದ ಸೃಷ್ಟಿಗೆ ಕಾರಣವಾಗುತ್ತಿರುವ ಮೊಬೈಲ್, ಲ್ಯಾಪ್ಟಾಪ್ ಮುಂತಾದ ಗ್ಯಾಜೆಟ್ ಗಳು…….

ದೇಹ ಮತ್ತು ಮನಸ್ಸುಗಳ ಮೇಲೆ ನಿಯಂತ್ರಣ ಕಳೆದುಕೊಂಡು ಮಾನಸಿಕ ಅಸ್ವಸ್ಥರಂತೆ ಮಾಡುತ್ತಿರುವ ವೇಗ ಮತ್ತು ಸ್ಪರ್ಧೆಯ ಆಧುನಿಕ ತಂತ್ರಜ್ಞಾನ…..

ಕೆಲವು ಜನರ ಬದುಕಿನ ನಾಶಕ್ಕೆ ಕಾರಣವಾಗುತ್ತಿರುವ ಆನ್ಲೈನ್ ಗೇಮ್ ಗಳು…..

ಸಾವಿನ ವ್ಯಾಪಾರಿಗಳಾಗುತ್ತಿರುವ ಮಾದಕದ್ರವ್ಯ ಮಾರಾಟಗಾರರು…..

ಸುಳ್ಳುಗಳ ಸೃಷ್ಟಿಕರ್ತರಾಗುತ್ತಿರುವ ಸ್ವಯಂ ಘೋಷಿತ ದೇವಮಾನವರು…..

ಹೀಗೆ ಸಮಾಜ ತನ್ನ ಮೂಲ ಆಶಯದಿಂದ ನಿಧಾನವಾಗಿ ಈ ರೀತಿಯ ಬದಲಾವಣೆಯತ್ತ ಸಾಗುತ್ತಿದೆ‌. ಈ ಬದಲಾವಣೆಗಳು ಮೂಲ ಆಶಯದ ವಿರುದ್ಧ ದಿಕ್ಕಿನಲ್ಲಿ ವಿನಾಶದತ್ತ ಚಲಿಸುತ್ತಿವೆ‌. ಮನುಷ್ಯ ತನ್ನ ಅನುಕೂಲಕ್ಕಾಗಿ ನಿರ್ಮಿಸಿಕೊಂಡ ಈ ವ್ಯವಸ್ಥೆಗಳು ಈಗ ಅವನ ನಾಶಕ್ಕೆ ಬಳಕೆಯಾಗುತ್ತಿರುವುದು ಮಾನವ ಸಮಾಜದ ದುರಂತ‌.

ಈ ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಪುನರ್ ಸ್ಥಾಪಿಸುವ ಮೂಲಕ ಈ ದುರಂತಗಳನ್ನು ತಡೆಗಟ್ಟಬಹುದು. ಇಲ್ಲದಿದ್ದರೆ ಪ್ರಕೃತಿಯೇ ಮುಂದೊಂದು ದಿನ ಪಾಠ ಕಲಿಸುವವರೆಗೂ ಮನುಷ್ಯನ ದುರಂತಗಳ ಸರಮಾಲೆ ನಡೆಯುತ್ತಲೇ ಇರುತ್ತದೆ………

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 hour ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

17 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

23 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago