ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ:ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ‌.ಎನ್ ಶಿವಶಂಕರ ಸೂಚನೆ

10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಜೂನ್ 21 ರಂದು ನಡೆಯಲಿದ್ದು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಸಂಬಂಧ ಪೂರ್ವಭಾವಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಮಟ್ಟದ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 6:00 ಗಂಟೆಯಿಂದ 8:30 ಗಂಟೆಯವರೆಗೆ ನಡೆಯಲಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳಿಂದ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ದೇವನಹಳ್ಳಿ ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರು, ಲಘು ಉಪಹಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ತುರ್ತು ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಚಿಕಿತ್ಸಾ ಅಂಬುಲೆನ್ಸ್ ವ್ಯವಸ್ಥೆ, ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲಾ-ಕಾಲೇಜುಗಳು, ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಕಾರ್ಯಕ್ರಮ ಯಶಸ್ವಿಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬುದು 2024ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಘೋಷವಾಕ್ಯವಾಗಿದ್ದು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಸಭೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಶುಹಬುದ್ದೀನ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ಅಯುಷ್ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಖುದ್ಸಿಯ ತಸ್‌ನೀಮ್.ಎಸ್.ಎ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

51 minutes ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

3 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

4 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

12 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

15 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

23 hours ago