ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ:ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ‌.ಎನ್ ಶಿವಶಂಕರ ಸೂಚನೆ

10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಜೂನ್ 21 ರಂದು ನಡೆಯಲಿದ್ದು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಸಂಬಂಧ ಪೂರ್ವಭಾವಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಮಟ್ಟದ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 6:00 ಗಂಟೆಯಿಂದ 8:30 ಗಂಟೆಯವರೆಗೆ ನಡೆಯಲಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳಿಂದ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ದೇವನಹಳ್ಳಿ ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರು, ಲಘು ಉಪಹಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ತುರ್ತು ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಚಿಕಿತ್ಸಾ ಅಂಬುಲೆನ್ಸ್ ವ್ಯವಸ್ಥೆ, ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲಾ-ಕಾಲೇಜುಗಳು, ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಕಾರ್ಯಕ್ರಮ ಯಶಸ್ವಿಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬುದು 2024ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಘೋಷವಾಕ್ಯವಾಗಿದ್ದು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಸಭೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಶುಹಬುದ್ದೀನ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ಅಯುಷ್ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಖುದ್ಸಿಯ ತಸ್‌ನೀಮ್.ಎಸ್.ಎ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

5 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

6 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

18 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

21 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

22 hours ago