ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ:ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ‌.ಎನ್ ಶಿವಶಂಕರ ಸೂಚನೆ

10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಜೂನ್ 21 ರಂದು ನಡೆಯಲಿದ್ದು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಸಂಬಂಧ ಪೂರ್ವಭಾವಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಮಟ್ಟದ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 6:00 ಗಂಟೆಯಿಂದ 8:30 ಗಂಟೆಯವರೆಗೆ ನಡೆಯಲಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳಿಂದ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ದೇವನಹಳ್ಳಿ ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರು, ಲಘು ಉಪಹಾರದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ತುರ್ತು ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಚಿಕಿತ್ಸಾ ಅಂಬುಲೆನ್ಸ್ ವ್ಯವಸ್ಥೆ, ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲಾ-ಕಾಲೇಜುಗಳು, ಹಾಸ್ಟೆಲ್ ಗಳಲ್ಲಿರುವ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಕಾರ್ಯಕ್ರಮ ಯಶಸ್ವಿಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬುದು 2024ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಘೋಷವಾಕ್ಯವಾಗಿದ್ದು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಸಭೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಶುಹಬುದ್ದೀನ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ಅಯುಷ್ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ಖುದ್ಸಿಯ ತಸ್‌ನೀಮ್.ಎಸ್.ಎ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Share
Published by
Ramesh Babu

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

8 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

12 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

19 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

20 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago